6.3 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯದ ಲಾಂಛನ ಬಿಡುಗಡೆ ಮತ್ತು ಸಮವಸ್ತ್ರ ವಿತರಣೆ.

ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯದ ಲಾಂಛನ ಬಿಡುಗಡೆ ಮತ್ತು ಸಮವಸ್ತ್ರ ವಿತರಣೆ.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕಾರ್ಕಳ-ಇಲ್ಲಿನ ಬಂಡಿಮಠ ಅಯ್ಯಪ್ಪ ಮಂದಿರದ ಹಾಲ್ ನಲ್ಲಿ ಆರ್.ಸಿ‌.ಸಿ ಗುತ್ತಿಗೆದಾರರ ಸಂಘದ ಲಾಂಛನ ಮತ್ತು ಸಮವಸ್ತ್ರ ಬಿಡುಗಡೆ ಸಮಾರಂಭ ಜರುಗಿತು.
ಸಂಘದ ಮಾಜಿ ಅಧ್ಯಕ್ಷ ಸಯ್ಯದ್ ಯೂನುಸ್ ರವರ ಮೊಮ್ಮಗ,ಪ್ರಸಿದ್ಧ ಮಾಡೆಲ್
ಮಾಸ್ಟರ್ ಸಯ್ಯದ್ ಸಧಾಫ್ ಆರ್.ಸಿ.ಸಿ ಗುತ್ತಿಗೆದಾರರ ಸಂಘದ ಲಾಂಚನವನ್ನು ಹಾಗೂ ವಿನ್ಯಾಸ್ ಶ್ರೀಪತಿ ಪ್ರಭು ಸಮವಸ್ತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಆರ್.ಸಿ.ಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೋಟ ದಾಮೋದರ ಆಚಾರ್
“ಕಳೆದ 15 ವರ್ಷಗಳಿಂದ
ಆರ್.ಸಿ.ಸಿ ಸಂಘ ಉತ್ತಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ.
ಇದೀಗ ವಿನೂತನವಾಗಿ ಆಯ್ಕೆಯಾದ ಸಂಘಟನೆಯಿಂದ ಹಲವಾರು ಮಹತ್ವಾಕಾಂಕ್ಷಿ
ಯೋಜನೆಗಳನ್ನು ಹಮ್ಮಿಕೊಂಡಿದ್ದು,ಪ್ರಮುಖವಾಗಿ ಗ್ರಾಹಕರು ಗುತ್ತಿಗೆದಾರರ ನಡುವಿನ ನ್ಯಾಯಯುತ ಹೊಂದಾಣಿಕೆ ವೃದ್ಧಿಸಲು,ಕಾರ್ಮಿಕರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು,
ಕಾರ್ಮಿಕ ಇಲಾಖೆಯಿಂದ ಸರಕಾರದ ಸವಲತ್ತುಗಳು ಕಾರ್ಮಿಕರಿಗೆ ದೊರಕಿಸಲು,ಸಂಘಕ್ಕಾಗಿ ನಿವೇಶನ ಖರೀದಿಸಿ ಸ್ವತಃ ಕಟ್ಟಡ ನಿರ್ಮಾಣ,ಈ ಎಲ್ಲಾ ಯೋಚನೆ ಯೋಜನೆಗಳನ್ನು ಸಾಕಾರಗೊಳಿಸುವ ಸಲುವಾಗಿ ಮಾರ್ಚ್ 29 ರಂದು ವಿಶೇಷವಾದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದು,ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಸಹಕರಿಸಬೇಕಾಗಿ ವಿನಂತಿಸಿದರು.
ಗೌರವಾಧ್ಯಕ್ಷ ಸಯ್ಯದ್ ಯೂನುಸ್ ಶುಕ್ರವಾರ ನಡೆಯಲಿರುವ ಪಂದ್ಯಾವಳಿಗೆ
ಶುಭಹಾರೈಸಿದರು.ಸಂಘದ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು.
ಮಾಸ್ಟರ್ ಸಮರ್ಥ್ ಪ್ರಾರ್ಥನೆಗೈದರೆ,ಪ್ರಶಾಂತ್ ಆಚಾರ್ಯ ನಿರೂಪಣೆ  ಹಾಗೂ ಚಂದ್ರಶೇಖರ್ ಆಚಾರ್ಯ ಕಾರ್ಯಕ್ರಮ ಸಂಯೋಜಿಸಿದರು‌.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

1 × two =