10.1 C
London
Tuesday, April 23, 2024
Homeಭರವಸೆಯ ಬೆಳಕುಖ್ಯಾತ ವೀಕ್ಷಕ ವಿವರಣೆಗಾರ ಶಿವನಾರಾಯಣ್ ಐತಾಳ್ ಕೋಟ ಇವರಿಗೆ "ಕ್ರೀಡಾ ಕಲಾ ವಲ್ಲಭ-2021" ಪ್ರಶಸ್ತಿ

ಖ್ಯಾತ ವೀಕ್ಷಕ ವಿವರಣೆಗಾರ ಶಿವನಾರಾಯಣ್ ಐತಾಳ್ ಕೋಟ ಇವರಿಗೆ “ಕ್ರೀಡಾ ಕಲಾ ವಲ್ಲಭ-2021” ಪ್ರಶಸ್ತಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕಳೆದ 30 ವರ್ಷಗಳಿಂದ ವೀಕ್ಷಕ‌ ವಿವರಣೆಗಾರರಾಗಿ ಹಾಗೂ 20 ವರ್ಷಗಳಿಂದ ಕೆ.ಎಸ್.ಸಿ.ಎ ಅಂಗೀಕೃತ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿತ್ತಿರುವ ಹಿರಿಯ ವೀಕ್ಷಕ ವಿವರಣೆಕಾರ ಶಿವನಾರಾಯಣ್ ಐತಾಳ್ ಕೋಟ 2021 ನೇ ಸಾಲಿನ ಕ್ರೀಡಾ ಕಲಾ ವಲ್ಲಭ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಮಾರ್ಚ್ 7 ರವಿವಾರದಂದು ಬೀಡಿನ ಗುಡ್ಡೆಯಲ್ಲಿ ನಡೆದ ವಿಪ್ರ ಸಮಾಜದ ಪ್ರತಿಷ್ಟಿತ ಕ್ರಿಕೆಟ್ ಪಂದ್ಯಾವಳಿ “ಶ್ರೀ ರಾಮ‌ ಟ್ರೋಫಿ-2021” ರ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭ ‌ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಆಚಾರ್ಯ,ಕಾರ್ಯದರ್ಶಿ ರಾಜೇಶ್ ಉಪಾಧ್ಯ,ಕೋಶಾಧಿಕಾರಿ ರಾಜ್ ಕುಮಾರ್ ಉಪಾಧ್ಯ ಹಾಗೂ ‌ಕಾರ್ಯದರ್ಶಿ ಯು.ಬಿ.ಶ್ರೀನಿವಾಸ ಭಾದ್ಯ ಉಪಸ್ಥಿತರಿದ್ದರು.
ಶಿವನಾರಾಯಣ್ ಐತಾಳ್ ಕೋಟ ವಿಶಿಷ್ಟ ಶೈಲಿಯ ಬ್ಯಾಟಿಂಗ್ (ದಿಲ್ಸ್ಕೂಪ್-ಶಿವಸ್ಕೂಪ್ ಹೊಡೆತಗಳು) ಹಾಗೂ‌ ಆಫ್ ಸ್ಪಿನ್ ಎಸೆತಗಾರರಾಗಿ ಗುರುತಿಸಿಕೊಂಡು ಇಲೆವೆನ್ ಅಪ್ ಕೋಟ ತಂಡದಲ್ಲಿ ಬಹಳಷ್ಟು ವರ್ಷಗಳ ಕಾಲ‌ ಸೇವೆ ಸಲ್ಲಿಸಿದ್ದರು.90 ರ ದಶಕದ ಸಮಯದಲ್ಲಿ ಹಿರಿಯ ವೀಕ್ಷಕ ವಿವರಣೆಕಾರರು ನೇಪಥ್ಯಕ್ಕೆ ಸರಿದ ಸಂದರ್ಭ ಮೈಕ್ ಹಿಡಿದು,ಕನ್ನಡ ವೀಕ್ಷಕ ವಿವರಣೆಗೆ ಚುರುಕು ಮುಟ್ಟಿಸಿ,ಕಳೆದ 30 ವರ್ಷಗಳಿಂದ
ಟೆನ್ನಿಸ್ಬಾಲ್ ಹಾಗೂ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಾಗಿ ಕರ್ನಾಟಕ ರಾಜ್ಯದ ವಿವಿಧೆಡೆ  ವೀಕ್ಷಕ ವಿವರಣೆ ನಡೆಸಿದ್ದಾರೆ.ಮಂಗಳೂರಿನಲ್ಲಿ ನಡೆಯುವ ಪ್ರತಿಷ್ಟಿತ M.P.L ಹಾಗೂ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್  ನಲ್ಲಿ ವೀಕ್ಷಕ ವಿವರಣೆಯ ನೇತೃತ್ವ ವಹಿಸಿದ್ದರು.ಕೆ.ಎಸ್.ಸಿ.ಎ ಅಂಗೀಕೃತ ಅಂಪಾಯರ್ ಆಗಿ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು   ಯು.ಎ.ಇ ರಾಷ್ಟ್ರದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.
ಇವರು 1996 ರಲ್ಲಿ “ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ” ವನ್ನು ಸ್ಥಾಪಿಸಿ ಕ್ರಿಕೆಟ್,ಚೆಸ್ ಹಾಗೂ ವಿವಿಧ
ಕ್ರೀಡಾ ಚಟುವಟಿಕೆಗಳನ್ನು ಸಂಘಟಿಸಿದ್ದು,ಸಾಲಿಗ್ರಾಮ ಜಾತ್ರೆಯ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 + 2 =