Home #covid19 ಉಡುಪಿ-ಖ್ಯಾತ ಕರಾಟೆ ಪಟು,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ನಿಧನ.

ಉಡುಪಿ-ಖ್ಯಾತ ಕರಾಟೆ ಪಟು,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ನಿಧನ.

ಉಡುಪಿ-ಖ್ಯಾತ ಕರಾಟೆ ಪಟು,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ನಿಧನ.
ಉಡುಪಿ ಬಿಲ್ಲವ ಸಮುದಾಯದ ಯುವ ಮುಂದಾಳು,ಕರಾಟೆ ಸಂಘದ ರಾಜ್ಯಾಧ್ಯಕ್ಷ,ಕಾಂಗ್ರೆಸ್ ಮುಖಂಡ,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಅವರು ನಿಧನ ಹೊಂದಿದರು.ಅವರು ಕೆಲವು ದಿನಗಳ ಹಿಂದೆ ಕೋವಿಡ್-19 ಸೋಂಕಿಗೆ ತುತ್ತಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ತಡರಾತ್ರಿ ವಿಧಿವಶರಾಗಿದ್ದಾರೆ.
ಈ ಹಿಂದೆ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಇವರು ಗ್ರಾಮದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರೂ ಪಕ್ಷಭೇದವನ್ನು ದೂರವಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೋನ್ಸೆ ಪಂಚಾಯತ್ ನ ಸರ್ವಸದಸ್ಯರು ಅಭಿವೃದ್ಧಿ ಕಾರ್ಯದಲ್ಲಿ ಒಂದಾಗುವಂತೆ ಮಾಡಿದ್ದರು.
ಅವಿವಾಹಿತರಾಗಿದ್ದ ನಿತ್ಯಾನಂದ ಇವರು ಓರ್ವ ಉತ್ತಮ ಕರಾಟೆಪಟು.ಉಡುಪಿಯ ಒಳಕಾಡು ಶಾಲೆಯಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದರು.
ಕ್ರೀಡಾಸೇವೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವಕ್ಕೆ ಕೂಡ ಪಾತ್ರರಾಗಿದ್ದರು.ಮೃತರು ತಂದೆ,ತಾಯಿ,ಸಹೋದರಿ,ಇಬ್ಬರು ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

three − 1 =

ಉಡುಪಿ-ಖ್ಯಾತ ಕರಾಟೆ ಪಟು,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ನಿಧನ.

ಉಡುಪಿ ಬಿಲ್ಲವ ಸಮುದಾಯದ ಯುವ ಮುಂದಾಳು,ಕರಾಟೆ ಸಂಘದ ರಾಜ್ಯಾಧ್ಯಕ್ಷ,ಕಾಂಗ್ರೆಸ್ ಮುಖಂಡ,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಅವರು ನಿಧನ ಹೊಂದಿದರು.ಅವರು ಕೆಲವು ದಿನಗಳ ಹಿಂದೆ ಕೋವಿಡ್-19 ಸೋಂಕಿಗೆ ತುತ್ತಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ತಡರಾತ್ರಿ ವಿಧಿವಶರಾಗಿದ್ದಾರೆ.ಈ ಹಿಂದೆ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಇವರು ಗ್ರಾಮದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರೂ ಪಕ್ಷಭೇದವನ್ನು ದೂರವಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೋನ್ಸೆ ಪಂಚಾಯತ್ ನ ಸರ್ವಸದಸ್ಯರು ಅಭಿವೃದ್ಧಿ ಕಾರ್ಯದಲ್ಲಿ ಒಂದಾಗುವಂತೆ ಮಾಡಿದ್ದರು.ಅವಿವಾಹಿತರಾಗಿದ್ದ ನಿತ್ಯಾನಂದ ಇವರು ಓರ್ವ ಉತ್ತಮ ಕರಾಟೆಪಟು.ಉಡುಪಿಯ ಒಳಕಾಡು ಶಾಲೆಯಲ್ಲಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದರು.ಕ್ರೀಡಾಸೇವೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವಕ್ಕೆ ಕೂಡ ಪಾತ್ರರಾಗಿದ್ದರು.ಮೃತರು ತಂದೆ,ತಾಯಿ,ಸಹೋದರಿ,ಇಬ್ಬರು ಸಹೋದರರನ್ನು ಅಗಲಿದ್ದಾರೆ.

Send this to a friend