Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಟಿ.ಸಿ.ಎ ಉಡುಪಿ ವತಿಯಿಂದ ಫ್ರೆಂಡ್ಸ್ ಬೆಂಗಳೂರು ಕಪ್ ರೂವಾರಿ ರೇಣು ಗೌಡರಿಗೆ ಸನ್ಮಾನ

ಬೆಂಗಳೂರು-ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್(T.C.A) ವತಿಯಿಂದ ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟದ ಪ್ರಮುಖ ರೂವಾರಿ,ಕಳೆದ 28 ವರ್ಷಗಳಿಂದ
ರಾಜ್ಯ ರಾಷ್ಟ್ರೀಯ ಮಟ್ಟದಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ
ಫ್ರೆಂಡ್ಸ್ ಬೆಂಗಳೂರು ತಂಡದ ಮಾಲೀಕರಾದ ಶ್ರೀಯುತ ರೇಣು ಗೌಡ ಇವರನ್ನು ಗೌರವಿಸಲಾಯಿತು.
ಈ ಸಂದರ್ಭ ಟಿ‌.ಸಿ.ಎ ಅಧ್ಯಕ್ಷರಾದ ಗೌತಮ್ ಶೆಟ್ಟಿ, ಸವ್ಯಸಾಚಿ ಗ್ರೂಪ್ಸ್ ಪ್ರವರ್ತಕರಾದ ವಿಜಯ್ ಹೆಗ್ಡೆ,ಕೆ.ಪಿ.ಸತೀಶ್ ಚಕ್ರವರ್ತಿ ಕುಂದಾಪುರ,
ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ರಾಜ್ಯ ಮಟ್ಟದ ವೀಕ್ಷಕ ವಿವರಣೆಕಾರರಾದ ಪ್ರಶಾಂತ್ ಅಂಬಲಪಾಡಿ ಮತ್ತು ಶಿವನಾರಾಯಣ ಐತಾಳ್ ಕೋಟ ಉಪಸ್ಥಿತರಿದ್ದರು..

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

4 × four =