ಕ್ರಿಕೆಟ್ಹೃದಯವಂತ ರಾಬಿನ್ ಉತ್ತಪ್ಪನ ಈ ಕಥೆಯನ್ನ ಕೇಳಿದ್ದೀರಾ..?

ಹೃದಯವಂತ ರಾಬಿನ್ ಉತ್ತಪ್ಪನ ಈ ಕಥೆಯನ್ನ ಕೇಳಿದ್ದೀರಾ..?

-

- Advertisment -spot_img

ರಾಬಿನ್ ಉತ್ತಪ್ಪ ಅವರದ್ದು ಆಕರ್ಷಣೀಯ ವ್ಯಕ್ತಿತ್ವ. ತುಂಬಾ ಇಂಟ್ರೆಸ್ಟಿಂಗ್ ವ್ಯಕ್ತಿ. ಆಟದ ಬಗ್ಗೆ ಹೇಳಲೇಬೇಕಿಲ್ಲ. ಅದ್ಭುತ ಕ್ರಿಕೆಟರ್. ಅದರಾಚೆ, ಉತ್ತಪ್ಪ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಹೌದು.

ಹೊರ ಜಗತ್ತಿಗೆ ಆತ ಹೇಗೆ ಕಾಣುತ್ತಾನೋ ಗೊತ್ತಿಲ್ಲ.. ಆದರೆ ಆತನನ್ನು ಹತ್ತಿರದಿಂದ ನೋಡಿದವರಿಗೆ “ಹೃದಯವಂತ” ಎಂಬುದಂತೂ ಚೆನ್ನಾಗಿ ಗೊತ್ತು.

ಕ್ರಿಕೆಟ್ ಮೈದಾನದಲ್ಲಿ ಅದ್ಭುತ ಸಾಧನೆ ಮಾಡಿರುವ ರಾಬಿನ್ ಉತ್ತಪ್ಪ ಮೈದಾನದಾಚೆ ಮತ್ತೊಬ್ಬರ ಕಷ್ಟಕ್ಕೆ ಮಿಡಿಯುವ ವ್ಯಕ್ತಿ. ಇದಕ್ಕೆ ಸಾಕ್ಷಿ ಚಿನ್ನಸ್ವಾಮಿ ಕ್ರೀಡಾಂಗಣದ ಗ್ರೌಂಡ್ಸ್’ಮನ್’ಗಳಿಗೆ ಅವರು ಮಾಡಿರುವ ಸಹಾಯ.

ರಾಬಿನ್ ಉತ್ತಪ್ಪ ಅವರು ಕರ್ನಾಟಕ ತಂಡದ ಪರ ಆಡುತ್ತಿದ್ದಾಗ ಕನಿಷ್ಠ ಆರೇಳು ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದ ಗ್ರೌಂಡ್ಸ್’ಮನ್’ಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣಕಾಸಿನ ಸಹಾಯ ಮಾಡಿದ್ದಾರೆ.

ತಮಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಗಲೂ ರಾತ್ರಿ ಕಷ್ಟ ಪಟ್ಟು ಕೆಲಸ ಮಾಡುವ ಗ್ರೌಂಡ್ಸ್’ಮನ್’ಗಳೆಂದರೆ ಉತ್ತಪ್ಪ ಅವರಿಗೆ ವಿಶೇಷ ಪ್ರೀತಿ.

ಅವರಲ್ಲಿ ಒಂದಷ್ಟು ಮಂದಿಯ ಮಕ್ಕಳ ಬಗ್ಗೆ ವಿಚಾರಿಸಿ ಅವರ ವಿದ್ಯಾಭ್ಯಾಸಕ್ಕೆ ನೆರವಾದವರು ರಾಬಿನ್ ಉತ್ತಪ್ಪ. ಮಕ್ಕಳು ಯಾವ ಶಾಲೆಗಳಲ್ಲಿ ಓದುತ್ತಿದ್ದಾರೆ ಎಂಬುದರ ಮಾಹಿತಿ ಪಡೆದು, ಪ್ರತೀ ವರ್ಷ School feesನ್ನು ನೇರವಾಗಿ ಶಾಲೆಗೆ ತಲುಪಿಸಿ ಬಿಡುತ್ತಿದ್ದರು. ಕರ್ನಾಟಕ ಪರ ಆಡುತ್ತಿದ್ದಾಗ ಪ್ರತೀ ವರ್ಷ ತಪ್ಪದೆ ನಮ್ಮ ಮಕ್ಕಳ ಸ್ಕೂಲ್ ಫೀಸ್ ಕಟ್ಟಿದವರು ಉತ್ತಪ್ಪ ಎಂದು ಚಿನ್ನಸ್ವಾಮಿ ಕ್ರೀಡಾಂಗಣದ ಗ್ರೌಂಡ್ಸ್’ಮನ್ ಒಬ್ಬರು ಹೇಳಿದ್ದರು. ಈ ವಿಚಾರವನ್ನು ಎಲ್ಲಿಯೂ, ಯಾರಲ್ಲೂ ಹೇಳಬಾರದೆಂದು ಗ್ರೌಂಡ್ಸ್’ಮನ್’ಗಳಿಗೆ ರಾಬಿನ್ ಉತ್ತಪ್ಪ ತಾಕೀತು ಮಾಡಿದ್ದರಂತೆ.

ಕ್ರಿಕೆಟಿಗರು ಉತ್ತಮವಾಗಿ ಬ್ಯಾಟಿಂಗ್, ಬೌಲಿಂಗ್ ಮಾಡಬೇಕೆಂದರೆ ಪಿಚ್ ಉತ್ತಮವಾಗಿರಬೇಕು. ಅಂತಹ ಉತ್ತಮ ಪಿಚ್’ಗಳನ್ನು ನಿರ್ಮಿಸುವವರು ಗ್ರೌಂಡ್ಸ್’ಮನ್’ಗಳು. ಆ ಗ್ರೌಂಡ್ಸ್’ಮನ್’ಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವು ನೀಡುತ್ತಾ ಬಂದಿದ್ದ ರಾಬಿನ್ ಉತ್ತಪ್ಪ ನಿಜಕ್ಕೂ ಹೃದಯವಂತನೇ ಸರಿ.

LEAVE A REPLY

Please enter your comment!
Please enter your name here

2 + 2 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you