16.6 C
London
Saturday, May 18, 2024
Homeಕ್ರಿಕೆಟ್ರಾಕ್ ಯೂತ್ ಕ್ಲಬ್ ತುಮಕೂರು-ನೂತನ ಪದಾಧಿಕಾರಿಗಳ ಆಯ್ಕೆ

ರಾಕ್ ಯೂತ್ ಕ್ಲಬ್ ತುಮಕೂರು-ನೂತನ ಪದಾಧಿಕಾರಿಗಳ ಆಯ್ಕೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕ್ರೀಡಾ ಸಂಸ್ಥೆಯೊಂದು ತನ್ನ ಎಲ್ಲಾ ಸದಸ್ಯರ ಸಭೆ ಕರೆದು ನಾಯಕನನ್ನು ಆಯ್ಕೆ ಮಾಡಿರುವ ಅತಿ ವಿರಳ ಪ್ರಕರಣಗಳಲ್ಲಿ ಇದು ಒಂದಾಗಿದ್ದು, ಕಲೆ,ಕ್ರೀಡೆ,ಸಾಹಿತ್ಯ,ಪತ್ರಿಕೋದ್ಯಮ ಹೀಗೆ ಹಲವು ಆಯಾಮಗಳಲ್ಲಿ ಗುರುತಿಸಿಕೊಂಡಿರುವ ರಾಕ್ ಯೂತ್ ಕ್ಲಬ್ 2020-21 ನೇ ಸಾಲಿನ ನಾಯಕರನ್ನಾಗಿ ಪ್ರದೀಪ್ ಕುಮಾರ್ ಶಂಕು,ಉಪನಾಯಕನಾಗಿ ಭರತ್ ಹಾಗೂ ಫೀಲ್ಡ್ ಕ್ಯಾಪ್ಟನ್ ಆಗಿ ಅಜೇಯ್ ಆಯ್ಕೆಯಾಗಿದ್ದಾರೆ.
ತುಮಕೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಕ್ ಯೂತ್ ಕ್ಲಬ್ ನ ಹಾಲಿ ಸಂಯೋಜಕರು,ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು(ರಾಕ್ ರಾಜು),ಪ್ರಧಾನ ಕಾರ್ಯದರ್ಶಿ ರಾಕ್ ಲೈನ್ ರವಿಕುಮಾರ್,ಕ್ಲಬ್ ನ ಉಪಾಧ್ಯಕ್ಷ ಬೆಳ್ಳಿ ಲೋಕೇಶ್ ಸೇರಿದಂತೆ ಹಲವಾರು ಹಿರಿಯ ಕ್ರೀಡಾಪಟುಗಳು ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ರಾಕ್ ರಾಜು ರವರು,1989 ರಲ್ಲಿ ಆರಂಭವಾದ ಕ್ರೀಡಾ ಕ್ಲಬ್ ಹಲವಾರು ಎಡರು ತೊಡರುಗಳ ನಡುವೆ ಒಂದು ದಿನವೂ ಅಭ್ಯಾಸ ನಿಲ್ಲಿಸದೆ,ಇದುವರೆಗೂ ನಿರಂತರವಾಗಿ ಮುನ್ನಡೆಸಿಕೊಂಡು ಬಂದಿದೆ.ನಮ್ಮ ನಂತರದ ಪೀಳಿಗೆಗೂ ನಾಯಕತ್ವದ ಪರಿಚಯವಾಗಬೇಕು,ಅವರು ತಂಡವನ್ನು ಮುನ್ನಡೆಸುವ ಚಾಕಚಕ್ಯತೆ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ನಾಯಕನ ಆಯ್ಕೆ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ರಾಕ್ ಯೂತ್ ಕ್ಲಬ್ ನ ಉಪಾಧ್ಯಕ್ಷ ಬೆಳ್ಳಿ ಲೋಕೇಶ್ ಮಾತನಾಡಿ,ನಮ್ಮ ತಂಡ ಇಡೀ ರಾಜ್ಯದಲ್ಲಿಯೇ ಶಿಸ್ತು ಮತ್ತು ತಾಳ್ಮೆಗೆ ಹೆಸರಾಗಿದೆ,ಯುವ ಪ್ರತಿಭೆಗಳಿಗೆ ತಂಡ ವೇದಿಕೆ ಕಲ್ಪಿಸಿಕೊಡಬೇಕೆಂಬ ಆಶಯ ವ್ಯಕ್ತ ಪಡಿಸಿದರು.
ಈ ವೇಳೆ ತಂಡದ ಮೆನೇಜರ್ ರಾಕ್ ರವಿ ಹಾಗೂ ಹಿರಿಯ ಕ್ರೀಡಾಪಟುಗಳಾದ ರವಿ,ಪ್ರದೀಪ್ ಕುಮಾರ್,ಗುರುಪ್ರಸಾದ್ ಸೇರಿದಂತೆ ಹಲವರು ನೂತನ ನಾಯಕನಿಗೆ ಶುಭಹಾರೈಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

12 − 9 =