ಕ್ರಿಕೆಟ್ಬೆಂಗಳೂರು-"ಗ್ರಾಮಾಂತರ ಯುವಕರಿಗೆ ಉತ್ತೇಜನ ನೀಡುವಲ್ಲಿ ಚಾಂಪಿಯನ್ಸ್ ಲೀಗ್ ಯಶಸ್ವಿಯಾಗಲಿ"-ಶಾಸಕ ಎಸ್.ಆರ್.ವಿಶ್ವನಾಥ್.

ಬೆಂಗಳೂರು-“ಗ್ರಾಮಾಂತರ ಯುವಕರಿಗೆ ಉತ್ತೇಜನ ನೀಡುವಲ್ಲಿ ಚಾಂಪಿಯನ್ಸ್ ಲೀಗ್ ಯಶಸ್ವಿಯಾಗಲಿ”-ಶಾಸಕ ಎಸ್.ಆರ್.ವಿಶ್ವನಾಥ್.

-

- Advertisment -spot_img
“ದೇಶದ ಭವಿಷ್ಯ ಯುವ ಸಮಾಜದ ಕೈಯ್ಯಲ್ಲಿದೆ.ಸೃಷ್ಟಿ ಲೋಕೇಶ್ ರವರು ಯುವ ಪ್ರತಿಭೆಗಳಿಗೆ ಕ್ರೀಡಾಕೂಟವನ್ನು ಸಂಘಟಿಸಿ,ಗ್ರಾಮಾಂತರ  ಪ್ರತಿಭೆಗಳಿಗೆ ಉತ್ತಮ ಭವಿಷ್ಯ ನೀಡುವಲ್ಲಿ ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ.ಮುಂದಿನ ದಿನಗಳಲ್ಲಿ ದಾಸನಪುರ ಹೋಬಳಿಯಲ್ಲಿ ಸರಕಾರಿ ಜಮೀನುಗಳಲ್ಲಿ 2-3 ಎಕರೆ ಜಾಗ ಸರಕಾರಿ ಮೈದಾನ‌ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದ್ದೇನೆ” ಎಂದು ಯಲಹಂಕ ಶಾಸಕರು,ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಹೇಳಿದರು.
ಇವರು ಸೃಷ್ಟಿ ಲೋಕೇಶ್ ರವರ ಸಾರಥ್ಯದಲ್ಲಿ ಬೆಂಗಳೂರಿನ ಮಾದವಾರ ನೈಸ್ ಗ್ರೌಂಡ್ ನಲ್ಲಿ ನಡೆಯುತ್ತಿರುವ 1 ವಾರಗಳ ಕ್ರಿಕೆಟ್ ಹಬ್ಬ “ಚಾಂಪಿಯನ್ಸ್ ಲೀಗ್-ಕೆ.ಟಿ.ಪಿ.ಎಲ್-2022” ಪಂದ್ಯಾಟವನ್ನು ದೀಪ ಬೆಳಗಿಸಿ,ಶಾಂತಿ-ಸಾಮರಸ್ಯದ ಸಂಕೇತ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ಟೂರ್ನಮೆಂಟ್ ನ ಸಂಘಟಕರಾದ ಸೃಷ್ಟಿ ಲೋಕೇಶ್, ಯಲಹಂಕ ಗ್ರಾಮಾಂತರ ಮಂಡಳಿ ಅಧ್ಯಕ್ಷ ಹನುಮಯ್ಯ,ಉದ್ಯಮಿ ಅಭಿನಾಷ್ ಗಣೇಶ್,
ಅಡಕಮಾರನಹಳ್ಳಿ ಯುವ ಮುಖಂಡರು ಶಿವಕುಮಾರ್,ಉದ್ಧಂಡಯ್ಯ ಮಾಚಾವಳಿ,ಮಾದನನಾಯಕನ ಹಳ್ಳಿ ವೃತ್ತ ನಿರೀಕ್ಷಕ ಮಂಜುನಾಥ್,ಶ್ರೀನಿವಾಸ್ ಮೂರ್ತಿ ಸ್ಟೋವ್ನೆಸ್ಟ್,ಯುವ ಮುಖಂಡ ಆಕಾಶ್ ಗೌಡ,ಚಿಕ್ಕಣ್ಣ,ಸಿದ್ಧರಾಜು
ಮತ್ತು 10 ತಂಡಗಳ ಮಾಲೀಕರು ಉಪಸ್ಥಿತರಿದ್ದರು.
ವಿಶೇಷ ಆಕರ್ಷಣೆ ರೂಪದಲ್ಲಿ ಪ್ರಸಿದ್ಧ ರ‍್ಯಾಪರ್ ಚಂದನ್ ಶೆಟ್ಟಿ  ಮತ್ತು ನಿರ್ದೇಶಕ ಮತ್ತು ಹಾಸ್ಯನಟರು ಸುಜಯ್ ಶಾಸ್ತ್ರಿ ಪಂದ್ಯಾವಳಿಯ ಮೆರುಗು ಹೆಚ್ಚಿಸಿದರು.
ಉದ್ಘಾಟನಾ ಪಂದ್ಯದಲ್ಲಿ ಶಾರದಾಂಬಾ ಕ್ರಿಕೆಟರ್ಸ್,ಎರಡನೇ ಪಂದ್ಯದಲ್ಲಿ ಮೆಮ್ಮಿ ಸ್ಪೋರ್ಟ್ಸ್ ಕ್ಲಬ್,ಮೂರನೇ ಪಂದ್ಯದಲ್ಲಿ ಕ್ರಿಕೆಟ್ ನಕ್ಷತ್ರ,ಅಂತಿಮ ಪಂದ್ಯದಲ್ಲಿ ಜಿ.ಜೆ ಆರ್ಮಿ ಗೆಲುವು ಸಾಧಿಸಿದರು.
ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮವನ್ನು ಹಿರಿಯ ವೀಕ್ಷಕ ವಿವರಣೆಕಾರರಾದ ಶಿವನಾರಾಯಣ್ ಐತಾಳ್ ಕೋಟ ನಿರೂಪಿಸಿದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × four =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you