ಕ್ರಿಕೆಟ್ಜೈ ಕರ್ನಾಟಕ ತಂಡದ ಸಚಿನ್ ಮಹಾದೇವ್ ಅವರಿಗೆ ಪಿತೃ ವಿಯೋಗ

ಜೈ ಕರ್ನಾಟಕ ತಂಡದ ಸಚಿನ್ ಮಹಾದೇವ್ ಅವರಿಗೆ ಪಿತೃ ವಿಯೋಗ

-

- Advertisment -spot_img

ಜೈ ಕರ್ನಾಟಕ ಬೆಂಗಳೂರು ಸಚಿನ್ ಮಹಾದೇವ್ ಅವರಿಗೆ ಪಿತೃ ವಿಯೋಗ

ರಾಜ್ಯದ ಟೆನಿಸ್ ಬಾಲ್ ಕ್ರಿಕೆಟ್ ನ ಹಿರಿಯ ಸಂಸ್ಥೆ ಜೈ ಕರ್ನಾಟಕ ಬೆಂಗಳೂರು ತಂಡದ ಖ್ಯಾತ ಆಲ್ರೌಂಡರ್ ಆಟಗಾರ ಸಚಿನ್ ಮಹಾದೇವ್ ಅವರ ತಂದೆ ಎಚ್. ಟಿ ಮಹಾದೇವ್ (70 ವರ್ಷ) ಇಂದು ಅಲ್ಪಕಾಲದ ಅಸೌಖ್ಯದಿಂದ ಇಂದು ರಾತ್ರಿ ಅಸುನೀಗಿದರು.

ಹೆಚ್.ಟಿ ಮಹಾದೇವ್ ಇವರು ಕರ್ನಾಟಕ ರಾಜ್ಯದ ಅಥ್ಲೆಟಿಕ್ ಅಸೋಸಿಯೇಷನ್ ಇದರ ಉಪಾಧ್ಯಕ್ಷರಾಗಿದ್ದರು. ಭಾರತೀಯ ರೈಲ್ವೇ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು.

ಅತ್ಯಂತ ಉತ್ಸಾಹಿ ವ್ಯಕ್ತಿತ್ವದ ಮಹಾದೇವರವರು ಸಂಘಟನಾ ಚತುರರು,ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿ ಅನೇಕ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡ ಸಾಧಕರು, ಮಾತ್ರವಲ್ಲದೆ ಸರ್ವರಿಗೂ ಸ್ಫೂರ್ತಿದಾತರಾಗಿದ್ದರು. ಇವರ ಅಗಲುವಿಕೆ ಆತ್ಮೀಯ ವಲಯಕ್ಕೆ, ಹಾಗೂ ಕುಟುಂಬವರ್ಗಕ್ಕೆ ತುಂಬಲಾರದ ನಷ್ಟ. ಶ್ರೀಯುತರು ಪತ್ನಿ, ಓರ್ವ ಪುತ್ರಿ ಹಾಗೂ ಈರ್ವರು ಪುತ್ರರೊಂದಿಗೆ ಸರಳ ಸಜ್ಜನ ಜೀವನ ನಡೆಸಿದವರು.

ಅಗಲಿದ ದಿವ್ಯಾತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ,
ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸ್ಪೋರ್ಟ್ಸ್ ಕನ್ನಡ ರಾಜ್ಯ ಟೆನಿಸ್ ಕ್ರಿಕೆಟ್, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಪ್ರಾರ್ಥಿಸುತ್ತೇವೆ.

ಅರಸೀಕೆರೆ ಮಹದೇವಣ್ಣನವರು ದೈವಾಧೀನರಾಗಿದ್ದಾರೆ. ಶನಿವಾರ ಬೆಳಿಗ್ಗೆ 6 ರಿಂದ 9.30 ರ ವರೆಗೆ ಅರಸೀಕೆರೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಅವರ ಸ್ವಗ್ರಾಮ ಹೊನ್ನೇನಹಳ್ಳಿಗೆ ಕರೆತರಲಾಗುವುದೆಂದು ಕುಟುಂಬ ವರ್ಗ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

5 × two =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you