ಕ್ರಿಕೆಟ್SAFF ಚಾಂಪಿಯನ್‌ಶಿಪ್: ಕುವೈತ್ ಅನ್ನು ಸೋಲಿಸುವ ಮೂಲಕ 9 ನೇ ಬಾರಿ...

SAFF ಚಾಂಪಿಯನ್‌ಶಿಪ್: ಕುವೈತ್ ಅನ್ನು ಸೋಲಿಸುವ ಮೂಲಕ 9 ನೇ ಬಾರಿ ಪ್ರಶಸ್ತಿಯನ್ನು ಗೆದ್ದುಕೊಂಡ ಭಾರತ

-

- Advertisment -spot_img
ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂನಲ್ಲಿ ಭಾರತ ಮತ್ತು ಕುವೈತ್ ನಡುವಿನ SAFF ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ರೋಚಕವಾಗಿ ಕೊನೆಗೊಂಡಿತು. ರೋಚಕ ಸುತ್ತಿನ ಪೆನಾಲ್ಟಿ ಶೂಟೌಟ್‌ನಲ್ಲಿ ಪಂದ್ಯವು 5-4 ರಿಂದ ಭಾರತದ ಪರವಾಗಿ ಕೊನೆಗೊಂಡಿತು.
ಇದರೊಂದಿಗೆ ಭಾರತ ತಂಡ ಈ ಟೂರ್ನಿಯಲ್ಲಿ 9ನೇ ಬಾರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಈ ಟೂರ್ನಿಯ ಚೊಚ್ಚಲ ತಂಡವಾಗಿರುವ ಕುವೈತ್‌ನ ಆಟವನ್ನು ಮೆಚ್ಚಲೇಬೇಕು.
ಫಿಫಾ   ರ‍್ಯಾಂಕಿಂಗ್‌ನಲ್ಲಿ  100ನೇ ಸ್ಥಾನಕ್ಕೆ ಬಂದಿದ್ದ ಟೀಂ ಇಂಡಿಯಾ 141ನೇ ಸ್ಥಾನದಲ್ಲಿರುವ ಕುವೈತ್ ಎದುರು ಹೋರಾಟಕ್ಕೆ ನಿಂತಿತ್ತು. ಇದಕ್ಕೂ ಮುನ್ನ ಭಾರತ ಗ್ರೂಪ್ ಹಂತದಲ್ಲಿ ಕುವೈತ್ ವಿರುದ್ಧ 1-1 ಡ್ರಾ ಮಾಡಿಕೊಂಡಿತ್ತು. ಎ ಗುಂಪಿನಲ್ಲಿ ಪಾಕಿಸ್ತಾನ ಮತ್ತು ನೇಪಾಳವನ್ನು ಸೋಲಿಸುವ ಮೂಲಕ ಭಾರತ ಎರಡನೇ ಸ್ಥಾನ ಪಡೆದುಕೊಂಡಿತ್ತು. ಕುವೈತ್ ಮೊದಲ ಸ್ಥಾನದಲ್ಲಿತ್ತು.
ಅಂತಿಮ ಪಂದ್ಯದಲ್ಲಿ ಉಭಯ ತಂಡಗಳು ಮೊದಲಾರ್ಧದಲ್ಲಿ 1-1 ಗೋಲು ಗಳಿಸಿದರೂ ನಂತರ ಯಾವುದೇ ಗೋಲು ದಾಖಲಾಗಲಿಲ್ಲ. 90 ನಿಮಿಷಗಳ ಆಟದ ನಂತರ, ಹೆಚ್ಚುವರಿ ಸಮಯವನ್ನು ತಲುಪಿದ ಆಟದಲ್ಲಿ ಯಾವುದೇ ಗೋಲು ಇರಲಿಲ್ಲ, ಆದ್ದರಿಂದ ಪಂದ್ಯದ ಫಲಿತಾಂಶವು ಪೆನಾಲ್ಟಿ ಶೂಟೌಟ್ ಮೂಲಕ ಬಂದಿತು.
ಶಬೀಬ್ ಅಲ್ ಖಲೀದಿ 14ನೇ ನಿಮಿಷದಲ್ಲಿ ಗೋಲು ಬಾರಿಸಿ ತಂಡದ ಖಾತೆ ತೆರೆದಾಗ ಕುವೈತ್‌ಗೆ ಪಂದ್ಯ ಪ್ರಬಲವಾಗಿ ಆರಂಭವಾಯಿತು. ಆದರೆ 38ನೇ ನಿಮಿಷದಲ್ಲಿ ಲಾಲಿಯನ್‌ಜುವಾಲಾ ಚಾಂಗ್ಟೆ ಬಾರಿಸಿದ ಗೋಲಿನ ನೆರವಿನಿಂದ ಭಾರತ ಮೊದಲಾರ್ಧದಲ್ಲಿ 1-1ರಲ್ಲಿ ಸಮಬಲ ಸಾಧಿಸಿತು. ಈ ಸ್ಕೋರ್‌ ಪಂದ್ಯದುದ್ದಕ್ಕೂ ಮುಂದುವರೆಯಿತು.
*ಪೆನಾಲ್ಟಿ ಶೂಟೌಟ್‌ನಲ್ಲಿ ಕೊನೆಗೊಂಡ ರೋಚಕ ಫೈನಲ್*
ಪೆನಾಲ್ಟಿ ಶೂಟೌಟ್‌ನ ಆರಂಭದಲ್ಲಿ ಕುವೈತ್ ಮತ್ತು ಭಾರತ ತಲಾ ಐದು ಹಿಟ್‌ಗಳಲ್ಲಿ 4-4 ರಿಂದ ಸಮಬಲಗೊಂಡವು, ಆದರೆ ಭಾರತದ ಗೋಲ್‌ಕೀಪರ್ ಗುರುಪ್ರೀತ್ ಸಿಂಗ್ ಸಂಧು ಮತ್ತೊಮ್ಮೆ ನೆರವಿಗೆ ಬಂದರು. ಕುವೈತ್ ತಂಡದ ನಾಯಕನನ್ನು ಗೋಲ್ ಪೋಸ್ಟ್ ಗೆ ತಾಗದಂತೆ ತಡೆದು ಭಾರತವನ್ನು ಚಾಂಪಿಯನ್ ಮಾಡಿದರು.
ಇದಕ್ಕೂ ಮುನ್ನ ಹಾಲಿ ಚಾಂಪಿಯನ್ ಭಾರತ ಕಳೆದ ಆವೃತ್ತಿಯಲ್ಲಿ ನೇಪಾಳವನ್ನು 2-0 ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದು, ಈ ಬಾರಿ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
🔴ಛೆಟ್ರಿ ಬಳಗಕ್ಕೆ ಬಿಗ್ ಕಂಗ್ರ್ಯಾಟ್ಸ್…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen + six =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you