Categories
ಕ್ರಿಕೆಟ್

ಸಾಗರ್ ಭಂಡಾರಿ ಸಾಹಸ- ಕನ್ನಡ ರಾಜ್ಯೋತ್ಸವ ಕಪ್ ಫ್ರೆಂಡ್ಸ್ ಬೆಂಗಳೂರು ತಂಡಕ್ಕೆ

ಡಾ|ವಿಷ್ಣು ಕ್ರಿಕೆಟರ್ಸ್ ಬೆಂಗಳೂರಿನ ತಂಡ ಜಯನಗರ 1 ನೇ ಬ್ಲಾಕ್ ನ ಮಾಧವನ್ ಪಾರ್ಕ್ (ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ 2 ದಿನಗಳ ಹಗಲಿನ ಪಂದ್ಯಾಕೂಟ ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಗೆದ್ದುಕೊಂಡಿದೆ.

ಲೀಗ್ ಹಂತದ ಪಂದ್ಯಗಳ ಬಳಿಕ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು ತಂಡ ನ್ಯಾಶ್ ಬೆಂಗಳೂರನ್ನು ಹಾಗೂ ಬೆಸ್ಟ್ ಇಲೆವೆನ್ ತಂಡ ವಿಷ್ಣು ಸೇನಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದರು.

ಫೈನಲ್ ನಲ್ಲಿ ಫ್ರೆಂಡ್ಸ್ ತಂಡ ಬೆಸ್ಟ್ ಇಲೆವೆನ್ ತಂಡವನ್ನು ಮಣಿಸಿ ಪ್ರಥಮ ಪ್ರಶಸ್ತಿಯ ರೂಪದಲ್ಲಿ 50,000 ನಗದು ಹಾಗೂ ರನ್ನರ್ಸ್ ಬೆಸ್ಟ್ ಇಲೆವೆನ್ 25,000 ನಗದು ಜೊತೆಗೆ ಆಕರ್ಷಕ ಟ್ರೋಫಿಗಳನ್ನು ಪಡೆದರು.

ಪಂದ್ಯಾಕೂಟದುದ್ದಕ್ಕೂ ಸರ್ವಾಂಗೀಣ ಪ್ರದರ್ಶನ ತೋರಿದ ಆಲ್ ರೌಂಡರ್ ಸಾಗರ್ ಭಂಡಾರಿ ಎದುರಾಳಿಗಳ ಗೆಲುವಿನ ಕನಸನ್ನು ನುಚ್ಚುನೂರುಗೈದರು. ದಾಂಡಿಗತನದಲ್ಲಿ ಭರ್ಜರಿ ಬೌಂಡರಿ, ಸಿಕ್ಸರ್ ಗಳ ಮೂಲಕ ರನ್ ಹೊಳೆ ಹರಿಸಿ,ಗರಿಷ್ಟ ವಿಕೆಟ್ ಪಡೆದು ಅರ್ಹವಾಗಿ‌‌ ಸರಣಿ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

ಈ ಪಂದ್ಯಾಕೂಟದ ನೇರ ಪ್ರಸಾರ್ “ಕ್ರಿಕ್ ಸೇ” ಯೂ ಟ್ಯೂಬ್ ಚಾನೆಲ್ ಬಿತ್ತರಿಸಿತ್ತು.

ಆರ್.ಕೆ‌ ಆಚಾರ್ಯ ಕೋಟ

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

4 + 13 =