6 C
London
Wednesday, April 24, 2024
Homeಕ್ರಿಕೆಟ್ಸಾಗರ್ ಭಂಡಾರಿ ಸಾಹಸ- ಕನ್ನಡ ರಾಜ್ಯೋತ್ಸವ ಕಪ್ ಫ್ರೆಂಡ್ಸ್ ಬೆಂಗಳೂರು ತಂಡಕ್ಕೆ

ಸಾಗರ್ ಭಂಡಾರಿ ಸಾಹಸ- ಕನ್ನಡ ರಾಜ್ಯೋತ್ಸವ ಕಪ್ ಫ್ರೆಂಡ್ಸ್ ಬೆಂಗಳೂರು ತಂಡಕ್ಕೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಡಾ|ವಿಷ್ಣು ಕ್ರಿಕೆಟರ್ಸ್ ಬೆಂಗಳೂರಿನ ತಂಡ ಜಯನಗರ 1 ನೇ ಬ್ಲಾಕ್ ನ ಮಾಧವನ್ ಪಾರ್ಕ್ (ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ 2 ದಿನಗಳ ಹಗಲಿನ ಪಂದ್ಯಾಕೂಟ ರೇಣು ಗೌಡರ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಗೆದ್ದುಕೊಂಡಿದೆ.

ಲೀಗ್ ಹಂತದ ಪಂದ್ಯಗಳ ಬಳಿಕ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು ತಂಡ ನ್ಯಾಶ್ ಬೆಂಗಳೂರನ್ನು ಹಾಗೂ ಬೆಸ್ಟ್ ಇಲೆವೆನ್ ತಂಡ ವಿಷ್ಣು ಸೇನಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದರು.

ಫೈನಲ್ ನಲ್ಲಿ ಫ್ರೆಂಡ್ಸ್ ತಂಡ ಬೆಸ್ಟ್ ಇಲೆವೆನ್ ತಂಡವನ್ನು ಮಣಿಸಿ ಪ್ರಥಮ ಪ್ರಶಸ್ತಿಯ ರೂಪದಲ್ಲಿ 50,000 ನಗದು ಹಾಗೂ ರನ್ನರ್ಸ್ ಬೆಸ್ಟ್ ಇಲೆವೆನ್ 25,000 ನಗದು ಜೊತೆಗೆ ಆಕರ್ಷಕ ಟ್ರೋಫಿಗಳನ್ನು ಪಡೆದರು.

ಪಂದ್ಯಾಕೂಟದುದ್ದಕ್ಕೂ ಸರ್ವಾಂಗೀಣ ಪ್ರದರ್ಶನ ತೋರಿದ ಆಲ್ ರೌಂಡರ್ ಸಾಗರ್ ಭಂಡಾರಿ ಎದುರಾಳಿಗಳ ಗೆಲುವಿನ ಕನಸನ್ನು ನುಚ್ಚುನೂರುಗೈದರು. ದಾಂಡಿಗತನದಲ್ಲಿ ಭರ್ಜರಿ ಬೌಂಡರಿ, ಸಿಕ್ಸರ್ ಗಳ ಮೂಲಕ ರನ್ ಹೊಳೆ ಹರಿಸಿ,ಗರಿಷ್ಟ ವಿಕೆಟ್ ಪಡೆದು ಅರ್ಹವಾಗಿ‌‌ ಸರಣಿ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.

ಈ ಪಂದ್ಯಾಕೂಟದ ನೇರ ಪ್ರಸಾರ್ “ಕ್ರಿಕ್ ಸೇ” ಯೂ ಟ್ಯೂಬ್ ಚಾನೆಲ್ ಬಿತ್ತರಿಸಿತ್ತು.

ಆರ್.ಕೆ‌ ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

19 − sixteen =