Categories
ಕ್ರಿಕೆಟ್

ಸಾಗರ-ಕರಾವಳಿ ಟ್ರೋಫಿ-2021 ಕರಾವಳಿ ಪ್ರೀಮಿಯರ್ ಲೀಗ್

ಸಾಗರ ಪರಿಸರದ ಯುವ ಕ್ರಿಕೆಟಿಗರಾದ ಉದಯ್ ಮೊಗವೀರ,ಅಕ್ಷಯ್,ಮಹೇಶ್ ಆಚಾರ್ಯ,ರಾಘು ಮೊಗವೀರ ಇವರೆಲ್ಲರ ಸಾರಥ್ಯದಲ್ಲಿ ಗೋಪಾಲಗೌಡ ಕ್ರೀಡಾಂಗಣದಲ್ಲಿ
ಜನವರಿ 29,30 ಮತ್ತು 31 ರಂದು ಕರಾವಳಿ ಪ್ರೀಮಿಯರ್ ಲೀಗ್-2021(ಕರಾವಳಿ ಟ್ರೋಫಿ)ಪಂದ್ಯಾವಳಿ ಆಯೋಜಿಸಲಾಗಿದೆ.
ಸಾಗರದಲ್ಲೇ ಪ್ರಪ್ರಥಮ ಬಾರಿಗೆ ವಿಶಿಷ್ಟ ಮಾದರಿಯ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದ್ದು
ವಿಶೇಷವಾಗಿ ಕರಾವಳಿ ಪರಿಸರದ ಆಟಗಾರರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.ಈ ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 1,00,001 ನಗದು,ದ್ವಿತೀಯ ಸ್ಥಾನಿ 50,001  ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

12 − 2 =