Categories
ಕ್ರಿಕೆಟ್

ಸಹನಾ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ 2 ನೇ ಬಾರಿಗೆ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ

ಶಿವಮೊಗ್ಗ-ಮೂರೂವರೆ ದಶಕಗಳ ಇತಿಹಾಸದ  ಶಿವಮೊಗ್ಗ ಪರಿಸರದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ 2 ನೇ ಬಾರಿಗೆ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ “ಸಹನಾ ಟ್ರೋಫಿ-2023” ಆಯೋಜಿಸಲಾಗಿದೆ.
ಮಾರ್ಚ್ ದಿನಾಂಕ 3,4 ಮತ್ತು 5 ರಂದು ಗೋಪಾಳ‌ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾಟದಲ್ಲಿ 8 ರಾಜ್ಯ ಮಟ್ಟದ ತಂಡಗಳಿಗೆ ಹಾಗೂ ಹರಾಜು ಪ್ರಕ್ರಿಯೆ ಮೂಲಕ ಆಯ್ಕೆಯಾದ ಆಟಗಾರರಿಂದ ಕೂಡಿದ ಮಲೆನಾಡು ಭಾಗದ 8 ತಂಡಗಳು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಥಮ‌ ಬಹುಮಾನ 2 ಲಕ್ಷ,ದ್ವಿತೀಯ ಬಹುಮಾನ 1 ಲಕ್ಷ  ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ ಹಾಗೂ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನಿರ್ವಹಿಸಿದ ಆಟಗಾರರಿಗೆ ವಿಶೇಷ ಉಡುಗೊರೆ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ ವೆಂಕಟೇಶ್-9844158684, ಗಿರೀಶ್-8310685126,ರಾಘು(ಟೊಪ್ಪಿ)-997215
8988 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
M ಸ್ಪೋರ್ಟ್ಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರಪ್ರಸಾರ ಬಿತ್ತರಗೊಳ್ಳಲಿದೆ…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

three × four =