ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಸಾಯಿ ಸ್ಟ್ರೈಕರ್ಸ್ ಪೊಲಿಪು ಮಡಿಲಿಗೆ ಇಂಡಿಪೆಂಡೆನ್ಸ್ ಟ್ರೋಫಿ

ಸಾಯಿ ಸ್ಟ್ರೈಕರ್ಸ್ ಪೊಲಿಪು ಮಡಿಲಿಗೆ ಇಂಡಿಪೆಂಡೆನ್ಸ್ ಟ್ರೋಫಿ

-

- Advertisment -spot_img
ಉಡುಪಿ: ರಾಮದೂತ ವ್ಯಾಯಾಮ ಶಾಲೆಯ ಅಂಗಸಂಸ್ಥೆ  ಕುತ್ಪಾಡಿ ಫ್ರೆಂಡ್ಸ್, ಕುತ್ಪಾಡಿ ಇವರ ಆಶ್ರಯದಲ್ಲಿ 13 ಆಗಸ್ಟ್,  ಭಾನುವಾರದಂದು ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ”ಇಂಡಿಪೆಂಡೆನ್ಸ್ ಟ್ರೋಫಿ-2023” ಉದ್ಯಾವರ ಪಂಚಾಯತ್ ಮೈದಾನದಲ್ಲಿ ನಡೆಯಿತು.
ದಿವಂಗತ ನವೀನ್ ಆಚಾರ್ಯ ಇವರ ಸ್ಮರಣಾರ್ಥವಾಗಿಈ ಟೂರ್ನಮೆಂಟ್ ನಡೆಸಲಾಗಿತ್ತು.
ಫೈನಲ್ ಪಂದ್ಯದಲ್ಲಿ ಸಾಯಿ ಸ್ಟ್ರೈಕರ್ಸ್ ಪೊಲಿಪು ತಂಡವು ಖತರ್ನಾಕ್ ಮಲ್ಲಾರ್ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿತು.
ವಿಜೇತರಾದ  ಸಾಯಿ ಸ್ಟ್ರೈಕರ್ಸ್ ಪೊಲಿಪು ತಂಡಕ್ಕೆ ಪ್ರಥಮ ಬಹುಮಾನ ರೂ. 22,222 ಮತ್ತು ಟ್ರೋಫಿ ಹಾಗೂ ರನ್ನರ್ ಅಪ್ ತಂಡ ಖತರ್ನಾಕ್ ಮಲ್ಲಾರ್ ಗೆ ದ್ವಿತೀಯ ಬಹುಮಾನ ರೂ. 11,111ಮತ್ತು ಟ್ರೋಫಿ ನೀಡಿ ಗೌರವಿಸಲಾಯಿತು. ಖತರ್ನಾಕ್ ಮಲ್ಲಾರ್ ತಂಡದ ಧೀರಜ್ ಮ್ಯಾನ್ ಆಫ್ ದ ಸೀರೀಸ್ ಪ್ರಶಸ್ತಿಯನ್ನು ಪಡೆದುಕೊಂಡರು.  ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್ ಮ್ಯಾನ್ ಆಗಿ ಸಾಯಿ ಸ್ಟ್ರೈಕರ್ಸ್ ತಂಡದ ಸುಮಿತ್,  ಬೆಸ್ಟ್ ಬೌಲರ್ ಆಗಿ ಅದೇ ತಂಡದ ಭರತ್ ಆಯ್ಕೆಯಾದರು.  ಫೈನಲ್ ಪಂದ್ಯದ ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿಯನ್ನು ಕೂಡ ಭರತ್ ಪಡಕೊಂಡರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗಿರಿರಾಜ್ ಸಂಪಿಗೆನಗರ- ಉದ್ಯಮಿ, ಗಣೇಶ್ ಕುಮಾರ್ ಸಂಪಿಗೆನಗರ- ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರು, ಅಯೂಬ್ ಸಾಹೇಬ್- ಮಾಜಿ ಅಧ್ಯಕ್ಷರು ರಾಮದೂತ್ ವ್ಯಾಯಾಮ ಶಾಲೆ ಕುತ್ಪಾಡಿ, ಜಯಪ್ರಕಾಶ್ ಆಚಾರ್ಯ- ಅದ್ಯಕ್ಷರು ರಾಮದೂತ್ ವ್ಯಾಯಮ ಶಾಲೆ ಕುತ್ಪಾಡಿ, ಕೋಟ ರಾಮಕೃಷ್ಣ ಆಚಾರ್ಯ-  ಸ್ಪೋರ್ಟ್ಸ್ ಕನ್ನಡ ಡಾಟ್ ಕಾಮ್  ನ ಪ್ರಧಾನ ಸಂಪಾದಕರು, ರಾಧಾಕೃಷ್ಣ ಶ್ರೇಯಾನ್- ಗ್ರಾಮ ಪಂಚಾಯತ್ ಅದ್ಯಕ್ಷರು ಉದ್ಯಾವರ, ಅಶೋಕ್ ಭಂಡಾರಿ ಕುತ್ಪಾಡಿ – ಉದ್ಯಮಿ  ಹಾಗೂ ಜಿತೇಂದ್ರ ಶೆಟ್ಟಿ, ಸಮಾಜ ಸೇವಕರು ಮುಂತಾದವರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

6 − 2 =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you