ಕ್ರಿಕೆಟ್ಮಹಾರಾಜ ಟ್ರೋಫಿಯಲ್ಲಿ ಮಿಂಚುತ್ತಿದ್ದಾನೆ ರಾಹುಲ್ ದ್ರಾವಿಡ್ ಅವರ ಹಿರಿಮಗ!

ಮಹಾರಾಜ ಟ್ರೋಫಿಯಲ್ಲಿ ಮಿಂಚುತ್ತಿದ್ದಾನೆ ರಾಹುಲ್ ದ್ರಾವಿಡ್ ಅವರ ಹಿರಿಮಗ!

-

- Advertisment -spot_img

ಕ್ರಿಕೆಟ ದಿಗ್ಗಜ ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತ್ ದ್ರಾವಿಡ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರ ಆಡುತ್ತಿದ್ದಾನೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಗಳಿಸಿ ಗಮನ ಸೆಳೆದಿದ್ದಾನೆ 18 ವರ್ಷದ ಸಮಿತ್ ದ್ರಾವಿಡ್.

ದ್ರಾವಿಡ್ ಮಗನ ಆಟವನ್ನು ನೋಡಿದವರು, “ಅಪ್ಪನಂತೆ ಮಗ” ಎಂದು ಉದ್ಘರಿಸುತ್ತಿದ್ದಾರೆ.
ಅಂಥವರಿಗೊಂದು ಮಾತು.. ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತ್ ಅಪ್ಪನಂತೆ ಅಲ್ಲವೇ ಅಲ್ಲ.. ಅಪ್ಪ ಇಡೀ ಜಗತ್ತೇ ಮೆಚ್ಚಿದ ಬ್ಯಾಟ್ಸ್’ಮನ್. ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್’ಮನ್’ಗಳಲ್ಲಿ ಒಬ್ಬರು. ಆದರೆ ಮಗ ಆಲ್ರೌಂಡರ್… ಬಲಗೈ ಮಧ್ಯಮ ವೇಗದ ಬೌಲರ್, ಬಲಗೈ ಬ್ಯಾಟರ್.

ಈಗಿನ ಕಾಲದಲ್ಲಿ higher level ಕ್ರಿಕೆಟ್ ಆಡಬೇಕೆಂದರೆ, multi talented ಆಗಿರಲೇಬೇಕು. ಬ್ಯಾಟಿಂಗ್ ಜೊತೆ ಬೌಲಿಂಗ್ ಮಾಡಬೇಕು ಅಥವಾ ಬೌಲಿಂಗ್ ಜೊತೆ ಬ್ಯಾಟಿಂಗ್ ಕೌಶಲ್ಯ ಗೊತ್ತಿರಬೇಕು. ಮೀಡಿಯಂ ಪೇಸ್ ಆಲ್ರೌಂಡರ್ ಆಗಿದ್ದರೆ ಅಂಥಾ ಆಟಗಾರನ ತೂಕವೇ ಬೇರೆ. ರಾಹುಲ್ ದ್ರಾವಿಡ್ ತಮ್ಮ ಹಿರಿಮಗನನ್ನು ಹಾಗೆಯೇ ಬೆಳೆಸಿದ್ದಾರೆ.

ಈಗಾಗಲೇ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿರುವ ಸಮಿತ್ ದ್ರಾವಿಡ್, ಈ ವರ್ಷ ಕೂಚ್ ಬೆಹಾರ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ್ದ ಕರ್ನಾಟಕ ತಂಡದ ಸದಸ್ಯನೂ ಹೌದು.

KSCA ಅಂಡರ್-19 ಟೂರ್ನಿಗಳಲ್ಲಿ ಮಗ ಆಡುತ್ತಿದ್ದರೆ.. ದ್ರಾವಿಡ್ ಮೈದಾನದ ಮೂಲೆಯಲ್ಲಿ ಕುಳಿತು ಇಡೀ ದಿನ ಪಂದ್ಯ ವೀಕ್ಷಿಸುತ್ತಾರೆ. ಅದು ನೆಲದ ಮೇಲಾದರೂ ಸರಿ, ಮೆಟ್ಟಿಲುಗಳ ಮೇಲಾದರೂ ಸರಿ.

ದ್ರಾವಿಡ್ ಅವರ ಕಿರಿಮಗ ಅನ್ವಯ್ ದ್ರಾವಿಡ್ ಅಪ್ಪನ ಪಡಿಯಚ್ಚು. ಅಂದರೆ, ವಿಕೆಟ್ ಕೀಪರ್ ಬ್ಯಾಟ್ಸ್’ಮನ್. ಕರ್ನಾಟಕ ಅಂಡರ್-14 ತಂಡದ ನಾಯಕ ಕೂಡ.

ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರನಿಗೆ ಕ್ರಿಕೆಟ್ ಒಗ್ಗಿದಂತೆ ಕಾಣುತ್ತಿಲ್ಲ.. ಮತ್ತೊಬ್ಬ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ಅವರ ಮಗ ಭಾರತ ಪರ ಆಡಿದರೂ ಅಪ್ಪನ ಪ್ರಭಾವಳಿಯ ಮುಂದೆ ಆತ ನಿಲ್ಲಲೇ ಇಲ್ಲ. ದ್ರಾವಿಡ್ ಅವರ ಮಕ್ಕಳು ಹಾಗಾಗದಿರಲಿ.. ಅಪ್ಪನಂತೆ ಮಕ್ಕಳಿಗೂ ಕ್ರಿಕೆಟ್ ದೇವತೆ ಒಲಿಯಲಿ.

LEAVE A REPLY

Please enter your comment!
Please enter your name here

18 − 4 =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you