ಕ್ರಿಕೆಟ್ಕನ್ನಡಿಗನ ಮಾರ್ಗದರ್ಶನದಲ್ಲಿ ಕೆ.ಎಸ್.ಸಿ.ಎ ಟ್ರೋಫಿ ಗೆದ್ದ ಬರೋಡಾ ಕ್ರಿಕೆಟ್ ತಂಡ!

ಕನ್ನಡಿಗನ ಮಾರ್ಗದರ್ಶನದಲ್ಲಿ ಕೆ.ಎಸ್.ಸಿ.ಎ ಟ್ರೋಫಿ ಗೆದ್ದ ಬರೋಡಾ ಕ್ರಿಕೆಟ್ ತಂಡ!

-

- Advertisment -spot_img

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಡಾ.ತಿಮ್ಮಪ್ಪಯ್ಯ ಟ್ರೋಫಿ ಟೂರ್ನಿಯಲ್ಲಿ ಬರೋಡ ಕ್ರಿಕೆಟ್ ಸಂಸ್ಥಮ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬರೋಡ ತಂಡ ಮಹಾರಾಷ್ಟ್ರ ತಂಡವನ್ನು ಇನ್ನಿಂಗ್ಸ್ ಹಾಗೂ 96 ರನ್’ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು.


ಬರೋಡ ತಂಡದ ಯಶಸ್ಸಿನಲ್ಲಿ
ಕರ್ನಾಟಕದ ಮಾಜಿ ಎಡಗೈ ಮಧ್ಯಮ ವೇಗದ ಬೌಲರ್ ಶ್ರೀನಾಥ್ ಅರವಿಂದ್ ಅವರ ಪಾತ್ರ ದೊಡ್ಡದು. 39 ವರ್ಷಗ ಎಸ್. ಅರವಿಂದ್ ಬರೋಡ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿದ್ದಾರೆ. ಎರಡು ವರ್ಷಗಳ ಅವಧಿಗೆ ಬರೋಡ ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿರುವ ಅರವಿಂದ್ ಪ್ರತಿಷ್ಠಿತ ಕೆ.ಎಸ್.ಸಿ.ಎ ಟೂರ್ನಿಯಲ್ಲಿ ಬರೋಡ ತಂಡ ಪ್ರಶಸ್ತಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಕರ್ನಾಟಕ ಕ್ರಿಕೆಟ್ ಕಂಡ ದಿಗ್ಗಜ ವೇಗದ ಬೌಲರ್’ಗಳಲ್ಲಿ ಒಬ್ಬರಾಗಿರುವ ಎಸ್.ಅರವಿಂದ್ ರಾಜ್ಯ ತಂಡ 2013ರಿಂದ 2015ರ ಅವಧಿಯಲ್ಲಿ ಸತತ ಎರಡು ಬಾರಿ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಮತ್ತು ಇರಾನಿ ಕಪ್ ಗೆದ್ದಾಗ ಆ ತಂಡದ ಸದಸ್ಯರಾಗಿದ್ದರು. 2018ರಿಂದ 2022ರವರೆಗೆ ಎಸ್.ಅರವಿಂದ್ ಕರ್ನಾಟಕ ತಂಡದ ಬೌಲಿಂಗ್ ಕೋಚ್ ಕಾರ್ಯ ನಿರ್ವಹಿಸಿದ್ದರು. ಈ ಅವಧಿಯಲ್ಲಿ ಕರ್ನಾಟಕ ತಂಡ ರಣಜಿ ಸೆಮಿಫೈನಲ್ ಪ್ರವೇಶಿಸಿದ್ದೇ ಉತ್ತಮ ಸಾಧನೆಯಾಗಿತ್ತು.

ಕರ್ನಾಟಕ ಪರ 56 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಎಸ್. ಅರವಿಂದ್ 186 ವಿಕೆಟ್’ಗಳನ್ನು ಪಡೆದಿದ್ದಾರೆ. 39 ವರ್ಷದ ಅರವಿಂದ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ – ಎನ್.ಸಿ.ಎ ಲೆವೆಲ್-2 ಕೋಚಿಂಗ್ ಕೋರ್ಸ್ ಪೂರ್ತಿಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here

2 × four =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you