Home ಕ್ರಿಕೆಟ್ ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು ಯೋಜನೆಯಡಿ ಸ್ಥಳೀಯ ಆಯ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಜೂನ್ 7 ರವಿವಾರ ಬೆಳಿಗ್ಗೆ ಶ್ರೀ ವೆಂಕಟರಮಣ ಭಜನಾ ಮಂದಿರ ಪಿತ್ರೋಡಿ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಮಾನ್ಯ ಪಿತ್ರೋಡಿ,ರಕ್ಷಿತ್ ಶೆಟ್ಟಿ ಪಿತ್ರೋಡಿ,ಗೌರಿ ಮೆಂಡನ್ ಪಿತ್ರೋಡಿ ಮತ್ತು ಅಮೃತ ಗಾಣಿಗ ಜಾರುಕುದ್ರು ಇನ್ನಿತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಗೌರವಾಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ “ಯಾವುದೇ ಪ್ರಚಾರ ಬಯಸದೇ ವೆಂಕಟರಮಣ ಸಂಸ್ಥೆ ಕಳೆದ ಮೂರುವರೆ ದಶಕದಿಂದ ಸಮಾಜ ಸೇವೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು,ಈ ಬಾರಿ ವಿದ್ಯಾರ್ಥಿ ವೇತನ ನೀಡುವುದರ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿರುವುದು ಶ್ಲಾಘನೀಯ” ಎಂದರು.

ಈ ಸಂದರ್ಭ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ ವಿಶ್ವಯೋಗ ದಿನಾಚರಣೆಯ ಪ್ರಯುಕ್ತ “ಯೋಗದಿಂದ ಗೋಸೇವೆ” ಯೋಗರತ್ನ ತನುಶ್ರೀ ಪಿತ್ರೋಡಿ ಇವರಿಂದ ಪ್ರದರ್ಶಿಸಲ್ಪಡುವ 300 ಯೋಗಾಸನ ಪ್ರದರ್ಶನ‌ದ ಪೋಸ್ಟರ್ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಅಧ್ಯಕ್ಷರಾದ ಸಂದೀಪ್ ಕುಮಾರ್,ಸತೀಶ್ ಕುಂದರ್, ವಿಜಯ್ ಕೋಟ್ಯಾನ್,ಗಂಗಾಧರ್ ಕರ್ಕೇರಾ,ಕೋಟ ರಾಮಕೃಷ್ಣ ಆಚಾರ್,ಪ್ರವೀಣ್ ಪಿತ್ರೋಡಿ, ಯೋಗರತ್ನ ತನುಶ್ರೀ ಪಿತ್ರೋಡಿ ಹಾಗೂ ಸಂಸ್ಥೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು‌.

ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

ten + eight =

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು ಯೋಜನೆಯಡಿ ಸ್ಥಳೀಯ ಆಯ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಜೂನ್ 7 ರವಿವಾರ ಬೆಳಿಗ್ಗೆ ಶ್ರೀ ವೆಂಕಟರಮಣ ಭಜನಾ ಮಂದಿರ ಪಿತ್ರೋಡಿ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಮಾನ್ಯ ಪಿತ್ರೋಡಿ,ರಕ್ಷಿತ್ ಶೆಟ್ಟಿ ಪಿತ್ರೋಡಿ,ಗೌರಿ ಮೆಂಡನ್ ಪಿತ್ರೋಡಿ ಮತ್ತು ಅಮೃತ ಗಾಣಿಗ ಜಾರುಕುದ್ರು ಇನ್ನಿತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಗೌರವಾಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ "ಯಾವುದೇ ಪ್ರಚಾರ ಬಯಸದೇ ವೆಂಕಟರಮಣ ಸಂಸ್ಥೆ ಕಳೆದ ಮೂರುವರೆ ದಶಕದಿಂದ ಸಮಾಜ ಸೇವೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು,ಈ ಬಾರಿ ವಿದ್ಯಾರ್ಥಿ ವೇತನ ನೀಡುವುದರ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿರುವುದು ಶ್ಲಾಘನೀಯ" ಎಂದರು. ಈ ಸಂದರ್ಭ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ ವಿಶ್ವಯೋಗ ದಿನಾಚರಣೆಯ ಪ್ರಯುಕ್ತ

Send this to a friend