Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಶಾಲಾ-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಕುರಿತು ಟಿ. ಸಿ.ಎ ಉಡುಪಿ ಸಮಿತಿ ಪದಾಧಿಕಾರಿಗಳ ಸಭೆ

ಉಡುಪಿ-ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉಡುಪಿ ಜಿಲ್ಲೆ ಎಲ್ಲಾ ಸದಸ್ಯರೊಂದಿಗೆ ಮಾಸಿಕ ಸಮನ್ವಯ ಸಭೆಯನ್ನು ಆಯೋಜಿಸಿತು. ಜೂನ್ 28 ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಕೆಲವೊಂದು ನಿರ್ಣಯಗಳನ್ನು ಕೈಗೊಂಡಿತು.
ಹಾಕಿ ದಂತಕಥೆ ಧ್ಯಾನ್ ಚಂದ್ ಅವರ ಜನ್ಮದಿನದಂದು ಆಗಸ್ಟ್ 29 ರಂದು ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಈ ಪ್ರಯುಕ್ತ ಆಗಸ್ಟ್ 29 ರಂದು ಶಾಲಾ ಮಕ್ಕಳಿಗೆ ಕ್ರಿಕೆಟ್ ಕ್ವಿಜ್ ನಡೆಸುವುದೆಂದು ನಿರ್ಧಾರಿಸಲಾಯಿತು. ಯುವ ವಿದ್ಯಾರ್ಥಿಗಳಿಗೆ ಹಿಂದಿನ ಮತ್ತು ವರ್ತಮಾನದ ಇತಿಹಾಸದ ಕ್ರಿಕೆಟ್ ಜ್ಞಾನದ ಬಗ್ಗೆ ಅರಿವು ನೀಡಲು ಇಂಟರ್ ಸ್ಕೂಲ್ ಮತ್ತು ಇಂಟರ್ ಕಾಲೇಜು ರಸಪ್ರಶ್ನೆ ನಡೆಸುವ ಉದ್ದೇಶ TCA ಉಡುಪಿಯದ್ದು.
“ಅಕ್ಟೊಬರ್ ತಿಂಗಳ ಲ್ಲಿ  ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ನಡೆಸುವುದೆಂದು ನಿರ್ಧಾರಿಸಲಾಯಿತು. ಮಕ್ಕಳಿಗಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸುವುದು, ಕ್ರಿಕೆಟ್ ಹೊರತುಪಡಿಸಿ ಅವರು ನಡೆಸುವ ಎಲ್ಲಾ ಕ್ರೀಡೆಗಳನ್ನು ವಿಭಾಗವಾರು ಅವಕಾಶವನ್ನು ನೀಡುವುದು ಮತ್ತು ಪ್ರತಿಭೆಯನ್ನು ಪೋಷಿಸುವುದು ಮತ್ತು ಅದಕ್ಕೆ ಅನುಗುಣವಾಗಿ ಮಾರ್ಗದರ್ಶನ ಮಾಡುವುದು ಎಂಬ ನಿಟ್ಟಿನಲ್ಲಿ  TCA ಉಡುಪಿ ಇದನ್ನು ನಡೆಸಲಿದೆ.ಇದು ರಾಜ್ಯದ ಯುವಕರು ಮತ್ತು ಮಕ್ಕಳಿಗೆ  ರಾಷ್ಟ್ರೀಯ ಮಟ್ಟದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಲು ಅವಕಾಶಗಳನ್ನು ಸೃಷ್ಟಿಸುತ್ತದೆ” ಎಂದು ಟಿ‌.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿಯವರು ತಿಳಿಸಿದರು.
ಪ್ರಶಾಂತ್ ಅಂಬಲಪಾಡಿ  ಕಾರ್ಯಕಾರಿ ಸದಸ್ಯರನ್ನು ಮತ್ತು ಪದಾಧಿಕಾರಿಗಳನ್ನು ಸ್ವಾಗತಿಸಿದರು…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × 3 =