ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಶಾಲಾ-ಕಾಲೇಜು ಮಟ್ಟದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜನೆ ಟಿ.ಸಿ.ಎ ಉಡುಪಿ...

ಶಾಲಾ-ಕಾಲೇಜು ಮಟ್ಟದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜನೆ ಟಿ.ಸಿ.ಎ ಉಡುಪಿ ಚಿಂತನೆ

-

- Advertisment -spot_img
ಉಡುಪಿ-ಕ್ರಿಕೆಟ್ ನಮ್ಮ ರಾಷ್ಟ್ರೀಯ ಮನರಂಜನೆಯಾಗಿದೆ, ಇದನ್ನು ಲಕ್ಷಾಂತರ ಜನರು ಆಡುತ್ತಾರೆ, ವೀಕ್ಷಿಸುತ್ತಾರೆ ಮತ್ತು ಪ್ರೀತಿಸುತ್ತಾರೆ. ಇದು ವಿನೋದ ನೀಡುವ ಸಾಮಾಜಿಕ ಕ್ರೀಡೆಯಾಗಿದೆ.
ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್  ಅಸೋಸಿಯೇಷನ್ ಟೆನಿಸ್ ಬಾಲ್ ಕ್ರಿಕೆಟ್‌ಗೆ ಉತ್ತಮ ವೇದಿಕೆಯನ್ನು ಸೃಷ್ಟಿಸುವ ಉದ್ದೇಶದಿಂದ ರೂಪುಗೊಂಡ ಒಂದು ಸಂಸ್ಥೆ. ಟೆನಿಸ್ ಬಾಲ್ ಮತ್ತು ಲೆದರ್ ಬಾಲ್ ಕ್ಷೇತ್ರದ ಗ್ರಾಮೀಣ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಬೇಕೆಂಬ ಉದ್ದೇಶದೊಂದಿಗೆ ಸೆಪ್ಟೆಂಬರ್ 2021 ರಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ  ಗೌತಮ್ ಶೆಟ್ಟಿ ಕುಂದಾಪುರ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ ಆಗಿ ಈ ಸಂಸ್ಥೆಯು ಅಸ್ಥಿತ್ವಕ್ಕೆ ಬಂದಿತು. ಟೆನಿಸ್ ಬಾಲ್ ಗೆ ಉತ್ತಮ ಅವಕಾಶ ಕಲ್ಪಿಸಲು ತಾಲೂಕುವಾರು, ಜಿಲ್ಲಾವಾರು ಟೂರ್ನಮೆಂಟ್ ಗಳನ್ನು ಆಯೋಜಿಸಿ ಪ್ರತಿಭಾನ್ವಿತ  ಆಟಗಾರರನ್ನು ಮುಂಬರಲು ಅವಕಾಶ ಮಾಡಿ ಕೊಟ್ಟ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಇದೀಗ ರಾಜ್ಯಕ್ಕೆ ಮಾದರಿಯಾಗಿದೆ.
ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉಡುಪಿ ಜಿಲ್ಲೆ  ಆಶ್ರಯದಲ್ಲಿ ನಡೆದ  ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಮತ್ತು ಜಿಲ್ಲಾ ಮಟ್ಟದ ಪಂದ್ಯಾವಳಿಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.  ಟೆನ್ನಿಸ್ಬಾಲ್ ಕ್ರಿಕೆಟ್ ಉಳಿಸಿ-ಬೆಳೆಸುವುದು ಪ್ರತಿಯೊಬ್ಬ ಆಟಗಾರನ ಜವಾಬ್ದಾರಿ ಎಂಬ ಧ್ಯೇಯವನ್ನು ಇಟ್ಟುಕೊಂಡು  ಉತ್ತಮ ಶಿಸ್ತು ಮತ್ತು ಘನತೆಯೊಂದಿಗೆ ಈ ಸಂಸ್ಥೆ ನಡೆಸಿದ ಟೂರ್ನಮೆಂಟ್ ಗಳು ಟೆನಿಸ್ ಬಾಲ್‌ನ ಸುವರ್ಣ ದಿನಗಳು  ಮತ್ತೆ ಕಾಣುವಂತೆ ಮಾಡಿದೆ.  ಈ ನಿಟ್ಟಿನಲ್ಲಿ ಟಿ.ಸಿ.ಎ ಉಡುಪಿ ಈಗಾಗಲೇ ಅಭೂತಪೂರ್ವ ಯಶಸ್ಸನ್ನು ಕಂಡಿದೆ ಮತ್ತು ಕ್ರಿಕೆಟ್ ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಗೌರವಕ್ಕೆ ಪಾತ್ರವಾಗಿದೆ.
*ವಿದ್ಯಾರ್ಥಿ ದೆಸೆಯಿಂದಲೇ ಟೆನಿಸ್ಬಾಲ್ ಕ್ರಿಕೆಟ್ ಆಸಕ್ತಿ ಮೂಡಿಸುವತ್ತ ಟಿ.ಸಿ.ಎ ಚಿಂತನೆ*
ಪ್ರಸ್ತುತ  ಶಾಲಾ- ಕಾಲೇಜು ಮಕ್ಕಳಿಗಾಗಿ ಪ್ರೈಮರಿ ಹಾಗು ಹೈಸ್ಕೂಲ್ ವಿಭಾಗ ಅದೇ ರೀತಿ ಜೂನಿಯರ್ ಕಾಲೇಜು ಹಾಗೂ ಡಿಗ್ರಿ ಕಾಲೇಜ್ ವಿಭಾಗಧಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಗಳನ್ನೂ ನಡೆಸುವ ಪ್ರಯತಕ್ಕೆ  ಕೈ ಹಾಕಿದೆ ಟಿ.ಸಿ.ಎ ಉಡುಪಿ. ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಆಶ್ರಯದಲ್ಲಿ ಮೊದಲ ಬಾರಿಗೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳು ಜೂನಿಯರ್ ಕಾಲೇಜು ಮತ್ತು ಪದವಿ ಕಾಲೇಜು ವಿಭಾಗಗಳಲ್ಲಿ  ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಿದೆ ಎಂದು ಟಿ.ಸಿ.ಎ ಉಡುಪಿಯ ಅಧ್ಯಕ್ಷರಾಗಿರುವ  ಶ್ರೀಯುತ ಗೌತಮ್ ಶೆಟ್ಟಿ ಕುಂದಾಪುರ ಸ್ಪೋರ್ಟ್ಸ್ ಕನ್ನಡಕ್ಕೆ ವರದಿಯನ್ನು ನೀಡಿದ್ದಾರೆ.  ವಿದ್ಯಾರ್ಥಿಗಳನ್ನು ಈ ಟೂರ್ನಮೆಂಟ್ ಮೂಲಕ  ಕ್ರಿಕೆಟ್ ಗೆ ಪ್ರೋತ್ಸಾಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಟೂರ್ನಮೆಂಟ್ ನ  ದಿನಾಂಕಗಳನ್ನು ಮತ್ತು ಹೆಚ್ಚಿನ ವಿವರಗಳನ್ನು  ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
 ಈ ಪಂದ್ಯಾವಳಿಯು ನಮ್ಮ ಯುವಕರಲ್ಲಿ ನಾಯಕತ್ವ, ಶಿಸ್ತು, ಆತ್ಮವಿಶ್ವಾಸ, ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಬೆಳೆಸುತ್ತದೆ. ಈ ವಿದ್ಯಾರ್ಥಿಗಳ ಕ್ರಿಕೆಟ್  ಕೌಶಲ್ಯಗಳು ಯಾವುದೇ ಮಟ್ಟದಲ್ಲಿರಲಿ ಭಾಗವಹಿಸುವಿಕೆಯನ್ನು ಸ್ವಾಗತಿಸುವುದು  ಈ ಪಂದ್ಯಾವಳಿಯ ಉದ್ದೇಶವಾಗಿದೆ. ” ರಚನಾತ್ಮಕ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಯೊಂದಿಗೆ  ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಇದು ಅವರ ಆಸಕ್ತಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತದೆ ಮತ್ತು ಕ್ರೀಡೆಯನ್ನು ಶ್ರದ್ಧೆಯಿಂದ ಮುಂದುವರಿಸಲು ಅವರನ್ನು ಪ್ರೇರೇಪಿಸುತ್ತದೆ”  ಎಂದು ಸ್ಪೋರ್ಟ್ಸ್ ಕನ್ನಡದ ಸಂಪಾದಕ ಕೆ.ಆರ್.ಕೆ ಆಚಾರ್ಯ  ತಿಳಿಸಿರುತ್ತಾರೆ.
ಶಾಲಾ ಕಾಲೇಜು ಯುವಕರು  ಉತ್ತಮ ಟೆನಿಸ್ ಬಾಲ್ ಕ್ರಿಕೆಟ್ ಹಬ್ಬವನ್ನು ಸವಿಯುವಂತಾಗಲಿ ಎಂಬ ಶುಭ ಹಾರೈಕೆ ಗಳೊಂದಿಗೆ,
ಟೀಮ್ ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you