ಕ್ರಿಕೆಟ್ಬಾಂಗ್ಲಾ ವಿರುದ್ದ ಸ್ಕಾಟ್ಲೆಂಡ್ಗೆ ರೋಚಕ ಜಯ

ಬಾಂಗ್ಲಾ ವಿರುದ್ದ ಸ್ಕಾಟ್ಲೆಂಡ್ಗೆ ರೋಚಕ ಜಯ

-

- Advertisment -spot_img
ದುಬೈ ಅ 18 : ಕ್ರಿಸ್ಸ್ ಗ್ರೇವೆಸ್ ಅವರ ಆಲ್ರೌಂಡ್ ಆಟದಿಂದ ಮಿಂಚಿದ ಸ್ಕಾಟ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ದ 6 ರನ್ಗಳ ರೋಚಕ ಜಯ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ, ಸ್ಪಿನ್ನರ್ಗಳಾದ ಶಕಿಬ್ ಅಲ್ ಹಸನ್ (17ಕ್ಕೆ 2) ಮತ್ತು ಮೆಹ್ದಿ ಹಸನ್ (19ಕ್ಕೆ 3) ಅವರ ಶಿಸ್ತಿನ ದಾಳೆ ಎದುರು 140/9 ರನ್ಗಳ ಸವಾಲಿನ ಮೊತ್ತ ಮಾತ್ರ ದಾಖಲಿಸಲು ಶಕ್ತವಾಯಿತು
ಒಂದು ಹಂತದಲ್ಲಿ 52 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಒತ್ತಡದಲ್ಲಿದ್ದ ಸ್ಕಾಟ್ಲೆಂಡ್ ತಂಡಕ್ಕೆ ಆಸರೆಯಾಗಿ ನಿಂತ ಕ್ರಿಸ್ ಗ್ರೇವೆಸ್, ಕೇವಲ 28 ಎಸೆತಗಳಲ್ಲಿ 4 ಫೋರ್ ಮತ್ತು 2 ಸಿಕ್ಸರ್ ನೆರವಿನಿಂದ ಬಿರುಸಿನ 45 ರನ್ಗಳಿಸಿದರು ಇವರಿಗೆ ಜೆತೆಯಾಗಿ ನಿಂತಮಾರ್ಕ್ ವ್ಯಾಟ್ 22 ರನ್ಗಳಿಸಿ ತಂಡವನ್ನು 120ರ ಗಡಿ ದಾಟಿಸುವಲ್ಲಿ ಸಫಲರಾದರು.
140 ರನ್ಗಳ ಸಾಧರಣ ಮೊತ್ತದ ಗುರಿ ಬೆನ್ನತ್ತದ ಬಾಂಗ್ಲಾ ಸೌಮ್ಯ ಸರ್ಕಾರ್ ಮತ್ತು ಲಿಟನ್ ದಾಸ್ (5) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಒಳಗಾಯಿತು. ನಂತರ ಬಂದ ಶಕಿಬ್ ಅಲ್ ಹಸನ್ (28 ಎಸೆತಗಳಲ್ಲಿ 20 ರನ್) ಮತ್ತು ಮುಷ್ಫಿಕರ್ ರಹೀಮ್ (36 ಎಸೆತಗಳಲ್ಲಿ 38 ರನ್) ಗಳಿಸಿ ಫೆವಿಲಿಯನ್ ಹಾದಿ ಹಿಡಿದರು. ಅಂತಿಮವಾಗಿ ನಾಯಕ ಮಹ್ಮೂದುಲ್ಲ (23), ಆಫಿಫ್ ಹುಸೇನ್ (18) ಮತ್ತು ಮೆಹ್ದಿ ಹಸನ್ (15*) ಹೋರಾಟ ನಡೆಸಿದರೂ ಕೂಡ ನಿಗದಿತ 20 ಓವರ್ಗಳಲ್ಲಿ 7 ವಿಕಟ್ ಕಳೆದುಕೊಂಡು 134 ರನ್ ಮಾತ್ರ ಕಲೆಹಾಕಿ 6 ರನ್ಗಳಿಂದ ಸೋಲನುಭವಿಸಿತು.
ಈ ಪಂದ್ಯದಲ್ಲಿ ಆಕರ್ಷಕವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶಿಸಿದ ಕ್ರಿಸ್ ಗ್ರೇವೆಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × two =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you