ಕ್ರಿಕೆಟ್ಬಾಂಗ್ಲಾ ವಿರುದ್ದ ಸ್ಕಾಟ್ಲೆಂಡ್ಗೆ ರೋಚಕ ಜಯ

ಬಾಂಗ್ಲಾ ವಿರುದ್ದ ಸ್ಕಾಟ್ಲೆಂಡ್ಗೆ ರೋಚಕ ಜಯ

-

- Advertisment -spot_img
ದುಬೈ ಅ 18 : ಕ್ರಿಸ್ಸ್ ಗ್ರೇವೆಸ್ ಅವರ ಆಲ್ರೌಂಡ್ ಆಟದಿಂದ ಮಿಂಚಿದ ಸ್ಕಾಟ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ದ 6 ರನ್ಗಳ ರೋಚಕ ಜಯ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ, ಸ್ಪಿನ್ನರ್ಗಳಾದ ಶಕಿಬ್ ಅಲ್ ಹಸನ್ (17ಕ್ಕೆ 2) ಮತ್ತು ಮೆಹ್ದಿ ಹಸನ್ (19ಕ್ಕೆ 3) ಅವರ ಶಿಸ್ತಿನ ದಾಳೆ ಎದುರು 140/9 ರನ್ಗಳ ಸವಾಲಿನ ಮೊತ್ತ ಮಾತ್ರ ದಾಖಲಿಸಲು ಶಕ್ತವಾಯಿತು
ಒಂದು ಹಂತದಲ್ಲಿ 52 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಒತ್ತಡದಲ್ಲಿದ್ದ ಸ್ಕಾಟ್ಲೆಂಡ್ ತಂಡಕ್ಕೆ ಆಸರೆಯಾಗಿ ನಿಂತ ಕ್ರಿಸ್ ಗ್ರೇವೆಸ್, ಕೇವಲ 28 ಎಸೆತಗಳಲ್ಲಿ 4 ಫೋರ್ ಮತ್ತು 2 ಸಿಕ್ಸರ್ ನೆರವಿನಿಂದ ಬಿರುಸಿನ 45 ರನ್ಗಳಿಸಿದರು ಇವರಿಗೆ ಜೆತೆಯಾಗಿ ನಿಂತಮಾರ್ಕ್ ವ್ಯಾಟ್ 22 ರನ್ಗಳಿಸಿ ತಂಡವನ್ನು 120ರ ಗಡಿ ದಾಟಿಸುವಲ್ಲಿ ಸಫಲರಾದರು.
140 ರನ್ಗಳ ಸಾಧರಣ ಮೊತ್ತದ ಗುರಿ ಬೆನ್ನತ್ತದ ಬಾಂಗ್ಲಾ ಸೌಮ್ಯ ಸರ್ಕಾರ್ ಮತ್ತು ಲಿಟನ್ ದಾಸ್ (5) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಒಳಗಾಯಿತು. ನಂತರ ಬಂದ ಶಕಿಬ್ ಅಲ್ ಹಸನ್ (28 ಎಸೆತಗಳಲ್ಲಿ 20 ರನ್) ಮತ್ತು ಮುಷ್ಫಿಕರ್ ರಹೀಮ್ (36 ಎಸೆತಗಳಲ್ಲಿ 38 ರನ್) ಗಳಿಸಿ ಫೆವಿಲಿಯನ್ ಹಾದಿ ಹಿಡಿದರು. ಅಂತಿಮವಾಗಿ ನಾಯಕ ಮಹ್ಮೂದುಲ್ಲ (23), ಆಫಿಫ್ ಹುಸೇನ್ (18) ಮತ್ತು ಮೆಹ್ದಿ ಹಸನ್ (15*) ಹೋರಾಟ ನಡೆಸಿದರೂ ಕೂಡ ನಿಗದಿತ 20 ಓವರ್ಗಳಲ್ಲಿ 7 ವಿಕಟ್ ಕಳೆದುಕೊಂಡು 134 ರನ್ ಮಾತ್ರ ಕಲೆಹಾಕಿ 6 ರನ್ಗಳಿಂದ ಸೋಲನುಭವಿಸಿತು.
ಈ ಪಂದ್ಯದಲ್ಲಿ ಆಕರ್ಷಕವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶಿಸಿದ ಕ್ರಿಸ್ ಗ್ರೇವೆಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 4 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you