ಕ್ರಿಕೆಟ್ಬಾಂಗ್ಲಾ ವಿರುದ್ದ ಸ್ಕಾಟ್ಲೆಂಡ್ಗೆ ರೋಚಕ ಜಯ

ಬಾಂಗ್ಲಾ ವಿರುದ್ದ ಸ್ಕಾಟ್ಲೆಂಡ್ಗೆ ರೋಚಕ ಜಯ

-

- Advertisment -spot_img
ದುಬೈ ಅ 18 : ಕ್ರಿಸ್ಸ್ ಗ್ರೇವೆಸ್ ಅವರ ಆಲ್ರೌಂಡ್ ಆಟದಿಂದ ಮಿಂಚಿದ ಸ್ಕಾಟ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ದ 6 ರನ್ಗಳ ರೋಚಕ ಜಯ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ, ಸ್ಪಿನ್ನರ್ಗಳಾದ ಶಕಿಬ್ ಅಲ್ ಹಸನ್ (17ಕ್ಕೆ 2) ಮತ್ತು ಮೆಹ್ದಿ ಹಸನ್ (19ಕ್ಕೆ 3) ಅವರ ಶಿಸ್ತಿನ ದಾಳೆ ಎದುರು 140/9 ರನ್ಗಳ ಸವಾಲಿನ ಮೊತ್ತ ಮಾತ್ರ ದಾಖಲಿಸಲು ಶಕ್ತವಾಯಿತು
ಒಂದು ಹಂತದಲ್ಲಿ 52 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಒತ್ತಡದಲ್ಲಿದ್ದ ಸ್ಕಾಟ್ಲೆಂಡ್ ತಂಡಕ್ಕೆ ಆಸರೆಯಾಗಿ ನಿಂತ ಕ್ರಿಸ್ ಗ್ರೇವೆಸ್, ಕೇವಲ 28 ಎಸೆತಗಳಲ್ಲಿ 4 ಫೋರ್ ಮತ್ತು 2 ಸಿಕ್ಸರ್ ನೆರವಿನಿಂದ ಬಿರುಸಿನ 45 ರನ್ಗಳಿಸಿದರು ಇವರಿಗೆ ಜೆತೆಯಾಗಿ ನಿಂತಮಾರ್ಕ್ ವ್ಯಾಟ್ 22 ರನ್ಗಳಿಸಿ ತಂಡವನ್ನು 120ರ ಗಡಿ ದಾಟಿಸುವಲ್ಲಿ ಸಫಲರಾದರು.
140 ರನ್ಗಳ ಸಾಧರಣ ಮೊತ್ತದ ಗುರಿ ಬೆನ್ನತ್ತದ ಬಾಂಗ್ಲಾ ಸೌಮ್ಯ ಸರ್ಕಾರ್ ಮತ್ತು ಲಿಟನ್ ದಾಸ್ (5) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಒಳಗಾಯಿತು. ನಂತರ ಬಂದ ಶಕಿಬ್ ಅಲ್ ಹಸನ್ (28 ಎಸೆತಗಳಲ್ಲಿ 20 ರನ್) ಮತ್ತು ಮುಷ್ಫಿಕರ್ ರಹೀಮ್ (36 ಎಸೆತಗಳಲ್ಲಿ 38 ರನ್) ಗಳಿಸಿ ಫೆವಿಲಿಯನ್ ಹಾದಿ ಹಿಡಿದರು. ಅಂತಿಮವಾಗಿ ನಾಯಕ ಮಹ್ಮೂದುಲ್ಲ (23), ಆಫಿಫ್ ಹುಸೇನ್ (18) ಮತ್ತು ಮೆಹ್ದಿ ಹಸನ್ (15*) ಹೋರಾಟ ನಡೆಸಿದರೂ ಕೂಡ ನಿಗದಿತ 20 ಓವರ್ಗಳಲ್ಲಿ 7 ವಿಕಟ್ ಕಳೆದುಕೊಂಡು 134 ರನ್ ಮಾತ್ರ ಕಲೆಹಾಕಿ 6 ರನ್ಗಳಿಂದ ಸೋಲನುಭವಿಸಿತು.
ಈ ಪಂದ್ಯದಲ್ಲಿ ಆಕರ್ಷಕವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶಿಸಿದ ಕ್ರಿಸ್ ಗ್ರೇವೆಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you