12.7 C
London
Saturday, May 18, 2024
Homeಕ್ರಿಕೆಟ್ಸುರತ್ಕಲ್-ಹಿರಿಯರ ಕ್ರಿಕೆಟ್ ಹಬ್ಬ-ಗತ ವೈಭವದ ಮರು ಸೃಷ್ಟಿ-ಲೆಜೆಂಡ್ಸ್ ಕ್ರಿಕೆಟ್ ಲೀಗ್-2022

ಸುರತ್ಕಲ್-ಹಿರಿಯರ ಕ್ರಿಕೆಟ್ ಹಬ್ಬ-ಗತ ವೈಭವದ ಮರು ಸೃಷ್ಟಿ-ಲೆಜೆಂಡ್ಸ್ ಕ್ರಿಕೆಟ್ ಲೀಗ್-2022

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಹಿರಿಯ ಆಟಗಾರರನ್ನು ಒಟ್ಟುಗೂಡಿಸಿ,ಗತ ವೈಭವವನ್ನು ಮರು ಸೃಷ್ಟಿಸುವ ಸದುದ್ದೇಶದೊಂದಿಗೆ,ಮಂಗಳೂರು ಉತ್ತರದ ACP ಅಧಿಕಾರಿ ಎಸ್.ಮಹೇಶ್ ಕುಮಾರ್ ರವರ ಚಿಂತನೆ ಮಾರ್ಗದರ್ಶನದಲ್ಲಿ ಸಮಾಜ ಸೇವಕರು-ಧಾರ್ಮಿಕ ಮುಖಂಡರಾದ ಮಹಾಬಲ ಪೂಜಾರಿ ಕಡಂಬೋಡಿಯವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್ ಇವರ ಆಶ್ರಯದಲ್ಲಿ 40 ವರ್ಷ ಮೇಲ್ಪಟ್ಟ ಆಟಗಾರರಿಗಾಗಿ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಪಂದ್ಯಾವಳಿ ಆಯೋಜಿಸಲಾಗಿದೆ.
ಮೇ 28 ಮತ್ತು 29 ರಂದು ಸುರತ್ಕಲ್ ನ ಗೋವಿಂದದಾಸ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ 90 ರ ದಶಕದಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದ ಸುರತ್ಕಲ್ ಸುತ್ತಮುತ್ತಲಿನ ಪರಿಸರದ ಆಹ್ವಾನಿತ 8 ಹಿರಿಯ ತಂಡಗಳು ಭಾಗವಹಿಸಲಿದೆ.
ಪ್ರತಿ ಪಂದ್ಯವು 8 ಓವರ್ ಗಳಲ್ಲಿ ಸಾಗಲಿದ್ದು,
ಟೂರ್ನಮೆಂಟ್ ನ ಪ್ರಥಮ ಬಹುಮಾನ 1,00,001ರೂ ನಗದು ಮತ್ತು ದ್ವಿತೀಯ ಬಹುಮಾನ 50,005 ರೂ ನಗದು ಬಹುಮಾನ‌ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಟೂರ್ನಮೆಂಟ್ ನ ಲಾಂಛನ,ಟ್ರೋಫಿ ಅನಾವರಣ ಮತ್ತು ಆಟಗಾರರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಬಹಳ ಅದ್ಧೂರಿಯಾಗಿ ನಡೆದಿತ್ತು.
ಲೆಜೆಂಡ್ಸ್ ಕ್ರಿಕೆಟ್ ಲೀಗ್-2022 ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ವಿವರ ಈ ಕೆಳಗಿನಂತಿವೆ.
1)ಟೀಮ್ ಸೂಪರ್ ಕಾಪ್ಸ್
2)ಆಂಜನೇಯ ಸಸಿಹಿತ್ಲು
3)ವಿದ್ಯಾರ್ಥಿ ಸಂಘ ಬೈಕಂಪಾಡಿ
4)ವೀರ ಕೇಸರಿ(ರಿ)ತಡಂಬೈಲ್
5)ಪ್ಯಾರಡೈಸ್ ಕ್ಲಬ್ ಕೃಷ್ಣಾಪುರ
6)ಫ್ರೆಂಡ್ಸ್ ಹಳೆಯಂಗಡಿ
7)ಫ್ರೆಂಡ್ಸ್ ಸರ್ಕಲ್ ಸುರತ್ಕಲ್
8)ಕರ್ನಾಟಕ ಸೇವಾವೃಂದ ಸುರತ್ಕಲ್
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twelve − 7 =