ಕ್ರಿಕೆಟ್ಸುರತ್ಕಲ್ ನಲ್ಲಿ ಮತ್ತೊಮ್ಮೆ ಹಿರಿಯರ ಕ್ರಿಕೆಟ್ ಹಬ್ಬ- ಲೆಜೆಂಡ್ಸ್ ಕ್ರಿಕೆಟ್ ಲೀಗ್...

ಸುರತ್ಕಲ್ ನಲ್ಲಿ ಮತ್ತೊಮ್ಮೆ ಹಿರಿಯರ ಕ್ರಿಕೆಟ್ ಹಬ್ಬ- ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 3

-

- Advertisment -spot_img
ಮಂಗಳೂರು-ಸುರತ್ಕಲ್ ಸ್ಫೋರ್ಟ್ಸ್& ಕಲ್ಚರಲ್ ಕ್ಲಬ್  (ರಿ ) ಸಂಸ್ಥೆಯು  ಮಾರ್ಚ್ 2 ಮತ್ತು 3ರಂದು  ಸುರತ್ಕಲ್ ನ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ  45 ವರ್ಷಕ್ಕಿಂತ ಮೇಲ್ಪಟ್ಟ ಆಟಗಾರರಿಗಾಗಿ ಮೂರನೆಯ ಆವೃತ್ತಿಯ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ.
ಟೆನಿಸ್ಬಾಲ್ ಕ್ರಿಕೆಟ್ ನ ಗತ ವೈಭವವನ್ನು ಮರು ಸೃಷ್ಟಿಸುವ ವಿಶೇಷ ಪರಿಕಲ್ಪನೆಯ ಈ ಪಂದ್ಯಾಟದಲ್ಲಿ ಬೆಂಗಳೂರು,ಮೈಸೂರು,
ಅರಸೀಕೆರೆ,ಶಿವಮೊಗ್ಗ,ದಕ್ಷಿಣ ಕನ್ನಡ, ಉಡುಪಿ ಹೀಗೆ ರಾಜ್ಯದ ವಿವಿಧ ಭಾಗಗಳಿಂದ 45 ವರ್ಷ ಮೇಲ್ಪಟ್ಟ ಆಟಗಾರರ ಒಟ್ಟು12 ಹಿರಿಯ ಪ್ರತಿಷ್ಠಿತ ತಂಡಗಳು ಭಾಗವಹಿಸಲಿವೆ.
ಸುರತ್ಕಲ್ ಸ್ಫೋರ್ಟ್ಸ್& ಕಲ್ಚರಲ್ ಕ್ಲಬ್ (ರಿ ) ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ಮತ್ತು    ಸಂಸ್ಥೆಯ ಮಹಾಪೋಷಕರಾದ ಎ.ಸಿ.ಪಿ ಅಧಿಕಾರಿ ಎಸ್ ಮಹೇಶ್ ಕುಮಾರ್ ಇವರ ಸಾರಥ್ಯದಲ್ಲಿ ಹಾಗೂ ಸುರತ್ಕಲ್ ಪರಿಸರದ ಹಿರಿಯ ಹಾಗೂ ಕಿರಿಯ ಆಟಗಾರರ ಬೆಂಬಲದೊಂದಿಗೆ ಪಂದ್ಯಾವಳಿ ನಡೆಯಲಿದೆ.
ವಿಜೇತ ಮತ್ತು ರನ್ನರ್ ಅಪ್ ತಂಡಗಳಿಗೆ  ಕ್ರಮವಾಗಿ ರೂ. 1,00,001 ಮತ್ತು 50,005 ನಗದು ಬಹುಮಾನ ಮತ್ತು ಟ್ರೋಫಿ ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ. ಪಂದ್ಯಾವಳಿಯ ನೇರ ಪ್ರಸಾರ ಬೆದ್ರಾ ಮೀಡಿಯಾ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಮಾರ್ಚ್ 4 ರಂದು ತೃತೀಯ ವಾರ್ಷಿಕೋತ್ಸವ ಸಮಾರಂಭ
ಸುರತ್ಕಲ್ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ನ ತೃತೀಯ ವಾರ್ಷಿಕೋತ್ಸವ ಮಾರ್ಚ್ 4 ರಂದು ಸಂಜೆ 6 ಗಂಟೆಗೆ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ,ಸನ್ಮಾನ ಸಮಾರಂಭದ ಬಳಿಕ ಕಲಾ ಸಂಗಮ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ಶಿವದೂತೆ ಗುಳಿಗೆ ನಾಟಕದ ಪ್ರದರ್ಶನ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ ಇವರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × one =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you