SportsKannada | ಸ್ಪೋರ್ಟ್ಸ್ ಕನ್ನಡ

ಸೇವಾರತ್ನ ಡಾ.ಗೋವಿಂದಬಾಬು ಪೂಜಾರಿ ಅವರಿಗೆ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಪ್ರದಾನ

ಬೆಂಗಳೂರು-ಶ್ರೀ ಸಿದ್ಧಾರ್ಥ ಎಜ್ಯುಕೇಷನ್ ಸೊಸೈಟಿ ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್‌ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 111 ನೇ ಜನ್ಮದಿನದ ಸಂಭ್ರಮದ ಅಂಗವಾಗಿ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ,ಡಾ.ಗೋವಿಂದ ಬಾಬುಪೂಜಾರಿ ಇವರ ಸಮಾಜ ಸೇವೆಯನ್ನು ಗುರುತಿಸಿ,
“ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2020” ನೀಡಲಾಯಿತು.
ರಾಜ್ಯ ವಸತಿ ಸಚಿವ ವಿ.ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,ಶಾಸಕ ರೇಣುಕಾಚಾರ್ಯ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು.
ಬಡಕುಟುಂಬದಿಂದ ಬಂದು,ಹಲವಾರು ಅಡೆ ತಡೆಗಳನ್ನು ದಾಟಿ ಬಂದ ಡಾ.ಗೋವಿಂದ ಬಾಬು ಪೂಜಾರಿಯವರು ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಂಡರು.ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ.ಲಿ,ಪ್ರಗ್ನ್ಯಾ ಸಾಗರ್,ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ  ಮೊದಲಾದ ಸಂಸ್ಥೆಯ ಮೂಲಕ ಸಹಸ್ರಾರು ಜನರಿಗೆ ಉದ್ಯೋಗವನ್ನು ನೀಡಿದ್ದಾರೆ‌.ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮೂಲಕ ಸೂರಿಲ್ಲದವರಿಗೆ ಇದುವರೆಗೆ 8  ಮನೆ ನಿರ್ಮಿಸಿಕೊಟ್ಟಿದ್ದಾರೆ‌.ಬಡ ಅಶಕ್ತ ಕುಟುಂಬಗಳಿಗೆ ಆರೋಗ್ಯ ಸಂಬಂಧಿ,ಶೈಕ್ಷಣಿಕ,ಕೊರೋನಾ ಸಂದರ್ಭ ಸಾವಿರಾರು ಫುಡ್-ರೇಷನ್ ಕಿಟ್ ವಿತರಣೆ ಸೇರಿದಂತೆ ಅನೇಕ‌ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿದ್ದಾರೆ.
Exit mobile version