ಕ್ರಿಕೆಟ್ಶಕೀಬ್ ಅಲ್ ಹಸನ್‌ ಕ್ರಿಕೆಟ್ ನಿಂದ 2 ವರ್ಷ ಔಟ್, ನಿಷೇಧ...

ಶಕೀಬ್ ಅಲ್ ಹಸನ್‌ ಕ್ರಿಕೆಟ್ ನಿಂದ 2 ವರ್ಷ ಔಟ್, ನಿಷೇಧ ಹೇರಿದ ಐಸಿಸಿ

-

- Advertisment -spot_img

ಬಾಂಗ್ಲಾದೇಶ ಕ್ರಿಕೆಟ್ ತಂಡದ ಭರವಸೆಯ ಆಲ್ ರೌಂಡರ್ ಶಕೀಬ್ ಅಲ್ ಹಸನ್‌ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ 2 ವರ್ಷಗಳ ಕಾಲ ನಿಷೇಧ ಹೇರಿದೆ . ಭ್ರಷ್ಟಾಚಾರ ಆರೋಪದಲ್ಲಿ ಶಕೀಬ್‌ ಅಲ್ ಹಸನ್‌ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. 3 ಬಾರಿ ಬುಕ್ಕಿಗಳು ಸಂಪರ್ಕಿಸಿದ್ದನ್ನು ಐಸಿಸಿಗೆ ತಿಳಿಸದ ಕಾರಣ ಶಕೀಬ್‌ ನಿಷೇಧಕ್ಕೆ ಒಳಗಾಗಿದ್ದಾರೆ.

2017ರ ಬಾಂಗ್ಲಾ​ದೇಶ ಪ್ರೀಮಿ​ಯರ್‌ ಲೀಗ್‌ ವೇಳೆ ಬುಕ್ಕಿ ಅಗರ್‌ವಾಲ್‌, ಶಕೀಬ್‌ಗೆ ವಾಟ್ಸ್‌ಆ್ಯಪ್‌ ಸಂದೇಶ ಕಳು​ಹಿ​ಸಿದ್ದು ತಂಡದ ಆಂತ​ರಿಕ ವಿಚಾರಗಳನ್ನು ಹಂಚಿ​ಕೊ​ಳ್ಳು​ವಂತೆ ಕೇಳಿ​ದ್ದಾನೆ. ಈ ಘಟನೆಯನ್ನು ಶಕೀಬ್‌, ಭ್ರಷ್ಟಾ​ಚಾರ ನಿಗ್ರಹ ಘಟ​ಕಕ್ಕೆ ತಿಳಿ​ಸಿಲ್ಲ. ಬಳಿಕ 2018ರ ಬಾಂಗ್ಲಾ, ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡು​ವಿನ ತ್ರಿಕೋನ ಸರಣಿ, 2018ರ ಏ.26ರಂದು ಸನ್‌ರೈಸ​ರ್‍ಸ್-ಕಿಂಗ್ಸ್‌ ಇಲೆ​ವೆನ್‌ ನಡು​ವಿನ ಐಪಿ​ಎಲ್‌ ಪಂದ್ಯದ ವೇಳೆ ಬುಕ್ಕಿ ಅಗರ್‌ವಾಲ್‌ ಮತ್ತೊಮ್ಮೆ ಸಂಪ​ರ್ಕಿ​ಸಿ​ದ್ದಾನೆ. ಆದರೂ ಶಕೀಬ್‌, ಭ್ರಷ್ಟಾ​ಚಾರ ನಿಗ್ರಹ ದಳಕ್ಕೆ ಮಾಹಿತಿ ರವಾ​ನಿ​ಸಿಲ್ಲ.

ಈ ಮೇಲಿನ ಎಲ್ಲಾ ಕಾರಣಗಳಿಂದಾಗಿ ಶಕೀಬ್ ಅಲ್ ಹಸನ್‌ 2 ವರ್ಷಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿಯಬೇಕಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರತ ಪ್ರವಾಸದಿಂದ ಶಕೀಬ್ ಔಟ್: ಭಾರತಕ್ಕೆ ಪ್ರವಾಸ ಕೈಗೊಳ್ಳಲಿರುವ ಬಾಂಗ್ಲಾ ಕ್ರಿಕೆಟ್‌ ತಂಡ, ಆತಿಥೇಯ ಭಾರತದ ವಿರುದ್ಧ 3 ಪಂದ್ಯಗಳ ಟಿ20 ಮತ್ತು 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಶಕೀಬ್ ಅಲ್ ಹಸನ್‌ ಅನುಪಸ್ಥಿತಿಯಲ್ಲಿ ಪ್ರವಾಸಿ ಬಾಂಗ್ಲಾ ಬಲಿಷ್ಠ ಭಾರತವನ್ನು ಎದುರಿಸಬೇಕಾಗಿದೆ.

– ಪ್ರೀತಮ್ ಹೆಬ್ಬಾರ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen − fourteen =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you