9 C
London
Wednesday, April 17, 2024
Homeಕ್ರಿಕೆಟ್ಶಕೀಬ್ ಅಲ್ ಹಸನ್‌ ಕ್ರಿಕೆಟ್ ನಿಂದ 2 ವರ್ಷ ಔಟ್, ನಿಷೇಧ ಹೇರಿದ ಐಸಿಸಿ

ಶಕೀಬ್ ಅಲ್ ಹಸನ್‌ ಕ್ರಿಕೆಟ್ ನಿಂದ 2 ವರ್ಷ ಔಟ್, ನಿಷೇಧ ಹೇರಿದ ಐಸಿಸಿ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಬಾಂಗ್ಲಾದೇಶ ಕ್ರಿಕೆಟ್ ತಂಡದ ಭರವಸೆಯ ಆಲ್ ರೌಂಡರ್ ಶಕೀಬ್ ಅಲ್ ಹಸನ್‌ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ 2 ವರ್ಷಗಳ ಕಾಲ ನಿಷೇಧ ಹೇರಿದೆ . ಭ್ರಷ್ಟಾಚಾರ ಆರೋಪದಲ್ಲಿ ಶಕೀಬ್‌ ಅಲ್ ಹಸನ್‌ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. 3 ಬಾರಿ ಬುಕ್ಕಿಗಳು ಸಂಪರ್ಕಿಸಿದ್ದನ್ನು ಐಸಿಸಿಗೆ ತಿಳಿಸದ ಕಾರಣ ಶಕೀಬ್‌ ನಿಷೇಧಕ್ಕೆ ಒಳಗಾಗಿದ್ದಾರೆ.

2017ರ ಬಾಂಗ್ಲಾ​ದೇಶ ಪ್ರೀಮಿ​ಯರ್‌ ಲೀಗ್‌ ವೇಳೆ ಬುಕ್ಕಿ ಅಗರ್‌ವಾಲ್‌, ಶಕೀಬ್‌ಗೆ ವಾಟ್ಸ್‌ಆ್ಯಪ್‌ ಸಂದೇಶ ಕಳು​ಹಿ​ಸಿದ್ದು ತಂಡದ ಆಂತ​ರಿಕ ವಿಚಾರಗಳನ್ನು ಹಂಚಿ​ಕೊ​ಳ್ಳು​ವಂತೆ ಕೇಳಿ​ದ್ದಾನೆ. ಈ ಘಟನೆಯನ್ನು ಶಕೀಬ್‌, ಭ್ರಷ್ಟಾ​ಚಾರ ನಿಗ್ರಹ ಘಟ​ಕಕ್ಕೆ ತಿಳಿ​ಸಿಲ್ಲ. ಬಳಿಕ 2018ರ ಬಾಂಗ್ಲಾ, ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡು​ವಿನ ತ್ರಿಕೋನ ಸರಣಿ, 2018ರ ಏ.26ರಂದು ಸನ್‌ರೈಸ​ರ್‍ಸ್-ಕಿಂಗ್ಸ್‌ ಇಲೆ​ವೆನ್‌ ನಡು​ವಿನ ಐಪಿ​ಎಲ್‌ ಪಂದ್ಯದ ವೇಳೆ ಬುಕ್ಕಿ ಅಗರ್‌ವಾಲ್‌ ಮತ್ತೊಮ್ಮೆ ಸಂಪ​ರ್ಕಿ​ಸಿ​ದ್ದಾನೆ. ಆದರೂ ಶಕೀಬ್‌, ಭ್ರಷ್ಟಾ​ಚಾರ ನಿಗ್ರಹ ದಳಕ್ಕೆ ಮಾಹಿತಿ ರವಾ​ನಿ​ಸಿಲ್ಲ.

ಈ ಮೇಲಿನ ಎಲ್ಲಾ ಕಾರಣಗಳಿಂದಾಗಿ ಶಕೀಬ್ ಅಲ್ ಹಸನ್‌ 2 ವರ್ಷಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿಯಬೇಕಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರತ ಪ್ರವಾಸದಿಂದ ಶಕೀಬ್ ಔಟ್: ಭಾರತಕ್ಕೆ ಪ್ರವಾಸ ಕೈಗೊಳ್ಳಲಿರುವ ಬಾಂಗ್ಲಾ ಕ್ರಿಕೆಟ್‌ ತಂಡ, ಆತಿಥೇಯ ಭಾರತದ ವಿರುದ್ಧ 3 ಪಂದ್ಯಗಳ ಟಿ20 ಮತ್ತು 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಶಕೀಬ್ ಅಲ್ ಹಸನ್‌ ಅನುಪಸ್ಥಿತಿಯಲ್ಲಿ ಪ್ರವಾಸಿ ಬಾಂಗ್ಲಾ ಬಲಿಷ್ಠ ಭಾರತವನ್ನು ಎದುರಿಸಬೇಕಾಗಿದೆ.

– ಪ್ರೀತಮ್ ಹೆಬ್ಬಾರ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × one =