ಕ್ರಿಕೆಟ್ದಾವಣಗೆರೆಯಲ್ಲಿ 17 ನೇ ಬಾರಿ ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಶಾಮನೂರು ಡೈಮಂಡ್,ಶಿವಗಂಗಾ...

ದಾವಣಗೆರೆಯಲ್ಲಿ 17 ನೇ ಬಾರಿ ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಶಾಮನೂರು ಡೈಮಂಡ್,ಶಿವಗಂಗಾ ಕಪ್

-

- Advertisment -spot_img

ದಾವಣಗೆರೆಯಲ್ಲಿ 17 ನೇ ಬಾರಿ ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಶಾಮನೂರು ಡೈಮಂಡ್,ಶಿವಗಂಗಾ ಕಪ್

ದಾವಣಗೆರೆ ದಕ್ಷಿಣ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಇವರ ಧರ್ಮಪತ್ನಿ ದಿ.ಶ್ರೀಮತಿ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಇವರ ಸವಿನೆನಪಿಗಾಗಿ,ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಂಘ ಆಶ್ರಯದಲ್ಲಿ 17 ನೇ ಬಾರಿ ಹೊನಲು ಬೆಳಕಿನ ರಾಷ್ಟ್ರೀಯ ಮಟ್ಟದ ಶಾಮನೂರು ಡೈಮಂಡ್ ಶಿವಗಂಗಾ ಟ್ರೋಫಿ-2024 ಆಯೋಜಿಸಲಾಗಿದೆ.

ರಾಜ್ಯ ಸರಕಾರದ ಭೂ ವಿಜ್ಞಾನ ಮತ್ತು ಗಣಿಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ದಾವಣಗೆರೆ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ,ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ,ಉದ್ಯಮಿ ಶಿವಗಂಗಾ ಶ್ರೀನಿವಾಸ್,ಕುರುಡಿ ಗಿರೀಶ್ ಮತ್ತು ದಾವಣಗೆರೆಯ ಯಶಸ್ವಿ ಸಂಘಟಕ,ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ(ಜೆಪಿ)ಇವರೆಲ್ಲರ ಒಗ್ಗೂಡುವಿಕೆಯಲ್ಲಿ ಕಳೆದ 16 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದ್ದು,ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್ ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಎಂದೇ ಪ್ರಸಿದ್ಧಿ ಪಡೆದಿದೆ.

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ ದಿನಾಂಕ 28 ರಿಂದ ಡಿಸೆಂಬರ್ 01ರ ತನಕ ನಡೆಯಲಿರುವ ದಾವಣಗೆರೆ ಕ್ರಿಕೆಟ್ ಹಬ್ಬದಲ್ಲಿ ರಾಷ್ಟ್ರೀಯ ಮಟ್ಟದ 50 ಕ್ಕೂ ಹೆಚ್ಚಿನ ತಂಡಗಳು ಭಾಗವಹಿಸಲು ಉತ್ಸುಕರಾಗಿದ್ದು,ಪ್ರಥಮ ಬಹುಮಾನ 5,00,555, ದ್ವಿತೀಯ 3,00,555, ತೃತೀಯ 155555 ರೂ ನಗದು ಬಹುಮಾನ‌ ಸಹಿತ ಅತ್ಯಾಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದ್ದು, ಗಣ್ಯಾತಿಗಣ್ಯರು,ಚಲನಚಿತ್ರ ತಾರೆಯರು,ಉದ್ಯಮಿಗಳು ಆಗಮಿಸಲಿದ್ದು ಪಂದ್ಯಾಟದ ಮೆರುಗನ್ನು ಹೆಚ್ಚಿಸಲಿದ್ದಾರೆ ಎಂದು ಪ್ರಮುಖ ಸಂಘಟಕ ಜಯಪ್ರಕಾಶ್ ಗೌಡ ಜೆ.ಪಿ ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

17 − 14 =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you