ಕ್ರಿಕೆಟ್ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶರತ್...

ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶರತ್ ಶೆಟ್ಟಿ ಪಡುಬಿದ್ರಿ.

-

- Advertisment -spot_img
ಕ್ರೀಡಾ ಕ್ಷೇತ್ರದಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಪಾರದರ್ಶಕ ವ್ಯಕ್ತಿತ್ವದ ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರು, ಪಡುಬಿದ್ರಿ ಫ್ರೆಂಡ್ಸ್ ತಂಡದ ಯಶಸ್ವಿ ಕಪ್ತಾನರಾದ ಶ್ರೀ ಶರತ್ ಶೆಟ್ಟಿಯವರು 2020ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದರು.
ಪಡುಬಿದ್ರಿಯ ಶ್ರೀ ವಿಠಲ್ ಶೆಟ್ಟಿ ಹಾಗೂ ಶ್ರೀಮತಿ ಶಾರದಾ.ವಿ‌.ಶೆಟ್ಟಿ ಇವರ ಸುಪುತ್ರರಾಗಿ ಜನಿಸಿದ ಶರತ್ ಶೆಟ್ಟಿ ಶರತ್ ಶೆಟ್ಟಿ  ಯವರ ಕ್ರಿಕೆಟ್ ಜೀವನ ಶುರುವಾಗಿದ್ದೇ ಕುಂದಾಪುರದಿಂದ. ಪ್ರೌಢಶಾಲಾ ವ್ಯಾಸಂಗವನ್ನು ತೆಕ್ಕಟ್ಟೆಯಲ್ಲಿ ನಡೆಸುವ ಸಂದರ್ಭದಲ್ಲಿ ಮೊತ್ತ ಮೊದಲ ಬಾರಿಗೆ ಹಿರಿಯರಾದ ” ನಾಗೇಶಣ್ಣ”ರವರ “ಶ್ರೀಲತಾ ಕುಂದಾಪುರ” ತಂಡದಲ್ಲಿ ಆರಂಭಿಕ ದಾಂಡಿಗನಾಗಿ ಕ್ರಿಕೆಟ್ ಜೀವನ ಪ್ರಾರಂಭಿಸಿದ ಇವರು ಮುಂದೆ
ಪಡುಬಿದ್ರಿಯ “ಫಾರುಕ್” ರವರು ಕಟ್ಟಿದ ತಂಡ
“ಪಡುಬಿದ್ರಿ ಫ್ರೆಂಡ್ಸ್” ನ್ನು ಮುನ್ನಡೆಸುವ ಅವಕಾಶ ಸಿಕ್ಕಾಗ ಸಹ ಆಟಗಾರರಾದ ಸುಭಾಶ್ ಕಾಮತ್ ಜೊತೆಗೂಡಿ‌ ಅದ್ಭುತ ಸಂಯೋಜಿತ ತಂಡವನ್ನು ಕಟ್ಟುತ್ತಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ,M.P.L ಸರಣಿ ಶ್ರೇಷ್ಠ,ಟೆನ್ನಿಸ್ ಬಾಲ್ ನ ಸಭ್ಯ ಆಟಗಾರ ನಿತಿನ್ ಮೂಲ್ಕಿ,ಮ್ಯಾಜಿಕಲ್ ಆಲ್ ರೌಂಡರ್ ವಿನ್ಸೆಂಟ್, ಕ್ಲಾಸಿಕ್ ಬ್ಯಾಟ್ಸ್ ಮನ್ ರೂಪೇಶ್ ಶೆಟ್ಟಿ, ಹಿರಿಯ ಆಟಗಾರರಾದ ದಿ|ವೆಂಕಟೇಶ್,ಕಣ್ಣನ್ ನಾಯರ್,ಪ್ರಸಾದ್ ಪಡುಬಿದ್ರಿ ಹೀಗೆ ಹತ್ತು ಹಲವಾರು ಸವ್ಯಸಾಚಿ  ಆಟಗಾರರನ್ನು ಟೆನ್ನಿಸ್ ಬಾಲ್ ಗೆ ಪರಿಚಯಿಸಿದ ಕೀರ್ತಿ ಕಳೆದ 2 ದಶಕಗಳಿಂದ ಮುನ್ನಡೆಸಿಕೊಂಡು ಬರುತ್ತಿರುವ ಆದರ್ಶ ಕಪ್ತಾನ ಶರತ್ ಶೆಟ್ಟಿ ಯವರಿಗೆ ಸಲ್ಲುತ್ತದೆ.
ಮೊದಲ ಬಾರಿಗೆ ಉಜಿರೆಯಲ್ಲಿ ರಾಜ್ಯಮಟ್ಟದ ಪಂದ್ಯಾಟದಲ್ಲಿ ಜಯಿಸಿದ ಪಡುಬಿದ್ರಿ ತಂಡ ಮುಂದೆ ಗೆಲುವಿನ ನಾಗಾಲೋಟಗೈದಿತು.1999 ರಲ್ಲಿ 14 ಜಿಲ್ಲಾ,ರಾಜ್ಯ ಮಟ್ಟದ ಪ್ರಶಸ್ತಿಗಳನ್ನು, ಶರತ್ ಶೆಟ್ಟಿ ಯವರ ನಾಯಕತ್ವದಲ್ಲಿ ಒಂದೇ ವರ್ಷದಲ್ಲಿ 8 ಟೂರ್ನಿಗಳಲ್ಲಿ ಭಾಗವಹಿಸಿ ,7 ಬಾರಿ ಚಾಂಪಿಯನ್ ತಂಡವಾಗಿಯೂ,
1 ಬಾರಿ ರನ್ನರ್ಸ್ ಆಗಿ ಮೂಡಿ ಬಂದಿದ್ದು ಉತ್ಕೃಷ್ಟ ನಾಯಕತ್ವಕ್ಕೆ ಸಾಕ್ಷಿ.ಮೊದ ಮೊದಲಿಗೆ ಬ್ಯಾಟಿಂಗಲ್ಲಿ ಮಿಂಚುತ್ತಿದ್ದ ಇವರು 90 ರ ದಶಕದಲ್ಲಿ ನೇಜಾರಿನಲ್ಲಿ ಎ.ಕೆ.ಸ್ಪೋರ್ಟ್ಸ್ ತಂಡದ ವಿರುದ್ಧದ ಸೆಮಿಫೈನಲ್ ನಲ್ಲಿ ಕೊನೆಯ ಎಸೆತ ದಲ್ಲಿ  6 ರನ್ ಗಳ ಅವಶ್ಯಕತೆ ಬಿದ್ದಾಗ ಸಿಕ್ಸರ್ ಸಿಡಿಸಿ ಗೆಲ್ಲಿಸಿದ 2 ಉದಾಹರಣೆಗಳಿವೆ.
ಮೈದಾನದ ಮಿಡ್ ವಿಕೆಟ್,ಕವರ್ಸ್ ನ ಚುರುಕಿನ ಅದ್ಭುತ ಫೀಲ್ಡರ್,ಯುವ ಕ್ರಿಕೆಟಿಗರಿಗಾಗಿ ತನ್ನ ಬ್ಯಾಟಿಂಗ್ ಸರದಿ ಬದಲಾಯಿಸಿಕೊಂಡು, ಯುವ ಆಟಗಾರರು ದೂರ ದೂರಿಗೆ ವೃತ್ತಿ  ನಿಮಿತ್ತ ತೆರಳಲು ಬಂದಾಗ ತಂಡದ ವ್ಯಾಮೋಹವನ್ನು ಬದಿಗಿಟ್ಟು ಆಟಗಾರರ ಭವಿಷ್ಯ ರೂಪಿಸಿದ ನಿಸ್ವಾರ್ಥ ನಾಯಕ.
ಪಡುಬಿದ್ರಿ ತಂಡ ಜಯಿಸಿದ ನಗದನ್ನು ಅನೇಕ ಬಾರಿ ಮಾರಕ ಕಾಯಿಲೆಯಿಂದ ಬಳಲುವ ಕ್ಯಾನ್ಸರ್ ರೋಗಿಗಳಿಗೆ,ಬಡ ವಿದ್ಯಾರ್ಥಿಗಳಿಗೆ,ನಿರ್ವಸಿತರ ವಸತಿ ನಿರ್ಮಾಣಕ್ಕಾಗಿ ಅರ್ಥಪೂರ್ಣವಾಗಿ ಬಳಸಿ ಕೊಂಡಿರುತ್ತಾರೆ.
ಪಲಿಮಾರಿನ ಪೌಲಿನ್ ಡಿಸೋಜಾ ಲೆಬನಾನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿ 18 ವರ್ಷಗಳ ಕಾಲ ಕುಟುಂಬದಿಂದ ಸಂಪರ್ಕ ಕಳೆದುಕೊಂಡ ಸಂದರ್ಭ
ಶರತ್ ಶೆಟ್ಟಿ ಇವರು ಬಳಕೆದಾರರ ಚಳುವಳಿಯ ನಾಯಕ ರವೀಂದ್ರನಾಥ್ ಶ್ಯಾನುಭೋಗ್ ಇವರನ್ನು ಸಂಪರ್ಕಿಸಿ ಸಂಕಷ್ಟದಿಂದ ಪಾರು ಮಾಡುವಲ್ಲಿ ಶ್ರಮಿಸಿರುತ್ತಾರೆ.
ಪಡುಬಿದ್ರಿ ಫ್ರೆಂಡ್ಸ್ ನ ಸವ್ಯಸಾಚಿ ನಿತಿನ್ ಮೂಲ್ಕಿಯಂತ ಆಟಗಾರರನ್ನು ಕರ್ನಾಟಕ ರಣಜಿ,ಕೆ‌.ಪಿ.ಎಲ್,ಎಮ್.ಪಿ.ಎಲ್ ಹಾಗೂ ಯು.ಎ.ಇ ಅಂತರಾಷ್ಟ್ರೀಯ ತಂಡದಲ್ಲಿ ಗುರುತಿಸಿಕೊಳ್ಳಲು ನಾಯಕ ಶರತ್ ಶೆಟ್ಟಿಯವರ ಪಾತ್ರ ಅಪಾರ.
ಮುಂಬಯಿ ತಂಡವನ್ನು ಪ್ರತಿನಿಧಿಸುವ ಉಡುಪಿ ಮೂಲದ ಸಂದೀಪ್ ಭಂಡಾರಿಯವರ ಪ್ರತಿಭೆಯನ್ನು ಬೆಳಕಿಗೆ ತಂದ ಶರತ್ ಶೆಟ್ಟಿಯವರು ಪಡುಬಿದ್ರಿ ಫ್ರೆಂಡ್ಸ್ ನ ಮುದರಂಗಡಿಯ ನಿಹಾಲ್ ಡಿಸೋಜಾ ಇವರನ್ನು ಕರ್ನಾಟಕ ಪ್ರೀಮಿಯರ್ ಲೀಗ್ ಬಳ್ಳಾರಿ ಟಸ್ಕರ್ಸ್ ತಂಡದಲ್ಲಿ ತಂಡದಲ್ಲಿ ಭಾಗವಹಿಸುವಂತೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕ್ರಿಕೆಟ್ ತಂಡದ ಕಪ್ತಾನನಾಗಿ ರೂಪಿಸುವಲ್ಲಿ ಶ್ರಮ ವಹಿಸಿರುತ್ತಾರೆ.
ಪ್ರಸ್ತುತ ಉಡುಪಿ ವಲಯದ
“ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಅಸೋಸಿಯೇಷನ್” ನ ಅಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದು ನೇರ ನುಡಿಗಳ ಮೂಲಕ ಯುವ ಕ್ರಿಕೆಟಿಗರಿಗೆ ಶಿಸ್ತಿನ ನೇರ ಸಂದೇಶವನ್ನು ತಲುಪಿಸುತ್ತಿದ್ದು,ಲಯನ್ಸ್ ಹಾಗೂ ಜೇಸಿ ಕ್ಲಬ್ ಗಳ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವರು.ಶಟಲ್ ಬ್ಯಾಡ್ಮಿಂಟನ್ ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 5 =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you