ಕ್ರಿಕೆಟ್ಟೆನಿಸ್ಬಾಲ್ ಕ್ರಿಕೆಟ್ ನ ಜಗಜಟ್ಟಿಗಳ ಕಾಳಗ- ಬೆಣ್ಣೆ ನಗರಿಯಲ್ಲಿ ನಡೆಯಲಿದೆಯೇ ಲಂಕಾ...

ಟೆನಿಸ್ಬಾಲ್ ಕ್ರಿಕೆಟ್ ನ ಜಗಜಟ್ಟಿಗಳ ಕಾಳಗ- ಬೆಣ್ಣೆ ನಗರಿಯಲ್ಲಿ ನಡೆಯಲಿದೆಯೇ ಲಂಕಾ ದಹನ?

-

- Advertisment -spot_img

ಟೆನಿಸ್ಬಾಲ್ ಕ್ರಿಕೆಟ್ ನ ಜಗಜಟ್ಟಿಗಳ ಕಾಳಗ- ಬೆಣ್ಣೆ ನಗರಿಯಲ್ಲಿ ನಡೆಯಲಿದೆಯೇ ಲಂಕಾ ದಹನ?

ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಗೆ ಬೆಣ್ಣೆನಗರಿ ಸಜ್ಜಾಗುತ್ತಿದೆ.‌ಇದೇ ಬರುವ ನವೆಂಬರ್ 26 ದಾವಣಗೆರೆಯಲ್ಲಿ ಕ್ರಿಕೆಟ್ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಕ್ರಿಕೆಟ್ ಪ್ರಿಯರ ಬಹು ನಿರೀಕ್ಷೆಯ ಶಾಮನೂರು ಡೈಮಂಡ್ ಮತ್ತು ಶಿವಗಂಗಾ ಕಪ್ 17 ನೇ ಬಾರಿ ದಿವಂಗತ ಪಾರ್ವತಿ ಶಿವಶಂಕರಪ್ಪ ಇವರ ಸ್ಮರಣಾರ್ಥ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಣ್ಣು ಕೋರೈಸುವ ಹೊನಲು ಬೆಳಕಿನಲ್ಲಿ ನಡೆಯಲಿದೆ.

ಪ್ರತೀ ವರ್ಷ ದಾವಣಗೆರೆ ಕ್ರಿಕೆಟ್ ಪಂದ್ಯವನ್ನಾಡಲು ಕನಸು ಕಾಣುವ ಆಟಗಾರರ ಪಡೆ ಬಹಳಷ್ಟು ದೊಡ್ಡದಿದೆ. ಈ ಬಾರಿಯೂ ಕೂಡ ಮುಂಬಯಿ,ಮಧ್ಯಪ್ರದೇಶ,ಕೇರಳ,ಚೆನ್ನೈ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 50 ತಂಡಗಳು ಕತ್ತು ಕತ್ತಿನ ಹೋರಾಟ ನಡೆಯಲಿದ್ದು ಕ್ರೀಡಾ ಪ್ರೇಕ್ಷಕರ ಕಣ್ಣು ದಾವಣಗೆರೆಯತ್ತ ನೆಟ್ಟಿದೆ.

ದಾವಣಗೆರೆಯಲ್ಲಿ ಇದೇ ಮೊದಲ ಬಾರಿಗೆ ಶ್ರೀಲಂಕಾ ತಂಡ ಬಂದಿಳಿಯಲಿದ್ದು, ನವೆಂಬರ್ 30 ಸಂಜೆ 7 ಗಂಟೆಗೆ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಪ್ರದರ್ಶನ ಪಂದ್ಯ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಲಿದೆ. ಮೊನಚಾದ ಬೌಲಿಂಗ್,ಅಬ್ಬರದ ಬ್ಯಾಟಿಂಗ್ ಪಡೆಯನ್ನೇ ಹೊಂದಿರುವ ಶ್ರೀಲಂಕಾ,ಬಹುತೇಕ ಕರ್ನಾಟಕದ ಆಟಗಾರರಿಂದ ಕೂಡಿದ ಭಾರತ ತಂಡವನ್ನು ಮಣಿಸುವುದೇ ಅಥವಾ ಬೆಣ್ಣೆಗೆರೆ ದಾವಣಗೆರೆಯಲ್ಲಿ ಲಂಕಾ ದಹನ ನಡೆಯುವುದೇ ಕಾದು ನೋಡೋಣ.

ದಾವಣಗೆರೆ ಕ್ರಿಕೆಟ್ ಹಬ್ಬದ ಕ್ಷಣ ಕ್ಷಣದ ಮಾಹಿತಿಗಾಗಿ ಸ್ಪೋರ್ಟ್ಸ್ ಕನ್ನಡ ಚಾನೆಲ್ ವೀಕ್ಷಿಸಿ.

LEAVE A REPLY

Please enter your comment!
Please enter your name here

five − one =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you