ಕ್ರಿಕೆಟ್ಶಿಖರ್ ಶೆಟ್ಟಿ ಮೈಸೂರು ವಾರಿಯರ್ಸ್ ತಂಡಕ್ಕೆ ಆಯ್ಕೆ: ಕುಂದಾಪುರದ ಪ್ರತಿಭೆಗೆ ಮಹಾರಾಜ...

ಶಿಖರ್ ಶೆಟ್ಟಿ ಮೈಸೂರು ವಾರಿಯರ್ಸ್ ತಂಡಕ್ಕೆ ಆಯ್ಕೆ: ಕುಂದಾಪುರದ ಪ್ರತಿಭೆಗೆ ಮಹಾರಾಜ ಟ್ರೋಫಿಯಲ್ಲಿ ಮಹತ್ವದ ಅವಕಾಶ

-

- Advertisment -spot_img

 

ಕುಂದಾಪುರದ ಯುವ ಕ್ರಿಕೆಟಿಗ ಶಿಖರ್ ಶೆಟ್ಟಿ ಅವರು ಈ ವರ್ಷದ ಮಹಾರಾಜ ಟ್ರೋಫಿ ಟಿ20 ಲೀಗ್‌ಗಾಗಿ ಆಯೋಜಿಸಲಾದ ಹರಾಜಿನಲ್ಲಿ ಶಕ್ತಿಯುತ ಮೈಸೂರು ವಾರಿಯರ್ಸ್ ತಂಡದ ಭಾಗವಾಗಿ ಆಯ್ಕೆಯಾಗಿದ್ದಾರೆ. ಇವರು ಸ್ಲೋ ಲೆಫ್ಟ್ ಆರ್ಮ್ ಆರ್ಥೋಡಾಕ್ಸ್ ಬೌಲರ್.

ಕಳೆದ ಬಾರಿಯ ಚಾಂಪಿಯನ್ ಮೈಸೂರು ವಾರಿಯರ್ಸ್ ತಂಡವು ಶಿಖರ್ ಶೆಟ್ಟಿಗೆ ಚಾನ್ಸ್ ನೀಡಿದ್ದು, ಈ ವರ್ಷದ ಮಹಾರಾಜ ಟ್ರೋಫಿಗೆ ಅವರು ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಹರಾಜಿನಲ್ಲಿ ಮೈಸೂರು ವಾರಿಯರ್ಸ್ ತಂಡವು ಶಿಖರ್ ಶೆಟ್ಟಿಯನ್ನು ರೂ. 4.75 ಲಕ್ಷ ಮೊತ್ತಕ್ಕೆ ಖರೀದಿಸಿದೆ. 

ಹಿಂದಿನ ವರ್ಷ ಶಿಖರ್ ಬೆಂಗಳೂರು ಮೂಲದ ಕಲ್ಯಾಣಿ ಬ್ಲಾಸ್ಟರ್ಸ್ ತಂಡದ ಪರವಾಗಿ ಆಡಿದ್ದರು. ಅವರು ಬೌಲರ್‌ಗಿಂತಲೂ ಉತ್ತಮ ಫೀಲ್ಡರ್‌ ಆಗಿ ಗಮನ ಸೆಳೆದಿದ್ದರು. ಮೈದಾನದಲ್ಲಿ ಅವರ ಚುರುಕುತನ ಹಾಗೂ ಸಾಮರ್ಥ್ಯತೆಯಿಂದ ಅವರು ಪ್ರೇಕ್ಷಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿ ಮೈಸೂರಿನ ಪರ ಅವರು ಇನ್ನಷ್ಟು ಸ್ಫೂರ್ತಿದಾಯಕ ಪ್ರದರ್ಶನ ನೀಡಲಿದ್ದಾರೆ ಎಂಬ ನಿರೀಕ್ಷೆಯಿದೆ.

ಕರಾವಳಿ ಕ್ರಿಕೆಟರ್ಸ್ ಕುಂದಾಪುರದ ರಾಜೇಶ್ ಶೆಟ್ಟಿಯವರ ಪುತ್ರರಾದ ಶಿಖರ್, ತಮ್ಮ ಉಜ್ವಲ ಪ್ರದರ್ಶನದಿಂದಲೇ ಮುಂದೆ ಬಂದವರು. ತಮ್ಮ ಶ್ರದ್ಧೆ, ಪರಿಶ್ರಮ ಹಾಗೂ ನಿರಂತರ ಅಭ್ಯಾಸದಿಂದ ಈ ಸಾಧನೆ ಸಾಧ್ಯವಾಗಿದೆ. ಶಿಖರ್ ಶೆಟ್ಟಿಯವರ ತಂದೆ ರಾಜೇಶ್ ಶೆಟ್ಟಿ ಇವರು ಟೆನಿಸ್ಬಾಲ್ ಕ್ರಿಕೆಟ್ ನ ಪ್ರಸಿದ್ಧ ತಂಡಗಳಾದ ಕರಾವಳಿ ಕುಂದಾಪುರ, ಚಕ್ರವರ್ತಿ ಕುಂದಾಪುರ ಹಾಗೂ ಟೊರ್ಪೆಡೋಸ್ ಕುಂದಾಪುರ ತಂಡಗಳನ್ನು ಪ್ರತಿನಿಧಿಸಿದ್ದರು.

ಸ್ಪೋರ್ಟ್ಸ್ ಕನ್ನಡದ ಪರವಾಗಿ ಶಿಖರ್ ಶೆಟ್ಟಿಗೆ ಹಾರ್ದಿಕ ಅಭಿನಂದನೆಗಳು. ಮುಂಬರುವ ಮಹಾರಾಜ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿ ನಮ್ಮೂರ ಕೀರ್ತಿ ಹೆಚ್ಚಿಸಲಿ ಎಂಬ ಹಾರೈಕೆ!

 

 

LEAVE A REPLY

Please enter your comment!
Please enter your name here

six + 2 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you