ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ರಿಕೆಟ್ ವೀಕ್ಷಕ ವಿವರಣೆಯಲ್ಲಿ ಸಾರ್ಥಕ 33 ವರ್ಷಗಳ ಪೂರೈಸಿದ ಸವಿನೆನಪಿಗಾಗಿ ಶಿವ...

ಕ್ರಿಕೆಟ್ ವೀಕ್ಷಕ ವಿವರಣೆಯಲ್ಲಿ ಸಾರ್ಥಕ 33 ವರ್ಷಗಳ ಪೂರೈಸಿದ ಸವಿನೆನಪಿಗಾಗಿ ಶಿವ ಬಿಗ್ ಬ್ಯಾಷ್-2023

-

- Advertisment -spot_img
ಕಳೆದ 33 ವರ್ಷಗಳಿಂದ ರಾಜ್ಯದ ವಿವಿಧೆಡೆ ವೀಕ್ಷಕ ವಿವರಣೆಯನ್ನು ನೀಡುತ್ತಾ ಬಂದಿರುವವರು ಕೋಟ ಶಿವನಾರಾಯಣ ಐತಾಳ್. ಇವರು ಕಳೆದ 23 ವರ್ಷಗಳಿಂದ ಕೆ ಎಸ್ ಸಿ ಎ ಅಂಗೀಕೃತ ನಿರ್ಣಾಯಕರಾಗಿ ಉಡುಪಿ ಜಿಲ್ಲೆಯ ಹಿರಿಯ ನಿರ್ಣಾಯಕರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.
ದುಬೈಯಲ್ಲಿ ನಡೆದ ಅರಬ್ ಪ್ರೀಮಿಯರ್ ಲೀಗ್  ಪಂದ್ಯಾವಳಿಯಲ್ಲಿಯೂ  ವೀಕ್ಷಕರ ವಿವರಣೆಯನ್ನು ನೀಡಿ ಖ್ಯಾತಿಯನ್ನು ಪಡೆದಿದ್ದಾರೆ.ಇವರ ಸಂಸ್ಥೆ ಶಿವ  ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಎಂಬ ಹೆಸರಿನಲ್ಲಿ 25 ವರ್ಷಗಳಿಂದ   ಕಾರ್ಯನಿರ್ವಹಿಸುತ್ತಾ ಇದೆ. ಇವರು ಈಗಾಗಲೇ ಕೋಟದಲ್ಲಿ ಒಂದು ಡಬಲ್ ವಿಕೆಟ್ ಪಂದ್ಯಾಟ ನಡೆಸಿದ್ದಾರೆ. ಅದಾದ ಬಳಿಕ ಹೊನಲು ಬೆಳಕಿನ ಪಂದ್ಯಾಟವನ್ನು ಕೂಡ ಆಯೋಜಿಸಿದ್ದಾರೆ. ಅದೇ ರೀತಿ ಚೆಸ್ ಪಂದ್ಯಾಟವನ್ನು ಕೂಡ ಸಂಘಟಿಸಿದ್ದಾರೆ. ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಸ್ವರಾಂಜಲಿ ಎಂಬ ಸಂಗೀತ ಕಾರ್ಯಕ್ರಮ ಕೂಡ ಇವರ ನೇತೃತ್ವದಲ್ಲಿ ಜರುಗಿತ್ತು
ಇದೇ ನಿಟ್ಟಿನಲ್ಲಿ ಇವರ 33 ವರ್ಷಗಳ ವೀಕ್ಷಕ ವಿವರಣೆಯ ಸಾರ್ಥಕ ಪಯಣವನ್ನು ನೆನಪಿಸಿಕೊಳ್ಳುವ ಸಲುವಾಗಿ ಇದೇ ಅಕ್ಟೋಬರ್ 28, 29 ರಂದು ಒಂದು ಕ್ರಿಕೆಟ್ ಪಂದ್ಯಾಟವನ್ನು ನಡೆಸುತ್ತಿದ್ದಾರೆ. ಆಯ್ದ 12 ತಂಡಗಳ ನಡುವಿನ ಹಣಾಹಣಿ ‘ ಶಿವ ಬಿಗ್ ಬಾಷ್ ‘ ಎನ್ನುವ ನಾಮಾಂಕಿತದಲ್ಲಿ ಪಂದ್ಯಾಟ ನಡೆಯಲಿದೆ. ಈ ಒಂದು ಪಂದ್ಯಾ ಕೂಟದಲ್ಲಿ ಪೊಲೀಸರ ತಂಡ, ಜಿಲ್ಲಾಧಿಕಾರಿಗಳ ತಂಡ,  ಡಾಕ್ಟರ್ಸ್ ಗಳ ತಂಡ, ವಕೀಲರ ತಂಡ,  ಅಚೀವರ್ಸ್ ತಂಡ, ಇಂಜಿನಿಯರ್ಸ್ ತಂಡ, ಲೆಕ್ಕಪರಿಶೋಧಕರ  ತಂಡ ಅದೇ ರೀತಿಯಲ್ಲಿ ಕಸ್ತೂರ್ಬಾ ಹಾಸ್ಪಿಟಲ್,  ತಂಡ ರೋಬೋ ಸಾಫ್ಟ್ ತಂಡ,  ಉಡುಪಿ ಜಿಲ್ಲಾ ಶಿಕ್ಷಕರ ತಂಡ ಇವಲ್ಲದೆ  ತುಳು ಸಿನಿಮಾ ನಟರ ತಂಡ ಈ ಎಲ್ಲಾ ತಂಡಗಳು ಪಾರಂಪಳ್ಳಿ ಸಾಲಿಗ್ರಾಮದ ಹಾಳು ಕೋಟೆ ಮೈದಾನದಲ್ಲಿ ಪಂದ್ಯಗಳನ್ನು ಆಡಲಿವೆ.ಪಂದ್ಯಾಟದ ನೇರ ಪ್ರಸಾರ ಶಿವ ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಶಿವ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಗೆ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಶುಭಹಾರೈಕೆಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

12 + 2 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you