Categories
ಕ್ರಿಕೆಟ್ ರಾಜ್ಯ

ಬೆಂಗಳೂರು-ಹುಳಿಮಾವು ಅರಕೆರೆ ವಾರ್ಡ್ ನಂ-193 ಸದಸ್ಯರಿಗಾಗಿ ನಡೆಯುತ್ತಿರುವ “ಶ್ರೀ ಸತೀಶ್ ರೆಡ್ಡಿ ಕಪ್ 2020”

ಬೆಂಗಳೂರು ಹುಳಿಮಾವು ಗ್ರಾಮದ ಅರಕೆರೆ ವಾರ್ಡ್ ನಂ-193 ನ ಸದಸ್ಯರು ಹಲವಾರು ವರ್ಷಗಳಿಂದ ಯಶಸ್ವಿ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ನಡೆಸಿಕೊಂಡು ಬಂದಿರುತ್ತಾರೆ.
ಅದೇ ರೀತಿ 2020 ಸಾಲಿನಲ್ಲಿ ಜನಪ್ರಿಯ ಶಾಸಕರಾದ ಶ್ರೀ‌.ಎಂ.ಸತೀಶ್ ರೆಡ್ಡಿಯವರ ಹುಟ್ಟು ಹಬ್ಬದ ಪ್ರಯುಕ್ತ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ.
20 ತಂಡಗಳಿಗೆ ಅವಕಾಶ ಕಲ್ಪಿಸಲಾದ ಈ ಟೂರ್ನಮೆಂಟ್ ನಲ್ಲಿ 10 ತಂಡಗಳು ಅರಕೆರೆ ವಾರ್ಡ್ ಹಾಗೂ ಬೊಮ್ಮನಹಳ್ಳಿ ವಿಧಾನ‌ಸಭಾ ಕ್ಷೇತ್ರದ 10 ತಂಡಗಳು ಸ್ಪರ್ಧಿಸುತ್ತಿದೆ.ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 1 ಲಕ್ಷ ,ದ್ವಿತೀಯ ಸ್ಥಾನಿ 50 ಸಾವಿರ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದು,
ಭಾಗವಹಿಸುವ ಎಲ್ಲಾ ತಂಡಗಳಿಗೂ 10 ಸಾವಿರ ನಗದು ಬಹುಮಾನ‌ ನೀಡಿ ಗೌರವಿಸಲಾಗುತ್ತಿದೆ.
ವಿಶೇಷವಾಗಿ ಡಿಸೆಂಬರ್-13 ರವಿವಾರದಂದು ಶಾಸಕರಾದ ಶ್ರೀ.ಎಂ.ಸತೀಶ್ ರೆಡ್ಡಿಯವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.
ಪಂದ್ಯಾಟದ ನೇರ ಪ್ರಸಾರ ಕ್ರಿಕ್ ಸೇ ಬಿತ್ತರಿಸುತ್ತಿದ್ದು,ವೀಕ್ಷಕ ವಿವರಣೆಯಲ್ಲಿ ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಶಾಂತ್ ಅಂಬಲಪಾಡಿ ಹಾಗೂ ರಾಘವೇಂದ್ರ ಮಟಪಾಡಿ ಸಹಕರಿಸುತ್ತಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

2 × 5 =