ಕ್ರಿಕೆಟ್ಶ್ರೇಯಸ್ ಅಯ್ಯರ್‌ಗೆ ಮತ್ತೆ ಕಾಡಿದ ಬೆನ್ನು ನೋವಿನ ಸಮಸ್ಯೆ..?

ಶ್ರೇಯಸ್ ಅಯ್ಯರ್‌ಗೆ ಮತ್ತೆ ಕಾಡಿದ ಬೆನ್ನು ನೋವಿನ ಸಮಸ್ಯೆ..?

-

- Advertisment -spot_img
ಅಹಮದಾಬಾದ್ ನಲ್ಲಿ  ಆಸ್ಟ್ರೇಲಿಯಾ ವಿರುದ್ಧ  ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಆರಂಭಿಕ ಎರಡು ಟೆಸ್ಟ್‌ ಪಂದ್ಯಗಳಿಂದ ಬೆನ್ನು ನೋವಿನ ಸಮಸ್ಯೆಯಿಂದಾಗಿ ಹೊರಗುಳಿದಿದ್ದ  ಭಾರತ ತಂಡದ  ಭರವಸೆಯ ಯುವ ಆಟಗಾರ ಶ್ರೇಯಸ್ ಅಯ್ಯರ್ 4ನೇ ಟೆಸ್ಟ್ ಪಂದ್ಯದಲ್ಲಿ ತಂಡದಲ್ಲಿದ್ದು ಬ್ಯಾಟಿಂಗ್‍ಗೆ ಇಳಿಯದಿರುವುದು ಕ್ರಿಕೆಟ್ ಆಭಿಮಾನಿಗಳಿಗೆ ನಿರಾಸೆಯಾಗಿದೆ.
ನಿಜವಾದ ಕಾರಣ ತಿಳಿಯದೆ ಕ್ರಿಡಾಂಗಣದಲ್ಲಿದ್ದ ಪ್ರೇಕ್ಷಕರು ಭಾರತೀಯರ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರತಿ ವಿಕೆಟ್ ಬಿದ್ದಾಗಲು ಈಗ ಶ್ರೇಯಸ್ ಆಡಲು ಬರಬಹುದು ಎಂದು ಕಾದಿದ್ದು ಬಿಟ್ಟರೆ ಶ್ರೇಯಸ್ ಅಯ್ಯರ್‌ ಕೊನೆಗೂ ಬ್ಯಾಟಿಂಗ್ ಗೆ ಬರದೆ ಪೆವಿಲಿಯನ್ ನಲ್ಲೆ ಉಳಿದರು. ಭಾರತ ಒಂಬತ್ತು ವಿಕೆಟ್ ಗಳನಷ್ಟೆ ಕಳೆದುಕೊಂಡು ತನ್ನ ಮೊದಲ ಇನಿಂಗ್ಸ್ ಮುಗಿಸಿತು.
ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಡಲು ಬಾರದಿರಲು ಕಾರಣವೇನು ಎಂದು ಕಾದು ಕುಳಿತ ಕ್ರಿಕೆಟ್ ಪ್ರೇಮಿಗಳಿಗೆ ಉತ್ತರ ಸಿಕ್ಕಿದೆ.   ನಿಜವಾದ ಕಾರಣವನ್ನು ಬಿಸಿಸಿಐ ಹೊರಹಾಕಿದೆ.
ಶ್ರೇಯಸ್ ಅಯ್ಯರ್ ಅವರು ಎನ್‍ಸಿಎಯಲ್ಲಿ ತರಬೇತಿ ಪಡೆದು 3ನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾದರಾದರೂ ದೊಡ್ಡ ಮೊತ್ತ ದಾಖಲಿಸುವಲ್ಲಿ ವಿಫಲರಾಗಿದ್ದರು. ನಾಲ್ಕನೇ ಟೆಸ್ಟ್‍ನಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವ ಭರವಸೆ ಹೊತ್ತಿದ್ದ ಅಯ್ಯರ್ ಗೆ ಮತ್ತೆ ಬೆನ್ನು ನೋವಿನ ಸಮಸ್ಯೆ ಎದುರಾಗಿದೆ.
ಅಂತಿಮ ಟೆಸ್ಟ್‌ನಲ್ಲಿ ಮೂರನೇ ದಿನದಾಟದ ವೇಳೆ ಶ್ರೇಯಸ್ ಅಯ್ಯರ್‌ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಸ್ಕ್ಯಾನ್ ಕೂಡ ಮಾಡಲಾಗಿದ್ದು, ಅವರನ್ನು ವೈದ್ಯಕೀಯ ನಿಗಾದಲ್ಲಿ ಇಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಯ್ಯರ್ ಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಶತಕ ವೀರ ಶುಭಮನ್ ಗಿಲ್ ಔಟಾಗುತ್ತಿದ್ದಂತೆ ರವೀಂದ್ರಾ ಜಡೇಜಾ ಅವರಿಗೆ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಆಡುವ ಅವಕಾಶ ಕಲ್ಪಿಸಲಾಗಿತ್ತು.
ನಾಲ್ಕನೇ ದಿನದಾಟದ ಆರಂಭದಲ್ಲೇ  ರವೀಂದ್ರ ಜಡೇಜಾ ಔಟಾಗುತ್ತಿದ್ದಂತೆ, ಶ್ರೇಯಸ್ ಅಯ್ಯರ್ ಕ್ರೀಸ್‍ಗಿಳಿಯುತ್ತಾರೆ ಎಂದು ಅಂದಾಜಿಸಲಾಗಿತ್ತಾದರು ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿದ್ದರಿಂದ ವಿಕೆಟ್ ಕೀಪರ್ ಶ್ರೀಕರ್ ಭರತ್ ಮೈದಾನಕ್ಕಿಳಿಯಬೇಕಾಯಿತು
ಶ್ರೇಯಸ್ ಅಯ್ಯರ್ ಅವರ ಬೆನ್ನು ನೋವು ಹೆಚ್ಚಾಗಿದ್ದರಿಂದ ವಿಕೆಟ್ ಕೀಪರ್ ಶ್ರೀಕರ್ ಭರತ್ ಔಟಾದ ನಂತರವೂ ಕ್ರೀಸ್‍ಗೆ  ಅಲ್‍ರೌಂಡರ್ ಅಕ್ಷರ್‍ಪಟೇಲ್ ಅವರು ಕ್ರೀಸ್‍ಗೆ ಇಳಿದಿದ್ದರು ವಿರಾಟ್ ಕೊಯ್ಲಿ ಜೊತೆಗೂಡಿ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದ ಅಕ್ಷರ್ 79 ರನ್ ಗೆ ಔಟಾಗಿ ಶತಕವಂಚಿತರಾದರು. ಕೊಯ್ಲಿ ಕೂಡ ಸರಿಯಾದ ಜೊತೆಗಾರರಿಲ್ಲದ ಕಾರಣ ಅಂತಿಮ ಹಂತದಲ್ಲಿ ಮನಬಂದಂತೆ ಬ್ಯಾಟ್ ಬಿಸಿ ಔಟಾಗಿ ಕೇವಲ 14 ರನ್ ನಿಂದ ದ್ವಿಶತಕದಿಂದ ವಂಚಿತರಾದರು . ಆದರೂ ಭಾರತ ಆಸ್ಟ್ರೇಲಿಯಾ ಎದುರು ಮೊದಲ ಇನ್ನಿಂಗ್ಸ್ ನಲ್ಲಿ 88 ರನ್ ಗಳ ಲೀಡ್ ಪಡೆದಿದೆ. ಒಂದು ದಿನದ ಆಟ ಬಾಕಿ ಇದ್ದು ಪಂದ್ಯ ಡ್ರಾ ಆಗುವ ಸಾಧ್ಯತೆ ಹೆಚ್ಚಾಗಿದೆ.  ಭಾರತಕ್ಕೆ ಗೆಲ್ಲುವ ಅವಕಾಶವಿದೆ ಎಲ್ಲವನ್ನೂ ಕಾದು ನೋಡಬೇಕಿದೆ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen + 17 =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you