ಕ್ರಿಕೆಟ್ಕರ್ನಾಟಕಕ್ಕೆ ಕ್ರಿಕೆಟ್’ಗೆ ಮರಳಿದ ಶ್ರೇಯಸ್ ಗೋಪಾಲ್

ಕರ್ನಾಟಕಕ್ಕೆ ಕ್ರಿಕೆಟ್’ಗೆ ಮರಳಿದ ಶ್ರೇಯಸ್ ಗೋಪಾಲ್

-

- Advertisment -spot_img

‘ಆ ಕ್ರಿಕೆಟಿಗ ಆ ರಾಜ್ಯಕ್ಕೆ ಹೋದ.. ಈ ಕ್ರಿಕೆಟಿಗ ರಾಜ್ಯವನ್ನು ತೊರೆದು ಹೋದ.. ಇವನು ಹೋದ, ಅವನು ಹೋದ’ ಎಂಬ ಸುದ್ದಿಗಳನ್ನು ಕೇಳಿ ಕೇಳಿ ಬೇಸರಗೊಂಡಿದ್ದ ಕರ್ನಾಟಕ ಕ್ರಿಕೆಟ್ ತಂಡದ ಅಪ್ಪಟ ಅಭಿಮಾನಿಗಳಿಗೆ ಇದು ಶುಭ ಸುದ್ದಿ.

ಕರ್ನಾಟಕ ರಣಜಿ ತಂಡದ ಆಪತ್ಬಾಂಧನ ಮರಳಿ ರಾಜ್ಯಕ್ಕೆ ಬಂದಿದ್ದಾನೆ. ಕರ್ನಾಟಕ ಪರ 11 ವರ್ಷ ಆಡಿ, ಕಳೆದ ಬಾರಿ ಕೇರಳ ತಂಡ ಸೇರಿಕೊಂಡಿದ್ದ ಶ್ರೇಯಸ್ ಗೋಪಾಲ್ ಈ ವರ್ಷದಿಂದ ಮತ್ತೆ ಕರ್ನಾಟಕ ಪರ ಆಡಲು ಸಜ್ಜಾಗಿದ್ದಾರೆ.

ಕಳೆದ 10 ವರ್ಷಗಳಲ್ಲಿ ಕರ್ನಾಟಕ ತಂಡವನ್ನು ತೊರೆದಿರುವ ಪ್ರಮುಖ ಆಟಗಾರರ ಸಂಖ್ಯೆ 10. ವಿನಯ್ ಕುಮಾರ್, ರಾಬಿನ್ ಉತ್ತಪ್ಪ, ಗಣೇಶ್ ಸತೀಶ್, ಅಮಿತ್ ವರ್ಮಾ, ಸ್ಟುವರ್ಟ್ ಬಿನ್ನಿ, ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಕೆ.ವಿ ಸಿದ್ಧಾರ್ಥ್, ರೋಹನ್ ಕದಂ, ಆರ್.ಸಮರ್ಥ್.. ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಈ ವರ್ಷ ಕೃಷ್ಣಪ್ಪ ಗೌತಮ್ ಕೂಡ ಕರ್ನಾಟಕ ತಂಡವನ್ನು ತೊರೆಯುವ ಯೋಚನೆಯಲ್ಲಿದ್ದಾರೆ.

ಕಳೆದ ವರ್ಷ ಕರ್ನಾಟಕ ತಂಡವನ್ನು ತೊರೆದು ಕೇರಳ ತಂಡ ಸೇರಿಕೊಂಡಿದ್ದ ಶ್ರೇಯಸ್ ಗೋಪಾಲ್ ಕರ್ನಾಟಕದ ರಣಜಿ ಹೀರೋಗಳಲ್ಲಿ ಒಬ್ಬರು. ರಾಜ್ಯ ತಂಡ 2013ರಿಂದ 2015ರವರೆಗೆ ಸತತ ಎರಡು ಬಾರಿ ರಣಜಿ ಟ್ರೋಫಿ, ಇರಾನಿ ಕಪ್, ವಿಜಯ್ ಹಜಾರೆ ಟ್ರೋಫಿಗಳನ್ನು ಗೆದ್ದು “ಅವಳಿ ತ್ರಿವಳಿ” ಸಾಧನೆ ಮಾಡಿದಾಗ, ಆ ಐತಿಹಾಸಿಕ ತಂಡದ ಭಾಗವಾಗಿದ್ದವರು ಶ್ರೇಯಸ್ ಗೋಪಾಲ್.

ಪರಿಣಾಮಕಾರಿ ಲೆಗ್’ಸ್ಪಿನ್ನರ್, ಕೆಳ ಮಧ್ಯಮ ಕ್ರಮಾಂಕದ ನಂಬಿಕಸ್ಥ ಬ್ಯಾಟ್ಸ್’ಮನ್. ಕೇರಳಕ್ಕೆ ವಲಸೆ ಹೋಗುವ ಮುನ್ನ ಕರ್ನಾಟಕ ರಣಜಿ ತಂಡದ ಆಪದ್ಬಾಂಧವನಾಗಿದ್ದವರು ಶ್ರೇಯಸ್ ಗೋಪಾಲ್. ಅದರಲ್ಲೂ ಆರ್.ವಿನಯ್ ಕುಮಾರ್ ಕರ್ನಾಟಕ ತಂಡವನ್ನು ತೊರೆದ ನಂತರ, ಕೆಳ ಕ್ರಮಾಂಕದಲ್ಲಿ ವಿನಯ್ ಸ್ಥಾನವನ್ನು ಯಶಸ್ವಿಯಾಗಿ ತುಂಬಿದ ಆಟಗಾರ ಯಾರಾದರೂ ಇದ್ದರೆ ಅದು ಶ್ರೇಯಸ್ ಗೋಪಾಲ್.

ಆದರೆ ಕ್ರಿಕೆಟ್’ನ ಮೂರೂ ಫಾರ್ಮ್ಯಾಟ್’ಗಳಲ್ಲಿ ಆಡಲು ಬಯಸಿದ್ದ ಶ್ರೇಯಸ್ ಗೋಪಾಲ್’ಗೆ ಆ ಅವಕಾಶವನ್ನು ತಪ್ಪಿಸಲಾಯಿತು. ಪ್ರವೀಣ್ ದುಬೆ ಎಂಬ ಆಟಗಾರನಿಗಾಗಿ ಶ್ರೇಯಸ್ ಗೋಪಾಲ್ ಅವರನ್ನು ಪದೇ ಪದೇ ಕಡೆಗಣಿಸಲಾಯಿತು. ಅವರನ್ನು ರೆಡ್ ಬಾಲ್ ಕ್ರಿಕೆಟ್’ಗೆ ಮಾತ್ರ ಬ್ರ್ಯಾಂಡ್ ಮಾಡಲಾಯಿತು. ವೈಟ್ ಬಾಲ್ ಕ್ರಿಕೆಟ್’ನಲ್ಲಿ ಕೈ ತಪ್ಪಿದ ಅವಕಾಶ ಶ್ರೇಯಸ್ ಗೋಪಾಲ್ ಅವರ ಐಪಿಎಲ್ ವೃತ್ತಿಜೀವನಕ್ಕೂ ಪೆಟ್ಟು ಕೊಟ್ಟಿತು.

ತನ್ನ ಪ್ರತಿಭೆಗೆ ಬೆಲೆ ಇರದ ಕಡೆ ಇರುವುದಕ್ಕಿಂತ ಹೊರ ನಡೆಯುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದ ಶ್ರೇಯಸ್ ಗೋಪಾಲ್, ಕೇರಳ ಪರ ಆಡಲು 2 ವರ್ಷ ಒಪ್ಪಂದ ಮಾಡಿಕೊಂಡು ಬಿಟ್ಟಿದ್ದರು. ಈಗ ಶ್ರೇಯಸ್ ಗೋಪಾಲ್ ಅವರ ಮೌಲ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಅರ್ಥವಾದಂತಿದೆ.

‘ಹೋಗುವುದಾದರೆ ಹೋಗಲಿ ಬಿಡಿ’ ಎಂದವರೇ ಶ್ರೇಯಸ್’ನನ್ನು ಮರಳಿ ಕರೆಸಿಕೊಂಡಿದ್ದಾರೆ. ಕೇರಳ ಕ್ರಿಕೆಟ್ ಸಂಸ್ಥೆ ಜೊತೆ ಮಾಡಿಕೊಂಡಿದ್ದ ಒಪ್ಪಂದವನ್ನು ಕಡಿದುಕೊಂಡು ಕರ್ನಾಟಕ ಪರ ಆಡಲು ಶ್ರೇಯಸ್ ಗೋಪಾಲ್ ರೆಡಿಯಾಗಿದ್ದಾರೆ.

LEAVE A REPLY

Please enter your comment!
Please enter your name here

four × 2 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you