ಕ್ರಿಕೆಟ್ಸೃಷ್ಟಿ ಸೀನಿಯರ್ಸ್ ಕಪ್-ರೋಚಕ ಫೈನಲ್-ಫ್ರೆಂಡ್ಸ್ ಬೆಂಗಳೂರನ್ನು ಮಣಿಸಿದ ಆನಂದ್ ಇಲೆವೆನ್ ಗೆ...

ಸೃಷ್ಟಿ ಸೀನಿಯರ್ಸ್ ಕಪ್-ರೋಚಕ ಫೈನಲ್-ಫ್ರೆಂಡ್ಸ್ ಬೆಂಗಳೂರನ್ನು ಮಣಿಸಿದ ಆನಂದ್ ಇಲೆವೆನ್ ಗೆ ಪ್ರಶಸ್ತಿ

-

- Advertisment -spot_img
ಬೆಂಗಳೂರು-ಸೃಷ್ಟಿ ಲೋಕೇಶ್ ಇವರ ಸಾರಥ್ಯದಲ್ಲಿ,
ಅವಿಘ್ನ ಸೃಷ್ಟಿ ಬೆಂಗಳೂರು ತಂಡದ ಆಶ್ರಯದಲ್ಲಿ ಬೆಂಗಳೂರಿನ ಮಾಕಳಿಯಲ್ಲಿ ನಡೆದ”44+ಸೃಷ್ಟಿ ಸೀನಿಯರ್ಸ್ ಕಪ್” ಪಂದ್ಯಾಟದ ಫೈನಲ್ ನಲ್ಲಿ ಆನಂದ್ ಇಲೆವೆನ್ ತಂಡ ಫ್ರೆಂಡ್ಸ್ ಬೆಂಗಳೂರು ವಿರುದ್ಧ 2 ರನ್ ಗಳ ಅಂತರದ ಜಯಗಳಿಸಿ,ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆನಂದ್ ಇಲೆವೆನ್ ನಿಗದಿತ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದ್ದರು.ಗೆಲುವಿನ ಗುರಿಯನ್ನು ಬೆಂಬತ್ತಿದ ಫ್ರೆಂಡ್ಸ್ ಬೆಂಗಳೂರು 8 ಓವರ್ ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 67 ರನ್ ಗಳಿಸಿ ಕೇವಲ 2 ರನ್ ಅಂತರದಲ್ಲಿ ಸೋಲೊಪ್ಪಿಕೊಂಡಿತ್ತು.
ಬೆಂಗಳೂರಿನ ಹಿರಿಯ ತಂಡ ಜೈ ಕರ್ನಾಟಕ ಬೆಂಗಳೂರು,ಫ್ಯೂಚುರಾ ಇಲೆವೆನ್,ಸೃಷ್ಟಿ ಬೆಂಗಳೂರು ಮತ್ತು ನಾಗಾ ಇಲೆವೆನ್ ಕ್ವಾರ್ಟರ್ ಫೈನಲ್ ಹಂತದಲ್ಲಿ ನಿರ್ಗಮಿಸಿದರೆ,ರೋಚಕ ಸೆಮಿಫೈನಲ್ಸ್ ನಲ್ಲಿ ಫ್ರೆಂಡ್ಸ್ ಬೆಂಗಳೂರು ಗುರುಬ್ರಹ್ಮ ತಂಡವನ್ನು ಮತ್ತು ಆನಂದ್ ಇಲೆವೆನ್ ಶ್ರೀ ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್ ಪ್ರವೇಶ ಪಡೆದಿದ್ದರು.
ಸೆಮಿಫೈನಲ್ ಹಂತದಲ್ಲಿ ವೀರಾವೇಶದ ಹೋರಾಟ ನೀಡಿಯೂ ಸೋಲೊಪ್ಪಿಕೊಂಡ ಗುರುಬ್ರಹ್ಮ ಮತ್ತು ಶ್ರೀ ಬೆಂಗಳೂರು ತಂಡಗಳ ನಡುವೆ ಟಾಸ್ ನಡೆಸಿ,
ಗುರುಬ್ರಹ್ಮ ಬೆಂಗಳೂರು ತೃತೀಯ  ಮತ್ತು ಶ್ರೀ ಬೆಂಗಳೂರು ಚತುರ್ಥ ಸ್ಥಾನ ಪಡೆದರು.
ಆನಂದ್ ಇಲೆವೆನ್ ಶ್ರೀಕಾಂತ್ ಫೈನಲ್ ಪಂದ್ಯ ಶ್ರೇಷ್ಟ ಮತ್ತು ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ಪ್ರಶಸ್ತಿ ಪಡೆದರೆ,ಆನಂದ್ ಇಲೆವೆನ್ ಹರೀಶ್ ಬಾಬು ಬೆಸ್ಟ್ ಬೌಲರ್ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡದ ಗಿರೀಶ್ ಸರಣಿ ಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ ಆರ್.ಡಿ ಇಲೆವೆನ್ ತಂಡದ ಮಾಲೀಕರಾದ ದೇವರಾಜ್ ಮತ್ತು ಹಿರಿಯ ಆಟಗಾರರೆಲ್ಲರೂ ಸೇರಿ ಸೀನಿಯರ್ಸ್ ಕಪ್ ನ ರೂವಾರಿ ಸೃಷ್ಟಿ ಲೋಕೇಶ್ ಇವರನ್ನು ಸನ್ಮಾನಿಸಿದರು.ಈ ವೇಳೆ ಫ್ರೆಂಡ್ಸ್ ಬೆಂಗಳೂರು ಮಾಲೀಕರಾದ ರೇಣು ಗೌಡ,
ಅವಿಘ್ನ ಸೃಷ್ಟಿ ತಂಡದ ವ್ಯವಸ್ಥಾಪಕರಾದ ರವೀಂದ್ರ ತೋಳಾರ್ ಮತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.
ವೀಕ್ಷಕ ವಿವರಣೆಯಲ್ಲಿ ಸಹಕರಿಸಿದ ವಿನಯ್ ಉದ್ಯಾವರ ಧನ್ಯವಾದ ಸಮರ್ಪಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

8 + 18 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you