9.9 C
London
Friday, March 29, 2024
Homeಕ್ರಿಕೆಟ್ಆರ್‌ಸಿಬಿ ಪರವಾಗಿ ಕೆಟ್ಟದಾಗಿ ಆಡಿದ ಸಿರಾಜ್ ಗೆ ನೆಟ್ಟಿಗರು ಹೇಳಿದ್ದು ಏನು? ನಿಮ್ಮಪ್ಪನ...

ಆರ್‌ಸಿಬಿ ಪರವಾಗಿ ಕೆಟ್ಟದಾಗಿ ಆಡಿದ ಸಿರಾಜ್ ಗೆ ನೆಟ್ಟಿಗರು ಹೇಳಿದ್ದು ಏನು? ನಿಮ್ಮಪ್ಪನ ಜೊತೆ ಆಟೋ ಓಡಿಸಿ ಕೊಂಡಿರು ಎಂದಿದ್ದರು

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img
ಅಂದು ಸಿರಾಜ್ ಬೆನ್ನಿಗೆ ನಿಂತು ಧೈರ್ಯತುಂಬಿ  ಪ್ರೋತ್ಸಾಹಿಸಿದವರು ಎಮ್ ಎಸ್ ಧೋನಿ ಈಗಲೂ ಸಿರಾಜ್ ಅವರನ್ನು ನೆನೆಯುತ್ತಾರೆ
ಕೆಕೆಆರ್ ವಿರುದ್ಧದ ಆ ಕೆಟ್ಟ ಪ್ರದರ್ಶನದ ನಂತರ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದೆ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೆಟ್ಟ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಆ ಪಂದ್ಯ ಮುಗಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅದರಲ್ಲೂ ತೀರ ಕೆಟ್ಟ ರೀತಿಯ ಟೀಕೆಗಳು ಎದುರಾಗಿದ್ದವು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ಕೆಲ ನೆಟ್ಟಿಗರು ನೀನು ಕ್ರಿಕೆಟ್ ಆಡಲು ಯೋಗ್ಯನಲ್ಲ  ಹೋಗಿ ನಿನ್ನ ತಂದೆಯ ಜೊತೆ ಸೇರಿಕೊಂಡು ಆಟೋ ರಿಕ್ಷಾ ಓಡಿಸು ಎಂದೆಲ್ಲಾ ನಿಂದಿಸಿದ್ದರು ಹಾಗೂ ಈ ಟೀಕೆಗಳನ್ನು ಓದಿ ಸಾಕಷ್ಟು ಚಿಂತೆಗೊಳಗಾಗಿದ್ದೆ ಎಂದು ಮೊಹಮ್ಮದ್ ಸಿರಾಜ್ ಹೇಳಿಕೊಂಡಿದ್ದಾರೆ
ಎಂಎಸ್ ಧೋನಿ ಹೇಳಿದ್ದ ಒಂದು ಮಾತು ನನ್ನ ಕ್ರಿಕೆಟ್ ಬದುಕಿಗೆ ಸಹಾಯಕ್ಕೆ ಬಂತು
ಹೀಗೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಕಳಪೆ ಪ್ರದರ್ಶನಕ್ಕೆ ಸಾಕಷ್ಟು ಕೆಟ್ಟ ಟೀಕೆಗಳನ್ನು ಎದುರಿಸುತ್ತಿದ್ದ ಮೊಹಮ್ಮದ್ ಸಿರಾಜ್ ತನಗೆ ಎಂಎಸ್ ಧೋನಿ ನೀಡಿದ್ದ ಸಲಹೆ ಸಹಾಯಕ್ಕೆ ಬಂತು ಎಂಬ ವಿಷಯವನ್ನು ಕೂಡ ಹೇಳಿಕೊಂಡಿದ್ದಾರೆ. ಹೌದು, ಮೊಹಮ್ಮದ್ ಸಿರಾಜ್ ಅವರಿಗೆ ಆರಂಭದಲ್ಲಿಯೇ ‘ನೀನು ಉತ್ತಮ ಪ್ರದರ್ಶನ ನೀಡಿದರೆ ಎಲ್ಲರೂ ಕೂಡ ನಿನಗೆ ಪ್ರಶಂಸೆಯ ಸುರಿಮಳೆ ಸುರಿಸುತ್ತಾರೆ, ಆದರೆ ಕಳಪೆ ಪ್ರದರ್ಶನ ನೀಡಿದರೆ ಅದೇ ಜನ ನಿನ್ನ ವಿರುದ್ಧ ಟೀಕಾಪ್ರಹಾರವನ್ನು ನಡೆಸುತ್ತಾರೆ ಹಾಗೂ ಆಕ್ರೋಶವನ್ನು ವ್ಯಕ್ತಪಡಿಸುತ್ತಾರೆ. ಹೀಗಾಗಿ ನೀನು ಅವುಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು ನಿನ್ನ ಆಟದ ಕಡೆಯಷ್ಟೆ ಗಮನ ಹರಿಸು ಎಂದು ಎಂ ಎಸ್ ಧೋನಿ ಸಲಹೆ ನೀಡಿದ್ದರಂತೆ. ಹೀಗೆ ಎಂ ಎಸ್ ಧೋನಿ ಅವರ ಸಲಹೆಯಂತೆ ತಾನು ಆ ಟೀಕೆಗಳನ್ನೆಲ್ಲಾ ಬದಿಗೆ ಸರಿಸಿ ಉತ್ತಮ ಪ್ರದರ್ಶನ ನೀಡುವತ್ತ ಗಮನ ಹರಿಸಿದೆ ಎನಾದರು ಸಾಧಿಸಲೆ ಬೆಕೆನ್ನುವ ಹಠಕ್ಕೆ ಬಿದ್ದೆ ಎಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿರುವ ಮೊಹಮ್ಮದ್ ಸಿರಾಜ್ 2019ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ತಾನು ನೀಡಿದ್ದ ಕೆಟ್ಟ ಪ್ರದರ್ಶನದಿಂದ ತನ್ನ ಕ್ರಿಕೆಟ್ ವೃತ್ತಿ ಜೀವನವೇ ಮುಗಿದು ಹೋಯಿತು ಎಂದುಕೊಂಡಿದ್ದರಂತೆ. ಆದರೆ ನಂತರ ಚಿಂತಿಸಿದ ಮೊಹಮ್ಮದ್ ಸಿರಾಜ್ ಇನ್ನೂ ತನಗೆ ಕ್ರಿಕೆಟ್ ಆಡುವ ವಯಸ್ಸಿದೆ ಎಂದು ಮನಸ್ಸು ಮಾಡಿ, ಹೆಚ್ಚಿನ ಗಮನ ಹರಿಸಿ ನಂತರ ನಡೆದ 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ ಹಾಗೂ ಆ ಆವೃತ್ತಿಯಲ್ಲಿ ಅದೇ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯ ತನ್ನ ವೃತ್ತಿ ಜೀವನವನ್ನೇ ಬದಲಾಯಿಸಿತು ಎಂದಿದ್ದಾರೆ. ಹೌದು, ಮೊಹಮ್ಮದ್ ಸಿರಾಜ್ 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದ
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 8 ರನ್ ನೀಡಿ 3 ವಿಕೆಟ್ ಪಡೆದು ಸೇಡು ತಿರಿಸಿಕೊಂಡು ಭರ್ಜರಿಯಾಗಿ ಮಿಂಚಿದ್ದರು. ಹೀಗೆ ತಾನು ಕಮ್ ಬ್ಯಾಕ್ ಮಾಡಿದ ಕುರಿತು ಹೇಳಿಕೊಂಡಿರುವ ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗೆ ಕೂಡ ಇದೇ ವೇಳೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೌಲರ್ ಓರ್ವ ಆ ರೀತಿ ಕೆಟ್ಟ ಪ್ರದರ್ಶನ ನೀಡಿದ ನಂತರ ಯಾವುದೇ ಫ್ರಾಂಚೈಸಿ ಕೂಡ ಅವಕಾಶ ನೀಡುತ್ತಿರಲಿಲ್ಲ, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ಅವಕಾಶ ನೀಡಿದ್ದರಿಂದ ತಾನು ಇಂದು ಈ ಸ್ಥಾನದಲ್ಲಿದ್ದೇನೆ ಎಂಬುದನ್ನು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.
ಮೊಹಮ್ಮದ್ ಸಿರಾಜ್ ಇಂದು ಭಾರತ ತಂಡದ ನಂಬುಗೆಯ ಬೌಲರ್ ಆಗಿ ಮಿಂಚುತ್ತಿದ್ದಾರೆ ಪಂದ್ಯದಿಂದ ಪಂದ್ಯಕ್ಕೆ  ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

1 × 2 =