ಕ್ರಿಕೆಟ್ಆರ್‌ಸಿಬಿ ಪರವಾಗಿ ಕೆಟ್ಟದಾಗಿ ಆಡಿದ ಸಿರಾಜ್ ಗೆ ನೆಟ್ಟಿಗರು ಹೇಳಿದ್ದು...

ಆರ್‌ಸಿಬಿ ಪರವಾಗಿ ಕೆಟ್ಟದಾಗಿ ಆಡಿದ ಸಿರಾಜ್ ಗೆ ನೆಟ್ಟಿಗರು ಹೇಳಿದ್ದು ಏನು? ನಿಮ್ಮಪ್ಪನ ಜೊತೆ ಆಟೋ ಓಡಿಸಿ ಕೊಂಡಿರು ಎಂದಿದ್ದರು

-

- Advertisment -spot_img
ಅಂದು ಸಿರಾಜ್ ಬೆನ್ನಿಗೆ ನಿಂತು ಧೈರ್ಯತುಂಬಿ  ಪ್ರೋತ್ಸಾಹಿಸಿದವರು ಎಮ್ ಎಸ್ ಧೋನಿ ಈಗಲೂ ಸಿರಾಜ್ ಅವರನ್ನು ನೆನೆಯುತ್ತಾರೆ
ಕೆಕೆಆರ್ ವಿರುದ್ಧದ ಆ ಕೆಟ್ಟ ಪ್ರದರ್ಶನದ ನಂತರ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದೆ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೆಟ್ಟ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಆ ಪಂದ್ಯ ಮುಗಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅದರಲ್ಲೂ ತೀರ ಕೆಟ್ಟ ರೀತಿಯ ಟೀಕೆಗಳು ಎದುರಾಗಿದ್ದವು ಎಂಬುದನ್ನು ಬಿಚ್ಚಿಟ್ಟಿದ್ದಾರೆ. ಕೆಲ ನೆಟ್ಟಿಗರು ನೀನು ಕ್ರಿಕೆಟ್ ಆಡಲು ಯೋಗ್ಯನಲ್ಲ  ಹೋಗಿ ನಿನ್ನ ತಂದೆಯ ಜೊತೆ ಸೇರಿಕೊಂಡು ಆಟೋ ರಿಕ್ಷಾ ಓಡಿಸು ಎಂದೆಲ್ಲಾ ನಿಂದಿಸಿದ್ದರು ಹಾಗೂ ಈ ಟೀಕೆಗಳನ್ನು ಓದಿ ಸಾಕಷ್ಟು ಚಿಂತೆಗೊಳಗಾಗಿದ್ದೆ ಎಂದು ಮೊಹಮ್ಮದ್ ಸಿರಾಜ್ ಹೇಳಿಕೊಂಡಿದ್ದಾರೆ
ಎಂಎಸ್ ಧೋನಿ ಹೇಳಿದ್ದ ಒಂದು ಮಾತು ನನ್ನ ಕ್ರಿಕೆಟ್ ಬದುಕಿಗೆ ಸಹಾಯಕ್ಕೆ ಬಂತು
ಹೀಗೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಕಳಪೆ ಪ್ರದರ್ಶನಕ್ಕೆ ಸಾಕಷ್ಟು ಕೆಟ್ಟ ಟೀಕೆಗಳನ್ನು ಎದುರಿಸುತ್ತಿದ್ದ ಮೊಹಮ್ಮದ್ ಸಿರಾಜ್ ತನಗೆ ಎಂಎಸ್ ಧೋನಿ ನೀಡಿದ್ದ ಸಲಹೆ ಸಹಾಯಕ್ಕೆ ಬಂತು ಎಂಬ ವಿಷಯವನ್ನು ಕೂಡ ಹೇಳಿಕೊಂಡಿದ್ದಾರೆ. ಹೌದು, ಮೊಹಮ್ಮದ್ ಸಿರಾಜ್ ಅವರಿಗೆ ಆರಂಭದಲ್ಲಿಯೇ ‘ನೀನು ಉತ್ತಮ ಪ್ರದರ್ಶನ ನೀಡಿದರೆ ಎಲ್ಲರೂ ಕೂಡ ನಿನಗೆ ಪ್ರಶಂಸೆಯ ಸುರಿಮಳೆ ಸುರಿಸುತ್ತಾರೆ, ಆದರೆ ಕಳಪೆ ಪ್ರದರ್ಶನ ನೀಡಿದರೆ ಅದೇ ಜನ ನಿನ್ನ ವಿರುದ್ಧ ಟೀಕಾಪ್ರಹಾರವನ್ನು ನಡೆಸುತ್ತಾರೆ ಹಾಗೂ ಆಕ್ರೋಶವನ್ನು ವ್ಯಕ್ತಪಡಿಸುತ್ತಾರೆ. ಹೀಗಾಗಿ ನೀನು ಅವುಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು ನಿನ್ನ ಆಟದ ಕಡೆಯಷ್ಟೆ ಗಮನ ಹರಿಸು ಎಂದು ಎಂ ಎಸ್ ಧೋನಿ ಸಲಹೆ ನೀಡಿದ್ದರಂತೆ. ಹೀಗೆ ಎಂ ಎಸ್ ಧೋನಿ ಅವರ ಸಲಹೆಯಂತೆ ತಾನು ಆ ಟೀಕೆಗಳನ್ನೆಲ್ಲಾ ಬದಿಗೆ ಸರಿಸಿ ಉತ್ತಮ ಪ್ರದರ್ಶನ ನೀಡುವತ್ತ ಗಮನ ಹರಿಸಿದೆ ಎನಾದರು ಸಾಧಿಸಲೆ ಬೆಕೆನ್ನುವ ಹಠಕ್ಕೆ ಬಿದ್ದೆ ಎಂದು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿರುವ ಮೊಹಮ್ಮದ್ ಸಿರಾಜ್ 2019ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ತಾನು ನೀಡಿದ್ದ ಕೆಟ್ಟ ಪ್ರದರ್ಶನದಿಂದ ತನ್ನ ಕ್ರಿಕೆಟ್ ವೃತ್ತಿ ಜೀವನವೇ ಮುಗಿದು ಹೋಯಿತು ಎಂದುಕೊಂಡಿದ್ದರಂತೆ. ಆದರೆ ನಂತರ ಚಿಂತಿಸಿದ ಮೊಹಮ್ಮದ್ ಸಿರಾಜ್ ಇನ್ನೂ ತನಗೆ ಕ್ರಿಕೆಟ್ ಆಡುವ ವಯಸ್ಸಿದೆ ಎಂದು ಮನಸ್ಸು ಮಾಡಿ, ಹೆಚ್ಚಿನ ಗಮನ ಹರಿಸಿ ನಂತರ ನಡೆದ 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ ಹಾಗೂ ಆ ಆವೃತ್ತಿಯಲ್ಲಿ ಅದೇ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯ ತನ್ನ ವೃತ್ತಿ ಜೀವನವನ್ನೇ ಬದಲಾಯಿಸಿತು ಎಂದಿದ್ದಾರೆ. ಹೌದು, ಮೊಹಮ್ಮದ್ ಸಿರಾಜ್ 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದ
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 8 ರನ್ ನೀಡಿ 3 ವಿಕೆಟ್ ಪಡೆದು ಸೇಡು ತಿರಿಸಿಕೊಂಡು ಭರ್ಜರಿಯಾಗಿ ಮಿಂಚಿದ್ದರು. ಹೀಗೆ ತಾನು ಕಮ್ ಬ್ಯಾಕ್ ಮಾಡಿದ ಕುರಿತು ಹೇಳಿಕೊಂಡಿರುವ ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗೆ ಕೂಡ ಇದೇ ವೇಳೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೌಲರ್ ಓರ್ವ ಆ ರೀತಿ ಕೆಟ್ಟ ಪ್ರದರ್ಶನ ನೀಡಿದ ನಂತರ ಯಾವುದೇ ಫ್ರಾಂಚೈಸಿ ಕೂಡ ಅವಕಾಶ ನೀಡುತ್ತಿರಲಿಲ್ಲ, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ಅವಕಾಶ ನೀಡಿದ್ದರಿಂದ ತಾನು ಇಂದು ಈ ಸ್ಥಾನದಲ್ಲಿದ್ದೇನೆ ಎಂಬುದನ್ನು ಮೊಹಮ್ಮದ್ ಸಿರಾಜ್ ಹೇಳಿದ್ದಾರೆ.
ಮೊಹಮ್ಮದ್ ಸಿರಾಜ್ ಇಂದು ಭಾರತ ತಂಡದ ನಂಬುಗೆಯ ಬೌಲರ್ ಆಗಿ ಮಿಂಚುತ್ತಿದ್ದಾರೆ ಪಂದ್ಯದಿಂದ ಪಂದ್ಯಕ್ಕೆ  ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

fourteen − 3 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you