SportsKannada ಸ್ಪೋರ್ಟ್ಸ್ ಕನ್ನಡ

ಸಾಮಾಜಿಕ ಚಿಂತಕ,ಶಿಕ್ಷಕ ಸಂತೋಷ್ ಕುಮಾರ್ ಪಡುಕರೆ ನಿಧನ

ಸಾಮಾಜಿಕ ಚಿಂತಕ,ಶಿಕ್ಷಕ ಸಂತೋಷ್ ಕುಮಾರ್ ಪಡುಕರೆ ನಿಧನ

 

ಕೋಟ-ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಾಮಾಜಿಕ ಚಿಂತಕ,ಶಿಕ್ಷಕ ಹಾಗೂ ಕ್ರೀಡಾನಿರೂಪಕ ಸಂತೋಷ್ ಕುಮಾರ್ ಪಡುಕರೆ ಇಂದು ನಿಧನರಾದರು.

ಕೋಟ ಪರಿಸರದಲ್ಲಿ ಹಲವಾರು ಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿ,ಸೊಗಸಾದ ನಿರೂಪಣೆಗೆ ಹೆಸರುವಾಸಿಯಾಗಿದ್ದ ಸಂತೋಷ್ ಕುಮಾರ್ 2012 ರಲ್ಲಿ ರಾಜ್ಯ ಸರಕಾರ ಕೊಡಮಾಡಿದ ಜಿಲ್ಲಾ ಯುವ ಪ್ರಶಸ್ತಿಗೂ ಭಾಜನರಾಗಿದ್ದರು.

ಅಗಲಿದ ದಿವ್ಯಾತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ,ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸ್ಪೋರ್ಟ್ಸ್ ಕನ್ನಡ ವಾಹಿನಿಯ ಪರವಾಗಿ ಪ್ರಾರ್ಥಿಸುತ್ತೇವೆ.