ಭರವಸೆಯ ಬೆಳಕುಕೋಲಾರದ ಸಮಾಜಸೇವಕಿ ಗಾಯತ್ರಿ ಮುತ್ತಪ್ಪ-ರಾಷ್ಟ್ರಮಟ್ಟದ "ಭಾರತ ಗೌರವ" ಪ್ರಶಸ್ತಿಗೆ ಆಯ್ಕೆ.

ಕೋಲಾರದ ಸಮಾಜಸೇವಕಿ ಗಾಯತ್ರಿ ಮುತ್ತಪ್ಪ-ರಾಷ್ಟ್ರಮಟ್ಟದ “ಭಾರತ ಗೌರವ” ಪ್ರಶಸ್ತಿಗೆ ಆಯ್ಕೆ.

-

- Advertisment -spot_img
ಕಳೆದ 10 ವರ್ಷಗಳಿಂದ ಸದ್ದಿಲ್ಲದೇ ಸಮಾಜಸೇವೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ಕೋಲಾರ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯ ಶ್ರೀ ಗಾಯತ್ರಿ ಮುತ್ತಪ್ಪ ಇವರ ಸಮಾಜಸೇವೆಯನ್ನು ಗುರುತಿಸಿ ಜನ್ಮಭೂಮಿ ಫೌಂಡೇಶನ್(ರಿ) ಬೆಂಗಳೂರು ವತಿಯಿಂದ ಕೊಡಲ್ಪಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ “ಭಾರತ ಗೌರವ” ಪ್ರಶಸ್ತಿಗೆ ಆಯ್ಕೆ ಮಾಡಿದೆ.
ದಿನಾಂಕ 14 ನೇ ಫೆಬ್ರವರಿ 2021 ರವಿವಾರ ಗೋವಾದ ಮಾಸ್ಕೋದಲ್ಲಿ ನಡೆಯುವ ರಾಷ್ಟ್ರೀಯ ಕಲಾ ಉತ್ಸವ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಬಡಕುಟುಂಬದಲ್ಲಿ ಹುಟ್ಟಿ ಬೆಳೆದು,
ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ,
ಬೆಂಗಳೂರಿನ ಕೋರಮಂಗಲದಲ್ಲಿ ಸ್ಟಾರ್ ವರ್ಟೆಕ್ಸ್ ಸಾಫ್ಟ್‌ವೇರ್ ಕಂಪೆನಿಯನ್ನು ಸ್ಥಾಪಿಸಿ,ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸಿದ್ದರು.
ಬಡತನದ ಆಳವನ್ನರಿತು,ಬಡವರ್ಗದ ಮಕ್ಕಳು ಶಿಕ್ಷಣ ವಂಚಿತರಾಗಬಾರದೆಂಬ ಉದ್ದೇಶದಿಂದ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಿ,ಸರಕಾರಿ ಶಾಲೆಗಳಿಗೆ ಆಗಾಗ ಭೇಟಿ ನೀಡಿ,ಕ್ರೀಡೆ ಹಾಗೂ ಶಿಕ್ಷಣಕ್ಕೆ ಅಗತ್ಯ ಪರಿಕರಗಳನ್ನು ಪೂರೈಸಿ ಶೈಕ್ಷಣಿಕ ಸೇವೆಯಲ್ಲಿ ನಿರತರಾಗಿದ್ದಾರೆ.
 ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಮನೆ ಮನೆಗಳಿಗೆ ತೆರಳಿ ಊಟ ರೇಷನ್,ದಿನ ನಿತ್ಯ ಸಾಮಗ್ರಿಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದರು.
ಕಳೆದ 4 ತಿಂಗಳ ಹಿಂದೆ  ಟಿ‌.ವಿ.9 ವರದಿಯಲ್ಲಿ ನೆಲಮಂಗಲದ ಗೌರಮ್ಮ ಸಂಕಷ್ಟದ ಪರಿಸ್ಥಿತಿಗೆ ಮರುಗಿ,ಖುದ್ದು ನಿನ್ನೆ ನೆಲಮಂಗಲದ ಗೌರಮ್ಮ ಅವರನ್ನು ಸಂಪರ್ಕಿಸಿ
3 ತಿಂಗಳಿಗಾಗುವಷ್ಟು ರೇಷನ್ ಹಾಗೂ ಆರ್ಥಿಕ ಸಹಾಯ ನೀಡಿದ್ದು ಇಂತಹ ಅನೇಕ ಬಡ ಕುಟುಂಬದ ಸಹಾಯ ನೀಡಿ ಪ್ರಚಾರ ಬಯಸದ ವ್ಯಕ್ತಿತ್ವ ಇವರದ್ದು.
ಸ್ಟಾರ್ ವರ್ಟೆಕ್ಸ್ ಕಂಪೆನಿಯ ಹೆಸರಲ್ಲಿ ಕ್ರಿಕೆಟ್ ತಂಡವೊಂದನ್ನು ಕಟ್ಟಿ ಕೋಲಾರ ಪರಿಸರದ ಯುವ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ಘನ ವೇದಿಕೆಯನ್ನು ಸೃಷ್ಟಿಸಿದ್ದಾರೆ.
ಪ್ರಶಸ್ತಿಯ ಸುದ್ದಿ ತಿಳಿಯುತ್ತಿದ್ದಂತೆ ಸ್ಪೋರ್ಟ್ಸ್ ಕನ್ನಡ ದೊಂದಿಗೆ ಮಾತನಾಡಿದ ಶ್ರೀ ಗಾಯತ್ರಿ ಮುತ್ತಪ್ಪ ಇವರು ಮುಂದಿನ ದಿನಗಳಲ್ಲಿ ಬಡ,ಅಶಕ್ತರ ಪರವಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × 1 =

Latest news

Sevenplay Casino – Quick‑Hit Slots and Live Games for Short‑Burst Thrills

Introduction: The Pulse of Quick Wins at SevenplaySevenplay Casino has carved a niche for players who crave instant gratification....

Vodka онлайн казино – обзор

Vodka онлайн казино - обзор ...

Пин Ап казино – Официальный сайт Pin Up Casino вход на зеркало

Пин Ап казино - Официальный сайт Pin Up Casino вход на зеркало ...

OnLuck Casino: Quick Play for Instant Thrills and Fast Wins

When you’re in the mood for a burst of excitement without the long‑haul grind, OnLuck Casino offers a playground...
- Advertisement -spot_imgspot_img

MonsterWin: Bei Schnell‑Erfolgen und Blitz‑Slots zuschlagen

Wenn du nach einem Nervenkitzel suchst, der in Sekunden spürbar ist, liefert MonsterWin ein Arsenal an Spielen, die die...

Dynabet: Quick‑Hit Slots and Lightning‑Fast Roulette for Short‑Session Thrills

When your phone buzzes and you’re on a quick coffee break, you want a casino that responds as fast...

Must read

- Advertisement -spot_imgspot_img

You might also likeRELATED
Recommended to you