Categories
ಕ್ರಿಕೆಟ್

ಸೌಹಾರ್ದ ಟ್ರೋಫಿ-2020 ಕಾರ್ನಾಡ್ ಫ್ರೆಂಡ್ಸ್ ಮೂಲ್ಕಿ ವತಿಯಿಂದ ನವೆಂಬರ್ 22 ಹಾಗೂ 29 ರಂದು

ಕಾರ್ನಾಡ್ ಫ್ರೆಂಡ್ಸ್ ಕ್ರಿಕೆಟರ್ಸ್ ಮೂಲ್ಕಿ ಇವರು ಸಮಾಜ ಸೇವೆಯ ಸದುದ್ದೇಶದಿಂದ ನವೆಂಬರ್ 22 ಹಾಗೂ 29 ರಂದು ಕಾರ್ನಾಡು ಮೈದಾನದಲ್ಲಿ ಸೌಹಾರ್ದ ಟ್ರೋಫಿ-2020 ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದಾರೆ.
2 ವಿಭಾಗಗಳಲ್ಲಿ ಈ ಪಂದ್ಯಾವಳಿ ನಡೆಯಲಿದ್ದು ನವೆಂಬರ್ 22 ರಂದು ಮೂಲ್ಕಿ ವಲಯ ಮಟ್ಟದ ಆಟಗಾರರು ಹಾಗೂ 29 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಆಟಗಾರರಿಗೆ ಆಡಲು ಅವಕಾಶ ಕಲ್ಪಿಸಿದ್ದಾರೆ.
ಪ್ರಥಮ ಪ್ರಶಸ್ತಿ ವಿಜೇತ ತಂಡ 18,000 ಹಾಗೂ ದ್ವಿತೀಯ ಸ್ಥಾನಿ
9,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಹಾಗೂ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × 1 =