Categories
ಕ್ರಿಕೆಟ್

ಉಡುಪಿ-ಸೌಹಾರ್ದ ಟ್ರೋಫಿ-2021 ಕ್ರಿಕೆಟ್ ಪಂದ್ಯಾಕೂಟ ಫೆಬ್ರವರಿ 27 ಮತ್ತು 28 ರಂದು

ಅಲೆವೂರು ಮೈತ್ರಿ ಇವರ ಆಶ್ರಯದಲ್ಲಿ, ಅಲೆವೂರಿನ ಪ್ರಸಿದ್ಧ ಕ್ರೀಡಾ ಪ್ರೋತ್ಸಾಹಕರಾದ ಎಸ್.ಎಫ್.ಸಿ ಆಸಿಫ್ ಮೈತ್ರಿ ಹಾಗೂ ರಾಜಾ ಅಲೆವೂರು ಇವರ ಸಾರಥ್ಯದಲ್ಲಿ ಸೌಹಾರ್ದತೆಯ ಪ್ರತೀಕವಾಗಿ ಫೆಬ್ರವರಿ 27 ಮತ್ತು 28 ರಂದು ಉಡುಪಿಯ ಬೀಡಿನಗುಡ್ಡೆ ಮೈದಾನದಲ್ಲಿ ಸೌಹಾರ್ದ ಟ್ರೋಫಿ-2021 ಪಂದ್ಯಾವಳಿ ಆಯೋಜಿಸಲಾಗಿದೆ.
ಈ ಪಂದ್ಯಾಕೂಟದ ವಿಶೇಷವಾಗಿ 12 ಜಾತಿಗಳ ತಂಡಗಳ ನಡುವೆ ನಡೆಯಲಿದ್ದು,ಲೀಗ್ ಕಂ ನಾಕೌಟ್ ಮಾದರಿಯಲ್ಲಿ ಸಾಗಲಿದೆ.ಟೂರ್ನಮೆಂಟ್ ನ ಪ್ರಥಮ ಪ್ರಶಸ್ತಿ ವಿಜೇತ ತಂಡ 66,666 ನಗದು,ದ್ವಿತೀಯ ಸ್ಥಾನಿ 33,333 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡುವ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ.
ಆಸಕ್ತ ತಂಡಗಳು ಆಸಿಫ್ ಮೈತ್ರಿ-8197603292,ರಾಜಾ ಅಲೆವೂರು-9448169458
ಇವರನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

thirteen + 10 =