ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಲು ಸ್ಪಂದನ...

ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಲು ಸ್ಪಂದನ ಟ್ರೋಫಿ 2024 ಕ್ರಿಕೆಟ್ ಪಂದ್ಯಾಟ.

-

- Advertisment -spot_img
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲದ  ಡಿಪಾರ್ಟ್ ಮೆಂಟ್ ಆಫ್ ಜನರಲ್ ಸರ್ವಿಸ್, ಏರ್ ಕಂಡೀಶನ್ ಡಿಪಾರ್ಟ್ ಮೆಂಟ್ ಇವರ ನೇತೃತ್ವದಲ್ಲಿ ಸ್ಪಂದನ ಟ್ರೋಫಿ-2024, ಸೀಸನ್ 2 ಎನ್ನುವ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಮಾಹೆ ಉದ್ಯೋಗಿಗಳಿಗೆ ಆಯೋಜಿಸಿದೆ. ಮಾರ್ಚ್ 16 ಮತ್ತು 17 ರಂದು ಮಾಹೆ ಎಂಡ್ ಪಾಯಿಂಟ್ ಗ್ರೌಂಡ್  ನಲ್ಲಿ ಈ ಟೂರ್ನಮೆಂಟ್ ನಡೆಯಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಮಕ್ಕಳ ನೆರವಿಗಾಗಿ ಈ ಟೂರ್ನಮೆಂಟ್ ಆಯೋಜನೆಗೊಂಡಿದೆ.
ಮಾರ್ಚ್ 16 ರಂದು  ಬೆಳಗಿನ ಜಾವ 10:00 ಗಂಟೆಗೆ ಈ ಪಂದ್ಯಾಟ ಉದ್ಘಾಟನೆ ನಡೆಯಲಿದೆ. ಮಾಹೆ ಮಣಿಪಾಲದ ಉಪಕುಲಪತಿ  ಲೆಫ್ಟಿನೆಂಟ್ ಜನರಲ್ ಡಾ.ಎಂ ಡಿ ವೆಂಕಟೇಶ್ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಈ ಟೂರ್ನಮೆಂಟ್ಗೆ ಚಾಲನೆ ನೀಡಲಿರುವರು. ಗೌರವ ಅತಿಥಿಗಳಾಗಿ ಮಾಹೆ ಮಣಿಪಾಲದ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ. ಜಿ. ಸಿ. ಮುತ್ತಣ್ಣ, ಪ್ರೊ ವೈಸ್ ಚಾನ್ಸಲರ್ ಹೆಲ್ತ್ ಸೈನ್ಸಸ್ ನ ಡಾ. ಶರತ್ ರಾವ್ ಕೆ, ಕೆ ಎಂ ಸಿ ಮಣಿಪಾಲದ ಡೀನ್ ಡಾಕ್ಟರ್ ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವೇಣುಗೋಪಾಲ್,ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲದ ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ಅವಿನಾಶ್ ಶೆಟ್ಟಿ,ಪೀಡಿಯಾಟ್ರಿಕ್ ಹೆಮಟಾಲಜಿ ಮತ್ತು ಆಂಕೊಲಾಜಿ (PHO) ವಿಭಾಗದ ಮುಖ್ಯಸ್ಥರು ಡಾ. ವಾಸುದೇವ್ ಭಟ್, ಉಜ್ವಲ್ ಕನ್ಸ್ಟ್ರಕ್ಷನ್ಸ್ ಮತ್ತು ಡೆವಲಪ್ ಮೆಂಟ್ ಮಣಿಪಾಲದ ಶ್ರೀ ಅಜಯ್ ಪಿ ಶೆಟ್ಟಿ ಇವರುಗಳು ಭಾಗವಹಿಸಲಿದ್ದಾರೆ.
17 ಮಾರ್ಚ್ 2024 ರಂದು ಟೂರ್ನಿಯು ಮುಕ್ತಾಯಗೊಂಡು ಆ ಬಳಿಕ ಸುಮಾರು ಐದೂವರೆ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಸ್ಟಾರ್ ವರ್ಟೆಕ್ಸ್ ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ಟೂರ್ನಮೆಂಟ್ ನ ಲೈವ್ ಸ್ಟ್ರೀಮಿಂಗ್ ಇರಲಿದೆ.
`Donate to Serve a Life’ಎಂಬ ಟ್ಯಾಗ್ ಲೈನ್ ನೊಂದಿಗೆ  ಮಣಿಪಾಲ್ ಆಕ್ಸೆಸ್ ಲೈಫ್ ಇದು ಕಸ್ತೂರ್ಬಾ ಆಸ್ಪತ್ರೆಯ ಪೀಡಿಯಾಟ್ರಿಕ್ ಹೆಮಟಾಲಜಿ ಮತ್ತು ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಕ್ಕಳ ಕ್ಯಾನ್ಸರ್ ಚಿಕಿತ್ಸೆಗಾಗಿ ಕ್ಯಾನ್ಸರ್ ಕೇಂದ್ರಕ್ಕೆ ಬರುವ ಕುಟುಂಬಗಳಿಗೆ ಬಹು-ಶಿಸ್ತಿನ ಬೆಂಬಲ ಆರೈಕೆಯನ್ನು ಒದಗಿಸುತ್ತದೆ. ‘.ಈ ಟೂರ್ನಿಯಿಂದ ಸಂಗ್ರಹಿಸಿದ ಹಣವನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ಉಪಯೋಗಿಸಲಾಗುವುದು. ಮಕ್ಕಳ  ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ  ಈ ಕ್ರಿಕೆಟ್ ಪಂದ್ಯಾವಳಿಯು  ಬಹಳಷ್ಟು ಅರ್ಥಪೂರ್ಣವಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 + one =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you