ಭರವಸೆಯ ಬೆಳಕುಉಡುಪಿ-ವಿಶೇಷ ಚೇತನ ಅಪ್ರತಿಮ ಚಿತ್ರಕಲಾವಿದ ಗಣೇಶ್ ಪಂಜಿಮಾರ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ...

ಉಡುಪಿ-ವಿಶೇಷ ಚೇತನ ಅಪ್ರತಿಮ ಚಿತ್ರಕಲಾವಿದ ಗಣೇಶ್ ಪಂಜಿಮಾರ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

-

- Advertisment -spot_img
ಚಿತ್ರಕಲಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ವಿಶೇಷ ಚೇತನ ಚಿತ್ರಕಲಾವಿದ ಗಣೇಶ್ ಪಂಜಿಮಾರ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
 ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ರಾಮ ಮೂಲ್ಯ ಹಾಗೂ ನಾಗಮಣಿ  ದಂಪತಿಗಳ ಪುತ್ರನಾಗಿರುವ ಗಣೇಶ್ ಕುಲಾಲ್ ಹುಟ್ಟಿನಿಂದಲೇ ವಿಕಲಾಂಗರು.ಮೂರಡಿ ಎತ್ತರ,ಇಪ್ಪತ್ಮೂರು ಕಿಲೋ ಗ್ರಾಂ ತೂಕ ಹೊಂದಿರುವ ಗಣೇಶ್ ಪ್ರೌಢವಸ್ಥೆಯನ್ನು ದಾಟಿ ನಿಂತವರು.ಹುಟ್ಟಿನಿಂದಲೇ ಜೊತೆಯಾದ ಅಂಗವೈಕಲ್ಯ ಬದುಕಿಗೆ ಬಿರುಗಾಳಿಯಂತೆಯೇ ಬಂದೊಡ್ಡಿದರೂ ಇವರು ಜೀವನೋತ್ಸಾಹವನ್ನು ಎಂದಿಗೂ
ಕಳೆದುಕೊಳ್ಳಲಿಲ್ಲ.ಉತ್ತಮ ವಿದ್ಯಾಭ್ಯಾಸ ಪಡೆದು ಸ್ವಸಾಮಾರ್ಥ್ಯದಿಂದಲೇ ನೌಕರಿ ಗಿಟ್ಟಿಸಿಕೊಳ್ಳಬೇಕೆಂಬ ಹಂಬಲದಿಂದ  ಪ್ರಾಥಮಿಕ ಶಿಕ್ಷಣವನ್ನು ಶ್ರೀ ದುರ್ಗಾಂಬಿಕಾ ಹಿರಿಯ ಪ್ರಾಥಮಿಕ ಶಾಲೆ ಪಂಜಿಮಾರು,ಶ್ರೀ ನಾರಾಯಣ ಗುರು ಪ್ರೌಢಶಾಲೆ ಪಡುಬೆಳ್ಳೆ ಹಾಗೂ ಪಿಯುಸಿ ಶಿಕ್ಷಣವನ್ನು ಜೂನಿಯರ್ ಕಾಲೇಜು ಶಿರ್ವದಲ್ಲಿ
ಪಡೆದರು.ಈ ಸಂದರ್ಭದಲ್ಲಿ ಕುಟುಂಬ ತುಂಬಿದ ಧೈರ್ಯ,ಗೆಳೆಯರು ನೀಡಿದ ಸಾಥ್,ಶಿಕ್ಷಕರ ಪ್ರೀತಿ ,ಕಾಳಜಿಯನ್ನು ಸ್ಮರಿಸಿಕೊಳ್ಳುತ್ತಾರೆ.ನಂತರ ದಾನಿಯೊಬ್ಬರು ಕೊಡುಗೆಯಾಗಿ ನೀಡಿದ ವಿದ್ಯುತ್ ಚಾಲಿತ ತ್ರಿಚಕ್ರ ಸ್ಕೂಟರ್ನಲ್ಲಿ ನಿತ್ಯ ಹತ್ತು ಕಿ.ಮೀ ಕ್ರಮಿಸಿ ಪದವಿ ಗಿಟ್ಟಿಸಿಕೊಂಡ ಸ್ಫೂರ್ತಿ ಚಿಲುಮೆಯಿವರು. ವಿದ್ಯಾಭ್ಯಾಸದ ಜೊತೆಜೊತೆಗೆ  ಚಿತ್ರಕಲೆ, ಕಥೆ,ಕವನ  ಬರೆಯುವ ಆಸಕ್ತಿಯನ್ನೂ ಇರಿಸಿಕೊಂಡು ಸದಾ ಕ್ರೀಯಾಶೀಲರಾಗಿರುತ್ತಿದ್ದರು.
 ಚಿತ್ರಕಲೆಯಲ್ಲಿ ಮೊದಲ ಪ್ರಯತ್ನವಾಗಿ ತನ್ನ ಅಮ್ಮನ ಚಿತ್ರವನ್ನೇ ಚಿತ್ರಿಸಿ ತೋರಿಸಿದಾಗ ಅಮ್ಮನಿಂದ ವ್ಯಕ್ತವಾದ ಮೆಚ್ಚುಗೆ,ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಾಗ ಅಲ್ಲಿ ಪ್ರೇಕ್ಷಕ ವರ್ಗದಿಂದ ಸಿಕ್ಕ ಪ್ರತಿಕ್ರಿಯೆ ಮುಂದೆ ಕಲಾ ಕ್ಷೇತ್ರದಲ್ಲಿಯೇ ಮುಂದುವರಿಯುವಂತೆ ಪ್ರೇರೇಪಿಸಿತು ಎನ್ನುತ್ತಾರೆ ಗಣೇಶ್ ಪಂಜಿಮಾರ್.
         ಇವರ ಕೈಯಲ್ಲಿ ಮೂಡಿದ  ವಿವಿಧ ಕ್ಷೇತ್ರಗಳ ನಾಯಕರ,ಪ್ರಕೃತಿ,ಪ್ರಾಣಿ ಪಕ್ಷಿಗಳ ಚಿತ್ರಗಳು ನೋಡುಗರನ್ನು ಒಂದೊಮ್ಮೆ ಬೆರಗಾಗುವಂತೆ ಮಾಡುತ್ತದೆ.ಈಗಾಗಲೇ ಮುನ್ನೂರೈವತ್ತಕ್ಕಿಂತಲೂ ಹೆಚ್ಚು ಚಿತ್ರಗಳನ್ನು ಚಿತ್ರಿಸಿರುವ ಈ  ಸಾಧಕ ಎಲ್ಲರ ಬದುಕಿಗೆ ಸ್ಫೂರ್ತಿಯ ಮಾತಾಗಿ ನಿಂತಿದ್ದಾರೆ.ದೈಹಿಕ ಕಸರತ್ತಿಗೆ ಅಂಗಾಂಗ ಸ್ಪಂದಿಸದಿದ್ದಾಗ ತಮ್ಮ ಬೌದ್ಧಿಕ ಕಸರತ್ತಿನಿಂದ ಚಿತ್ರ ಕಲಾವಿದನಾಗಿ ರೂಪುಗೊಂಡು ಇಂದು ಜನಮಾನಸದಲ್ಲಿ ಕಿಂಗ್ ಗಣೇಶ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಈ ಭಿನ್ನ ಪ್ರತಿಭೆಯ ಹಾದಿ ನಿಜಕ್ಕೂ ರೋಚಕತೆಯ ಆಗರ.
         ಇವರ ತಂಗಿ ಸುಮಾ ಕೂಡಾ ವಿಕಲಾಂಗರಾಗಿದ್ದರೂ ಕಾಗದಗಳ ಪಟ್ಟಿಯಿಂದ ಗೊಂಬೆ ತಯಾರಿಸುವಲ್ಲಿ ಪರಿಣಿತರು.ಅಣ್ಣ-ತಂಗಿ ಒಬ್ಬರಿಗೊಬ್ಬರು ಬೆನ್ನು ತಟ್ಟುತ್ತಾ ಅಛಲ ವಿಶ್ವಾಸದಿಂದ ಜೀವನವನ್ನು ಎದುರಿಸುತ್ತಿರುವ ರೀತಿ  ಸಾಮರ್ಥ್ಯವಿದ್ದರೂ ಅಸಮರ್ಥರೆಂದು ಕೈ ಚೆಲ್ಲುವ ನಿರಾಶಾವಾದಿಗಳಿಗೆ ಅದ್ಭುತ ಪಾಠವಾಗಿ  ತೋರುತ್ತದೆ.
 ಮಲ್ಲಿಗೆ ಹೂವು ಕಟ್ಟಿ ,ಅದನ್ನು  ಮಾರಿ ಕುಟುಂಬದ ಜವಾಬ್ದಾರಿಯನ್ನು ನಡೆಸುತ್ತಿರುವ ತಾಯಿಗೆ,ತನಗಿಂತಲೂ ತ್ರಾಸದಾಯಕ ಸ್ಥಿತಿಯಲ್ಲಿರುವ ತಂಗಿಗೆ ನೆರಳಾಗಿ  ನಿಲ್ಲಬೇಕೆಂಬ ದೃಢ ಆಶಯವನ್ನು ಹೊಂದಿರುವ ಗಣೇಶ್ ರವರು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಬೇಕೆಂಬ ಆಕಾಂಕ್ಷೆಯಿಂದ  ಬ್ಯಾಂಕಿಂಗ್ ಪರೀಕ್ಷೆಗೆ ಸಿದ್ಧತೆಗಳನ್ನು ನಡೆಸಿಕೊಂಡು ಈಗಾಗಲೇ ಹಲವು ಬಾರಿ ಲಿಖಿತ ಪರೀಕ್ಷೆಗೆ ಹಾಜರಾಗಿದ್ದಾರೆ. ಗಣೇಶ್ ಪಂಜಿಮಾರ್ ಆರ್ಟ್ಸ್ ಎಂಬ ಯುಟ್ಯೂಬ್ ,ಇನ್ಸ್ಟ್ರಾಗ್ರಾಮ್ ಹಾಗೂ ಫೇಸ್ಬುಕ್ ಅಕೌಂಟನ್ನು ತಮ್ಮ ಕಲಾ ಪ್ರತಿಭೆಯ ಪ್ರದರ್ಶನಕ್ಕೆ  ವೇದಿಕೆಯನ್ನಾಗಿ ವಿನಿಯೋಗಿಸಿಕೊಂಡಿದ್ದಾರೆ.ಈಗಾಗಲೇ ಹಲವಾರು ಸಂಘ ಸಂಸ್ಥೆಗಳಿಂದ  ಪುರಸ್ಕಾರಗಳನ್ನು ಪಡೆದುಕೊಂಡಿದ್ದು ,ಇವರ ಸಾಧನೆಯ ಕುರಿತಾದ ಲೇಖನಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

LEAVE A REPLY

Please enter your comment!
Please enter your name here

16 − 2 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you