10.6 C
London
Thursday, March 28, 2024
Homeಕಬಡ್ಡಿಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಯು ಮುಖ್ಯ- ವಾಲ್ಟರ್ ನಂದಳಿಕೆ

ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಯು ಮುಖ್ಯ- ವಾಲ್ಟರ್ ನಂದಳಿಕೆ

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img
ಮಂಗಳೂರು:ಉತ್ತಮ ಕಲಿಕೆಗೆ ವಿದ್ಯಾರ್ಥಿಗಳು ಆರೋಗ್ಯವಂತರಾಗಿರಬೇಕು. ವಿದ್ಯಾರ್ಥಿಗಳು ಓದಿಗಷ್ಟೇ ಸೀಮಿತವಾದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಒತ್ತಡ ನಿವಾರಣೆಯಾಗಿ ಸ್ಪರ್ಧಾ ಮನೋಭಾವ ಮೂಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಯಬೇಕು ಎಂದು ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು.
ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೊಂದೇಲ್ ನಲ್ಲಿ ಆಯೋಜಿಸಿದ್ದ ಅಂತರ್ ಕಾಲೇಜು ಪದವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
          ಗೌರವ ಅತಿಥಿಗಳಾಗಿ ಸಿಟಾಡೆಲ್ ಡೆವಲಪರ್ಸ್ ಮಂಗಳೂರಿನ ಪಾಲುದಾರರಾಗಿರುವ ರಾಮ್ ಕುಮಾರ್ ಬೇಕಲ್ ಮಾತನಾಡಿ “ಸೋಲು ಗೆಲುವಿನ ನಿರ್ಣಾಯಕರಾಗದೆ ಪ್ರತಿ ಸ್ಪರ್ಧೆ ಕಲಿಸುವ ಪಾಠವನ್ನು ಜೀವನಕ್ಕೆ ಅನ್ವಯಿಸುವಲ್ಲಿ ಯಶಸ್ವಿಯಾಗೋಣ. ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚುವಂತಹ ಪ್ರತಿಭೆಗಳು ನಮ್ಮ ಜಿಲ್ಲೆಯಿಂದ ಹೊರಹೊಮ್ಮಲಿ “ಎಂದು ಶುಭ ಹಾರೈಸಿದರು.
       ವೇದಿಕೆಯಲ್ಲಿ ವುಮೆನ್ಸ್ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿರುವ ಅಣ್ಣಪ್ಪ ನಾಯಕ್, ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಸಂಚಾಲಕರಾಗಿರುವ ಜೀವನ್ ದಾಸ್ ನಾರಾಯಣ್, ವಿದ್ಯಾ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಡಾ. ಮೋಲಿ.ಎಸ್ ಚೌಧರಿ, ಉಪನ್ಯಾಸಕ ಸಂಯೋಜಕರಾಗಿರುವ ಡಾ. ಶರಣ್ ಕುಮಾರ್ ಶೆಟ್ಟಿ ಹಾಗೂ ಸುರೇಶ್ ಶೆಣೈ  ಉಪಸ್ಥಿತರಿದ್ದರು.
        ಡಾ.ಶರಣ್ ಕುಮಾರ್ ಶೆಟ್ಟಿ ಸ್ವಾಗತಿಸಿ ಸುರೇಶ್ ಶೆಣೈ ವಂದಿಸಿದರು.ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿರುವ ಶ್ರೀಮತಿ ನಂದಿತಾ ಸುನಿಲ್ ಕಾರ್ಯಕ್ರಮ ನಿರೂಪಿಸಿದರು.
     ಪುರುಷರ ವಿಭಾಗದಲ್ಲಿ ಪ್ರೇರಣಾ ಕಾಲೇಜು ಮಂಗಳೂರು ತಮ್ಮ ಅಪ್ರತಿಮ ಕ್ರೀಡಾ ಪ್ರದರ್ಶನದಿಂದ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದರು. ದ್ವಿತೀಯ ಸ್ಥಾನವನ್ನು ಸಂತ ಫಿಲೋಮಿನಾ ಕಾಲೇಜು ಪುತ್ತೂರು ಪಡೆದುಕೊಂಡರು. ತೃತೀಯ ಸ್ಥಾನಕ್ಕೆ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಭಾಜನರಾದರೆ, ಚತುರ್ಥ ಸ್ಥಾನವನ್ನು ನೆಹರು ಮೆಮೋರಿಯಲ್ ಕಾಲೇಜು  ಸುಳ್ಯ ಪಡೆದುಕೊಂಡಿತು. ಅತ್ಯುತ್ತಮ ದಾಳಿಗಾರನಾಗಿ ಪ್ರೇರಣಾ ಕಾಲೇಜು ಮಂಗಳೂರಿನ ಜಾರ್ಜ್ ಹಾಗೂ ಉತ್ತಮ ಹಿಡಿತಗಾರನಾಗಿ ಪ್ರೇರಣಾ ಕಾಲೇಜಿನ ಸುಪ್ರೀತ್ ಗಿಟ್ಟಿಸಿಕೊಂಡರೆ ಸವ್ಯಸಾಚಿ ಆಟಗಾರನಾಗಿ ಸಂತ ಫಿಲೋಮಿನಾ ಕಾಲೇಜಿನ ಮೊಹಮ್ಮದ್ ನಾಜೀರ್ ಕ್ರೀಡಾಭಿಮಾನಿಗಳ ಮನ ಗೆದ್ದರು.
        ಮಹಿಳೆಯರ ವಿಭಾಗದಲ್ಲಿ    ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ತಮ್ಮ ಮಿಂಚಿನಂತಹ ಕ್ರೀಡಾ ಪ್ರದರ್ಶನದಿಂದ ಪ್ರಥಮ   ಸ್ಥಾನಿಯಾಗಿ ಹೊರಹೊಮ್ಮಿದರು.ದ್ವಿತೀಯ ಸ್ಥಾನವನ್ನು ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಪಡೆದುಕೊಂಡಿತು.ತೃತೀಯ ಸ್ಥಾನಕ್ಕೆ ಕೆನರಾ ಇಂಜಿನಿಯರಿಂಗ್ ಕಾಲೇಜು ಬೆಂಜನಪದವು ಭಾಜನರಾದರೆ,ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.
      ಅತ್ಯುತ್ತಮ ದಾಳಿಗಾರ್ತಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನ ರಕ್ಷಾ .ಎಸ್ , ಅತ್ಯುತ್ತಮ ಹಿಡಿತಗಾರ್ತಿಯಾಗಿ   ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರಿನ ಅರ್ಪಿತಾ ಹಾಗೂ ಸವ್ಯಸಾಚಿ ಆಟಗಾರ್ತಿಯಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನ ರುತು ಸುಧಾಕರ ಹೆಗ್ಡೆ ತಮ್ಮ ವಿಭಿನ್ನ ಆಟದ ಪ್ರದರ್ಶನದಿಂದ ಕ್ರೀಡಾಭಿಮಾನಿಗಳ ಮನ ಗೆದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

8 − 5 =