ಸ್ಪೋರ್ಟ್ಸ್ಕ್ರೀಡಾ ಮನೋಭಾವನೆಯಿಂದ ಮಾನಸಿಕ,ದೈಹಿಕವಾಗಿ ಸದೃಢ- ಗೌತಮ್ ಶೆಟ್ಟಿ

ಕ್ರೀಡಾ ಮನೋಭಾವನೆಯಿಂದ ಮಾನಸಿಕ,ದೈಹಿಕವಾಗಿ ಸದೃಢ- ಗೌತಮ್ ಶೆಟ್ಟಿ

-

- Advertisment -spot_img
ಟೋರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021-ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ 06-11-2021&07-11-2021 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಕ್ರೀಡಾ ಕ್ಷೇತ್ರದಲ್ಲೊಂದು ವಿಭಿನ್ನ ಮೈಲಿಗಲ್ಲನ್ನು ಸೃಷ್ಟಿಸಿತು.
ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಗೌತಮ್ ಶೆಟ್ಟಿ ಮಾತನಾಡಿ ” ಸೋಲು ಗೆಲುವಿನ ಲೆಕ್ಕಾಚಾರದಲ್ಲಿ  ತೊಡಗದೆ  ಕ್ರೀಡಾ ಮನೋಭಾವವನ್ನು ಹೆಚ್ಚಿಸಿಕೊಂಡರೆ ಮಾನಸಿಕ ,ದೈಹಿಕವಾಗಿ ಸದೃಢರಾಗಿರಲು ಸಾಧ್ಯ.ಇಂದು ಕ್ರೀಡಾ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದೆ.ಸಿಗುವ ಪ್ರತಿ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು “ಎಂದು ಕಿವಿಮಾತು ನೀಡಿದರು.
ನವೆಂಬರ್ 6 ರ ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಳ್ಳಾಲದ ಶಾಸಕರಾದ ಯು.ಟಿ‌.ಖಾದರ್,ಮಾಜಿ ಶಾಸಕರಾದ ರಮಾನಾಥ ರೈ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಐವನ್ ಡಿಸೋಜಾ, ಮಂಗಳೂರು ಉತ್ತರದ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್, ಝರಾ ಕನ್ವೆನ್ಷನ್ ಹಾಲ್ ನ ಮುಖ್ಯಸ್ಥರಾದ ಜಾಹೀರ್ ಝಕ್ರೀಯಾ, ಚಾರ್ಟೆಡ್ ಅಕೌಂಟೆಂಟ್ ಆಗಿರುವ ಎಸ್ ಎಸ್ ನಾಯಕ್, ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಆಟಗಾರರಾಗಿರುವ ಕೃನಾಲ್ ತೆಲಂಗ್, ಪದುಪಣಂಬೂರ್ ಪಂಚಾಯತ್ ನ ಸದಸ್ಯರಾಗಿರುವ ಮೋಹನ್ ದಾಸ್ ರವರು  ಉಪಸ್ಥಿತರಿದ್ದರು.ನವೆಂಬರ್ 7 ರಂದು ನಡೆದ ಸಮಾರೋಪ ಸಮಾ ರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದ್ರೆಯ ಶಾಸಕರಾಗಿರುವ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರಾಗಿರುವ ಅಭಯಚಂದ್ರ ಜೈನ್, ಮಂಗಳೂರು ಉತ್ತರದ ಮಾಜಿ ಶಾಸಕರಾಗಿರುವ ಮೊಹಿದಿನ್ ಬಾವ, ಪದುಪಣಂಬೂರ್ ಪಂಚಾಯತ್ ನ ಅಧ್ಯಕ್ಷೆಯಾಗಿರುವ ಮಂಜುಳಾ, ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿರುವ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ನ ಸದಸ್ಯರಾಗಿರುವ ವಿನೋದ್ ಬೋಳೂರು, ಯುವ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ಮಿಥುನ್ ರೈ, ಉದ್ಯಮಿಯಾಗಿರುವ ನಾಗಭೂಷಣ್ ರೆಡ್ಡಿ ಹಾಗೂ ರಾಷ್ಟ್ರೀಯ ತರಬೇತುದಾರರಾದ ಕೃಣಾಲ್ ತೇಲಂಗ್,ತಂಡಗಳ ಮಾಲೀಕರಾದ ಪ್ರತಿಭಾ ಕುಳಾಯಿ,ಜಯರಾಮ ಶೆಟ್ಟಿ,ಡಾ.ಅರವಿಂದ್ ಭಟ್,ರಾಜೀವ್ ಕುಡ್ಲ,ರಮೇಶ್ ಶೆಟ್ಟಿ,ಝಕ್ರೀಯಾ ಬಜ್ಪೆ,ಗಣೇಶ್ ಕಿಣಿ, ಝಾರ ಝಕ್ರೀಯಾ,ಅಜಿತ್ ಕೋಟ,ಉದ್ಯಮಿ ನಾಗಭೂಷಣ್ ಉಪಸ್ಥಿತರಿದ್ದರು.
      ಸತತವಾಗಿ ಎರಡು ದಿನಗಳಲ್ಲಿ ನಡೆದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಶ್ರೀರಾಮ್ ಕೌಡೂರ್ ಮಾಲಕತ್ವದ ಉಡುಪಿ ಪೆಡ್ಲರ್ಸ್ ತಂಡವು 4-1 ಅಂತರದಿಂದ ವಿಜಯ್ ಹೆಗ್ಡೆ ಮಾಲಕತ್ವದ ಸವ್ಯಸಾಚಿ ಫಾಸ್ಟ್ ಫೀಟ್ ತಂಡವನ್ನು ಸೋಲಿಸಿ ಚಾಂಪಿಯನ್ ಕಿರೀಟ ಹಾಗೂ ಎರಡು ಲಕ್ಷ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.
ಉಡುಪಿ ಪೆಡ್ಲರ್ಸ್ ತಂಡದಲ್ಲಿ
ತಂಡದ ನಾಯಕನಾಗಿ ಮೈಸೂರಿನ
ಅಕ್ಷಯ್ ಮಹಂತ ಹಾಗೂ ಸಹ ಆಟಗಾರರಾಗಿ ದೀವಿತ್ ಯಕ್ಕುಂಡಿ,ಕಿಶನ್ ಶೆಟ್ಟಿ,ನಹ್ಲಾ ಫಾತೀಮ,ಕುಶಾಲ್. ಪಿ.ನಾಯಕ್,ಷಣ್ಮುಖ,ಅರ್ಪಿತ್,ಅರುಷ್ ಶೆಟ್ಟಿ,ಪೂರ್ಣಿಮಾ ರಾಜ್,ಸಂದೀಪ್.ಎಸ್ ಕ್ರೀಡಾ ಅಂಕಣದಲ್ಲಿ ಮಿಂಚಿದ್ದರು. ರನ್ನರ್ಸ್ ಟ್ರೋಫಿ ಹಾಗೂ ಒಂದು ಲಕ್ಷ ನಗದು ಬಹುಮಾನವನ್ನು ಬಾಚಿಕೊಂಡ ಸವ್ಯಸಾಚಿ ಫಾಸ್ಟ್ ಫೀಟ್ ತಂಡದ ನಾಯಕನಾಗಿ ಅಶ್ವಿನ್ ಹನಗೋಡು ತಂಡವನ್ನು ಮುನ್ನಡೆಸಿ ಸಹ ಆಟಗಾರರಾದ ಮಂಜುನಾಥ್ ರಾಥೋಡ್,ತೃಷಾ ಹಮ್ಮನವರ್,ನರೇಂದ್ರ ಕಿಣಿ,ಶಶಾಂಕ್ ಅಜಿತ್ ಭಟ್,ವಿನಯ್ ಎಸ್.ಕೆ,
ಹಿಮಾಂಕ್ ಪಾಂಡೆ,ಪಿ.ಆರ್ ಪ್ರೇಮ್ ಕುಮಾರ್,ಹರ್ಷವರ್ಧನ್ ಟಿ.ಕೆ ಅತ್ಯದ್ಭುತವಾಗಿ ಕ್ರೀಡಾ ಪ್ರದರ್ಶನವನ್ನಿತ್ತರು.ವೈಯುಕ್ತಿಕ  ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬೆಂಗಳೂರಿನ ರಕ್ಷಿತ್ ಆರ್. ಬಿ ಪಡೆದುಕೊಂಡರೆ ದ್ವಿತೀಯ ಸ್ಥಾನವನ್ನು  ತೆಲಂಗಾಣದ ಅಲಿ ಮೊಹಮ್ಮದ್  ಪಡೆದುಕೊಂಡರು
.ಈ ಪಂದ್ಯದ ಅಂಕ 3-2 ಆಗಿತ್ತು.ವೈಯುಕ್ತಿಕ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಶ್ಚಿಮ ಬಂಗಾಳದ ಕೌಶಿನಿನಾಥ್ ಪಡೆದುಕೊಂಡರೆ ದ್ವಿತೀಯ ಸ್ಥಾನವನ್ನು ಮಹಾರಾಷ್ಟ್ರದ ಸೆನ್ಹೋರ ಸೋಸ್ಟರ್ ಡಿ ಸೋಜಾ ಪಡೆದುಕೊಂಡರು. ಈ ಪಂದ್ಯದ ಅಂಕ 3-0 ಆಗಿತ್ತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eight − seven =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you