ಕ್ರಿಕೆಟ್ಕ್ರೀಡೆ ಯುವಕರಲ್ಲಿ ಜೀವಕಳೆಯನ್ನು ತುಂಬುತ್ತದೆ"-ಬಿ.ಎಂ.ಸುಕುಮಾರ್ ಶೆಟ್ಟಿ

ಕ್ರೀಡೆ ಯುವಕರಲ್ಲಿ ಜೀವಕಳೆಯನ್ನು ತುಂಬುತ್ತದೆ”-ಬಿ.ಎಂ.ಸುಕುಮಾರ್ ಶೆಟ್ಟಿ

-

- Advertisment -spot_img
ಜಾನ್ಸನ್ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ಜಾನ್ಸನ್ ಟ್ರೋಫಿ-2022 ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ ದೊರಕಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಬಿ.ಎಮ್.ಸುಕುಮಾರ್ ಶೆಟ್ಟಿ ಬಲೂನ್ ಹಾರಿಸಿ ಬಿಡುವುದರ ಮೂಲಕ ಪಂದ್ಯಾಟ ಉದ್ಘಾಟಿಸಿ ಮಾತನಾಡಿ “ಕ್ರೀಡೆ ಯುವಕರನ್ನುಒಗ್ಗೂಡಿಸಿ,
ಉತ್ಸಾಹ ಮೂಡಿಸಿ,ಜೀವಕಳೆಯನ್ನು ತುಂಬುತ್ತದೆ.
ಜಾನ್ಸನ್ ಕುಂದಾಪುರ ತಂಡ ಕ್ರೀಡೆ ಮಾತ್ರವಲ್ಲದೇ ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿ ಕೊಂಡು ಜಿಲ್ಲೆಯ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ” ಎಂದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಹನಾ ಗ್ರೂಪ್ಸ್ ನ ಸುರೇಂದ್ರ ಶೆಟ್ಟಿ ಮಾತನಾಡಿ “ಕ್ರೀಡಾಪಟುಗಳು ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ಸೋತಾಗ ಕುಗ್ಗದೆ,ಗೆದ್ದಾಗ ಹಿಗ್ಗದೆ ಸಮಭಾವದಿಂದ ಬದುಕನ್ನು ರೂಪಿಸಿಕೊಂಡರೆ ಯಶಸ್ಸು ಖಂಡಿತ” ಎಂದರು.
ಉದ್ಯಮಿ ದಿನೇಶ್ ಹೆಗ್ಡೆ ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಕೋಟ ರಾಮಕೃಷ್ಣ ಆಚಾರ್ ಪಂದ್ಯಾವಳಿಗೆ ಶುಭಹಾರೈಸಿದರು.
ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಥ್ವೀರಾಜ್ ಶೆಟ್ಟಿ ಹುಂಚನಿ ಮತ್ತು ಸಮಾಜಸೇವೆಯಲ್ಲಿ ಗುರುತಿಸಿ ಕೊಂಡ ಕ್ರೀಡಾಪಟು ಪ್ರಶಾಂತ್ ಪಡುಕರೆ ಇವರನ್ನು ಸನ್ಮಾನಿಸಲಾಯಿತು.
*ಕಾಂತಾರ ಮಾದರಿಯ ವಿಶಿಷ್ಟ ಟ್ರೋಫಿ ಅನಾವರಣ*
ಉದ್ಘಾಟನೆಯ ಬಳಿಕ ಜಾನ್ಸನ್ ಟ್ರೋಫಿ ಪಂದ್ಯಾವಳಿಗೆ ವಿಶಿಷ್ಟವಾಗಿ ವಿನ್ಯಾಸಗೊಳಿಸಲಾದ ಕಾಂತಾರ ಮಾದರಿಯ ಟ್ರೋಫಿಯನ್ನು,ರಾಟೆ ತಿರುಗಿಸಿ,ಆಕರ್ಷಕ ಘಂಟಾ ಕವಚವನ್ನು ತೆರೆಯುವ ಮೂಲಕ ವಿಶಿಷ್ಟವಾಗಿ ಟ್ರೋಫಿ ಅನಾವರಣಗೊಳಿಸಲಾಯಿತು.
ಈ ಸಂದರ್ಭ ಉದ್ಯಮಿಗಳಾದ ಪ್ರಕಾಶ್ ಶೆಟ್ಟಿಗಾರ್,ಶೆರ್ಡಿ ಪ್ರಕಾಶ್ ಶೆಟ್ಟಿ,ಜಾನ್ಸನ್ ಅಧ್ಯಕ್ಷ ರವೀಂದ್ರ ಹೆಗ್ಡೆ,ಗೌರವಾಧ್ಯಕ್ಷ ಉಮೇಶ್ ಶೆಟ್ಟಿ ಕಲ್ಗದ್ದೆ,
ಜಯಶೀಲ ಶೆಟ್ಟಿ ಘಟಪ್ರಭಾ,ಸಂಪತ್ ಶೆಟ್ಟಿ, ರತ್ನಾಕರ ಶೆಟ್ಟಿ ಪಡುಮುಂಡು,ಸುಜಯ್ ಶೆಟ್ಟಿ ತೆಕ್ಕಟ್ಟೆ,ಸುಭಾಶ್ ಶೆಟ್ಟಿ ಹೊಳ್ಮಗೆ, ಪ್ರವೀಣ್ ಶೆಟ್ಟಿ ವಂಡಾರು,ಮನೋಜ್ ನಾಯರ್ ಚಕ್ರವರ್ತಿ,ಸುಧೀರ್ ಪೂಜಾರಿ,ನಾಗೇಶ್ ನಾವಡ,ರಾಜಾ ಸಾಲಿಗ್ರಾಮ,ಅನಿಲ್ ಖಾರ್ವಿ,ಪ್ರದೀಪ್ ಹೆಗ್ಡೆ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಉಮೇಶ್ ಶೆಟ್ಟಿ ಕಲ್ಗದ್ದೆ ಪ್ರಾಸ್ತಾವಿಕ ಮಾತುಗಳನ್ನಾಡಿದರೆ,ಶಿವನಾರಾಯಣ ಐತಾಳ್ ಕೋಟ ನಿರೂಪಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × 4 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you