ಕ್ರಿಕೆಟ್ಗ್ರಾಮೀಣಜೀವನದಲ್ಲಿ ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಅಗತ್ಯ : ಸರ್ಕಲ್ ಇನ್ಸ್ ಪೆಕ್ಟರ್...

ಜೀವನದಲ್ಲಿ ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಅಗತ್ಯ : ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಜಿ ನಾಯಕ್

-

- Advertisment -spot_img

ಬೈಂದೂರು : ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ ಬಂಕೇಶ್ವರ ಇವರ ಆಶ್ರಯದಲ್ಲಿ ದ್ವಿತೀಯ ವರ್ಷದ ಬೈಂದೂರು ತಾಲೂಕು ಮಟ್ಟದ ಹೊನಲು ಬೆಳಕಿನ “ಪುರುಷರ ಡಬಲ್ಸ್ ಶಟಲ್ ಪಂದ್ಯಾಟ ಎಸ್.ಎಮ್.ಬಿ.ಸಿ ಟ್ರೋಫಿ – 2020” ಶನಿವಾರ ಸಂಜೆ ಬಂಕೇಶ್ವರ ಮಹಾಕಾಳಿ ದೇವಸ್ಥಾನ ವಠಾರದಲ್ಲಿ ನಡೆಯಿತು.

ಬೈಂದೂರು ಆರಕ್ಷಕ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಜಿ ನಾಯಕ್ ಸಭಾ ಕಾರ್ಯಕ್ರಮ ಹಾಗೂ ಪಂದ್ಯಾಟದ ಕ್ರೀಡಾಂಗಣವನ್ನು ಉದ್ಘಾಟಿಸಿ, ಮಾತನಾಡಿ ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟಗಳ ಯಶಸ್ಸಿಗೆ ಸಹಕರಿಸಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಕೂಡಾ ಒಂದು ಒಂದು ಕಲೆ ಅಡಗಿರುತ್ತದೆ. ಸಾಕಷ್ಟು ಜನ ಕ್ರೀಡಾಯಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ. ಜೀವನದಲ್ಲಿ ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಅಗತ್ಯ. ಎಲ್ಲಾ ವಯೋಮಾನದವರಿಗೂ ಕ್ರೀಡೆ ದೈಹಿಕ ಕ್ಷಮತೆಯನ್ನು ಕೊಡುತ್ತದೆ ಎಂದರು.

ಕ್ಲಬ್ ನ ಗೌರವಾಧ್ಯಕ್ಷ ಉದಯ್ ಎಸ್. ಕೆ.ಆರ್.ಸಿ.ಎಲ್ ಅವರು ಮಾತನಾಡಿ, ಕಳೆದ ವರ್ಷ ಸ್ಥಾಪಿಸಿದ ಹೆಮ್ಮೆಯಿದೆ. ಕಳೆದ ವರ್ಷ ಯಾವುದೇ ದೇಣಿಗೆಯನ್ನು ಪಡೆಯದೆ ನಮ್ಮೆಲ್ಲರ ಯುವಕ ಕೈಗೊಡಿಸಿಕೊಂಡು ಶಟಲ್ ಪಂದ್ಯಾಟ ನಡೆಸಿದ್ದೇವೆ. ಆ ಕಾರ್ಯಕ್ರಮವೂ ಕೂಡಾ ಬಹಳ ಯಶ್ವಸಿಯಾಗಿದೆ. ಅದಕ್ಕೆಲ್ಲಾ ನಮ್ಮ ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ ನ ಪ್ರತಿಯೊಬ್ಬ ಸದಸ್ಯರು ಸಾಕಷ್ಟು ಶ್ರಮ ವಹಿಸಿದ ಕಾರಣದಿಂದ ಇಂದು ಎರಡನೇ ವರ್ಷದ ಕಾರ್ಯಕ್ರಮ ಮಾಡಲು ಸಾಧ್ಯವಾಗಿದೆ ಎಂದರು.

ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ ಬಂಕೇಶ್ವರ ಇದರ ಅಧ್ಯಕ್ಷ ಸುಬ್ರಹ್ಮಣ್ಯ ಎಚ್ ಸಮಾರಂಭದ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸ್ಥಳೀಯ 5 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಗೂ ಆಕಾಶವಾಣಿ ಮತ್ತು ದೂರದರ್ಶನ ಗಾಯಕಿ ಗೀತಾ ಬಂಕೇಶ್ವರ ಸನ್ಮಾನಿಸಲಾಯಿತು.

ಮುಖ್ಯಅತಿಥಿಗಳಾಗಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕ ಪ್ರಭಾಕರ ಎಸ್, ಬಂಕೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪಕ ಚಿತ್ರಾ, ಸ್ಥಳದಾನಿ ನಿವೃತ್ತ ಶಿಕ್ಷಕ ನಾಗೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಲಬ್ ನ ಸದಸ್ಯ ಸುರೇಂದ್ರ ಪೂಜಾರಿ ಸ್ವಾಗತಿಸಿ/ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ನಾಗರಾಜ್ ಕಾರ್ಯಕ್ರಮ ನಿರ್ವಹಿಸಿದರು. ಯೋಗೀಶ್ ವಂದಿಸಿದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 − one =

Latest news

24D Spin : L’ultime Manuel Complet du Gaming de Pari qui Révolutionne l’Expérience des Gamers

Table des matières Nos Mécanismes Essentiels de Ce Game Stratégie Idéale pour Maximiser Vos Gains Étude Complète des Versions Ce Qui Te Différencie...

24D Spin: Dit Ultieme Casino Spelervaring Voor Authentieke Overwinnaars

Overzicht Spelprincipe en Werking Doordachte Voordelen Terugbetalingspercentages en RTP Bonusfuncties plus Speciale Kenmerken Meest gestelde Vragen Spelprincipe en MechanicaHet spel verenigt de spanning van conventionele...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you