11.9 C
London
Friday, May 17, 2024
Homeಕ್ರಿಕೆಟ್ಗ್ರಾಮೀಣಜೀವನದಲ್ಲಿ ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಅಗತ್ಯ : ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಜಿ ನಾಯಕ್

ಜೀವನದಲ್ಲಿ ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಅಗತ್ಯ : ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಜಿ ನಾಯಕ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಬೈಂದೂರು : ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ ಬಂಕೇಶ್ವರ ಇವರ ಆಶ್ರಯದಲ್ಲಿ ದ್ವಿತೀಯ ವರ್ಷದ ಬೈಂದೂರು ತಾಲೂಕು ಮಟ್ಟದ ಹೊನಲು ಬೆಳಕಿನ “ಪುರುಷರ ಡಬಲ್ಸ್ ಶಟಲ್ ಪಂದ್ಯಾಟ ಎಸ್.ಎಮ್.ಬಿ.ಸಿ ಟ್ರೋಫಿ – 2020” ಶನಿವಾರ ಸಂಜೆ ಬಂಕೇಶ್ವರ ಮಹಾಕಾಳಿ ದೇವಸ್ಥಾನ ವಠಾರದಲ್ಲಿ ನಡೆಯಿತು.

ಬೈಂದೂರು ಆರಕ್ಷಕ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಜಿ ನಾಯಕ್ ಸಭಾ ಕಾರ್ಯಕ್ರಮ ಹಾಗೂ ಪಂದ್ಯಾಟದ ಕ್ರೀಡಾಂಗಣವನ್ನು ಉದ್ಘಾಟಿಸಿ, ಮಾತನಾಡಿ ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟಗಳ ಯಶಸ್ಸಿಗೆ ಸಹಕರಿಸಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಕೂಡಾ ಒಂದು ಒಂದು ಕಲೆ ಅಡಗಿರುತ್ತದೆ. ಸಾಕಷ್ಟು ಜನ ಕ್ರೀಡಾಯಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ. ಜೀವನದಲ್ಲಿ ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಅಗತ್ಯ. ಎಲ್ಲಾ ವಯೋಮಾನದವರಿಗೂ ಕ್ರೀಡೆ ದೈಹಿಕ ಕ್ಷಮತೆಯನ್ನು ಕೊಡುತ್ತದೆ ಎಂದರು.

ಕ್ಲಬ್ ನ ಗೌರವಾಧ್ಯಕ್ಷ ಉದಯ್ ಎಸ್. ಕೆ.ಆರ್.ಸಿ.ಎಲ್ ಅವರು ಮಾತನಾಡಿ, ಕಳೆದ ವರ್ಷ ಸ್ಥಾಪಿಸಿದ ಹೆಮ್ಮೆಯಿದೆ. ಕಳೆದ ವರ್ಷ ಯಾವುದೇ ದೇಣಿಗೆಯನ್ನು ಪಡೆಯದೆ ನಮ್ಮೆಲ್ಲರ ಯುವಕ ಕೈಗೊಡಿಸಿಕೊಂಡು ಶಟಲ್ ಪಂದ್ಯಾಟ ನಡೆಸಿದ್ದೇವೆ. ಆ ಕಾರ್ಯಕ್ರಮವೂ ಕೂಡಾ ಬಹಳ ಯಶ್ವಸಿಯಾಗಿದೆ. ಅದಕ್ಕೆಲ್ಲಾ ನಮ್ಮ ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ ನ ಪ್ರತಿಯೊಬ್ಬ ಸದಸ್ಯರು ಸಾಕಷ್ಟು ಶ್ರಮ ವಹಿಸಿದ ಕಾರಣದಿಂದ ಇಂದು ಎರಡನೇ ವರ್ಷದ ಕಾರ್ಯಕ್ರಮ ಮಾಡಲು ಸಾಧ್ಯವಾಗಿದೆ ಎಂದರು.

ಶ್ರೀ ಮಹಾಕಾಳಿ ಬ್ಯಾಡ್ಮಿಂಟನ್ ಕ್ಲಬ್ ಬಂಕೇಶ್ವರ ಇದರ ಅಧ್ಯಕ್ಷ ಸುಬ್ರಹ್ಮಣ್ಯ ಎಚ್ ಸಮಾರಂಭದ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸ್ಥಳೀಯ 5 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಗೂ ಆಕಾಶವಾಣಿ ಮತ್ತು ದೂರದರ್ಶನ ಗಾಯಕಿ ಗೀತಾ ಬಂಕೇಶ್ವರ ಸನ್ಮಾನಿಸಲಾಯಿತು.

ಮುಖ್ಯಅತಿಥಿಗಳಾಗಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕ ಪ್ರಭಾಕರ ಎಸ್, ಬಂಕೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪಕ ಚಿತ್ರಾ, ಸ್ಥಳದಾನಿ ನಿವೃತ್ತ ಶಿಕ್ಷಕ ನಾಗೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಲಬ್ ನ ಸದಸ್ಯ ಸುರೇಂದ್ರ ಪೂಜಾರಿ ಸ್ವಾಗತಿಸಿ/ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ನಾಗರಾಜ್ ಕಾರ್ಯಕ್ರಮ ನಿರ್ವಹಿಸಿದರು. ಯೋಗೀಶ್ ವಂದಿಸಿದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

10 − seven =