8.8 C
London
Tuesday, April 23, 2024
Homeಕ್ರಿಕೆಟ್ದುಬೈ-ಕ್ರೀಡೆ ಜೀವನದ ಅವಿಭಾಜ್ಯ ಅಂಗ-ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

ದುಬೈ-ಕ್ರೀಡೆ ಜೀವನದ ಅವಿಭಾಜ್ಯ ಅಂಗ-ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕರ್ನಾಟಕ ಸಂಘ ಶಾರ್ಜಾ ಯುಎಇ ಇವರ ಆಶ್ರಯದಲ್ಲಿ ನಡೆದ ಯುಎಇ ಮಟ್ಟದ ಪುರುಷರ ವಾಲಿಬಾಲ್ , ಪುರುಷರ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಾಟ , 27 ಭಾನುವಾರ ಅಜ್ಮನ್ ಅಕಾಡೆಮಿಯಲ್ಲಿ ನಡೆಯಿತು.
ಈ ಸಮಾರಂಭದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘ ಶಾರ್ಜಾದ ಅಧ್ಯಕ್ಷರು ಶ್ರೀ ಎಂ.ಇ.ಮೂಳೂರು. ಮುಖ್ಯ ಅತಿಥಿಗಳಾಗಿ ಸಂಘದ ಪ್ರಮುಖ ಸಲಹೆಗಾರರು ಮತ್ತು ಉದಾರ ದಾನಿಗಳು ಸಮಾಜಸೇವಕರು ಆಗಿರುವ ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಫಾರ್ಚುನ್ ಗ್ರೂಪ್ಸ್ ಆಫ್ ಹೋಟೆಲ್ಸ್, ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣ ಸ್ವಾಮಿಗಳು  ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶ್ರೀ ಎಂ.ಎನ್.ಸುರೇಶ್  ಮತ್ತು ಸಂಘದ ಪದಾಧಿಕಾರಿಗಳು , ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಕ್ರೀಡಾ ಜೀವನದ ಅವಿಭಾಜ್ಯ ಅಂಗ ಕ್ರೀಡಾ ಚಟುವಟಿಕೆಗಳಿಗೆ ನನ್ನ ಸಹಕಾರ ಮತ್ತು ಬೆಂಬಲ ಇದ್ದೇ ಇರುತ್ತದೆ ಎಂದು ಎಲ್ಲಾ ಕ್ರೀಡಾ ಪಟುಗಳಿಗೂ ಶುಭ ಹಾರೈಸಿದರು.
ಬೆಳಿಗ್ಗೆ ಪ್ರಾರಂಭಗೊಂಡ ಕ್ರೀಡಾ ಚಟುವಟಿಕೆ ಮುಸಂಜೆವರೆಗೆ ನಡೆಯಿತು. ಯುಎಇ 15ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಲೀಗ್ ಮಾದರಿಯ ಪಂದ್ಯಾಟದಲ್ಲಿ ಪುರುಷರ ವಾಲಿಬಾಲ್ ವಿಭಾಗದಲ್ಲಿ  ಟೀಮ್ ಡಿ3 ವಿಜಯಶಾಲಿಗಳಾದರೆ ಪುರುಷರ ತ್ರೋಬಾಲ್ ವಿಭಾಗದಲ್ಲಿ ಕೋಸ್ಟಲ್ ಫ್ರೆಂಡ್ಸ್ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಬಂಟ್ಸ್ ದುಬೈ ವಿಜಯಿಶಾಲಿ ಆಗುವ ಮೂಲಕ ಮಯೂರ  ಕಪ್ ತನ್ನದಾಗಿಸಿಕೊಂಡಿದೆ.
ಪಂದ್ಯಾಟದ ಕಾರ್ಯಕ್ರಮ ನಿರೂಪಣೆಯನ್ನು ಸ್ಪೋರ್ಟ್ಸ್ ಕನ್ನಡ ಗಲ್ಫ್ ಪ್ರತಿನಿಧಿ ವಿಘ್ನೇಶ್ ಕುಂದಾಪುರ ನಡೆಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four × 4 =